Homeಕರ್ನಾಟಕಕುಸುಮಾ ವಿರುದ್ಧ ಪ್ರಚಾರಕ್ಕೆ 80 ಲಕ್ಷ ಬೇಡಿಕೆ ಇಟ್ಟ ಡಿ.ಕೆ.ರವಿ ತಾಯಿ?; ವಿಡಿಯೊ ವೈರಲ್

ಕುಸುಮಾ ವಿರುದ್ಧ ಪ್ರಚಾರಕ್ಕೆ 80 ಲಕ್ಷ ಬೇಡಿಕೆ ಇಟ್ಟ ಡಿ.ಕೆ.ರವಿ ತಾಯಿ?; ವಿಡಿಯೊ ವೈರಲ್

ಸದರಿ ವಿಡಿಯೊ ಹಳೆಯದೆಂದು ಹೇಳಲಾಗುತ್ತಿದೆ, ಆದರೆ ಇಲ್ಲಿನ ದಾಖಲಾಗಿರುವ ಮಾತುಗಳು ಚರ್ಚೆಗೆ ಗ್ರಾಸವಾಗಿವೆ.

- Advertisement -
- Advertisement -

ಆತ್ಮಹತ್ಯೆಗೆ ಶರಣಾದ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪನವರು ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಬೆನ್ನಲ್ಲೇ ಸ್ಪೋಟಕ ಆರೋಪಗಳನ್ನು ಹೊತ್ತ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಬಿಜೆಪಿ ಪರ ಪ್ರಚಾರ ಮಾಡಲು ಮತ್ತು ಕುಸುಮಾ ವಿರುದ್ಧ ಮಾತನಾಡಲು ಡಿ.ಕೆ.ರವಿ ಅವರ ತಾಯಿ ಗೌರಮ್ಮನವರು 80 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ವಿಡಿಯೊ ಹಂಚಿಕೆಯಾಗುತ್ತಿದೆ. ಸದರಿ ವಿಡಿಯೊವನ್ನು ‘ಪೀಪಲ್‌ ಮೀಡಿಯಾ’ ಯೂಟ್ಯೂಬ್‌ ಚಾನೆಲ್‌ನಲ್ಲಿಯೂ ಪ್ರಕಟ ಮಾಡಲಾಗಿದೆ.

ಬಿಜೆಪಿ ಪರ ಪ್ರಚಾರ ಮಾಡುವಂತೆ ಹಾಗೂ ಕುಸುಮಾ ವಿರುದ್ಧ ಮಾತನಾಡುವಂತೆ ಇಬ್ಬರು ವ್ಯಕ್ತಿಗಳು ಕೇಳಿಕೊಳ್ಳುತ್ತಿರುವಾಗ ಡಿ.ಕೆ.ರವಿ ತಾಯಿ ಗೌರಮ್ಮ ಈ ರೀತಿ ಮಾತನಾಡಿದ್ದಾರೆಂದು ಆರೋಪಿಸಲಾಗಿದೆ. ಈ ವಿಡಿಯೊವನ್ನು ಸೆರೆ ಹಿಡಿದಿರುವವರು ಯಾರೆಂದು ಪತ್ತೆಯಾಗಿಲ್ಲ. ಇಬ್ಬರು ಪುರುಷರು ಈ ವಿಡಿಯೊದಲ್ಲಿ ಮಾತನಾಡಿದ್ದಾರೆ. ಇದು ಹಳೆಯ ವಿಡಿಯೊವೆಂದೂ ಹೇಳಲಾಗುತ್ತಿದೆ. ಆದರೆ ಚುನಾವಣೆ ಹೊತ್ತಿನಲ್ಲಿ ವೈರಲ್ ಆಗುತ್ತಿದೆ.

ಸಂಭಾಷಣೆಯಲ್ಲಿ ಏನಿದೆ?

ಮಹಿಳೆ: ಏನ್ ಮಾಡೋಕೆ ಮಾಡಿದ್ದೀರಪ್ಪ?

ಪುರುಷ 1: ಕುಸುಮಾ ವಿರುದ್ಧ ಕ್ಯಾನ್ವಾಸ್ ಮಾಡುತ್ತಿದ್ದೇವೆ. ನೀವು ಬಂದು ನಮ್ಮ ಪಕ್ಷಕ್ಕೆ ವೋಟ್ ಮಾಡುವಂತೆ ಸೆಂಟಿಮೆಂಟ್‌ನಲ್ಲಿ ಮಾತನಾಡಬೇಕು. ನಮ್ಮದೇ ಚಾನೆಲ್ ಬರುತ್ತದೆ. ಟಿವಿಯವರು ಹೇಳಿಕೊಡುತ್ತಾರೆ. ಅವರು ಹೇಳಿದಂತೆ ಅತ್ತು, ನೋವುಗಳನ್ನು ಹೇಳಿಕೊಂಡು, ಕುಸುಮಾ ಬಗ್ಗೆ ಕೆಟ್ಟದ್ದಾಗಿ ಮಾತನಾಡಬೇಕು. ನೀವು ಮಾತನಾಡಿದರೆ ಜನ ಕನ್ವಿನ್ಸ್‌ ಆಗ್ತಾರೆ.

ಮಹಿಳೆ: ನೀವು ಹೇಳಿದಂತೆ ಮಾಡಿದಾಗ ತಾನೇ, ನಾವು ಮಾಡೋದು?

ಪುರುಷ 1: ನೀವು ಬಾಯಿ ಬಿಟ್ಟು ಹೇಳಿ. ನೀವು ಹೇಳಿದಂತೆ ಮಾಡೋಣ.

ಮಹಿಳೆ: ಅವತ್ತೇ ಹೇಳಿದೆವಲ್ಲ.

ಪುರುಷ 1: ಈಗ ಸಡನ್ನಾಗಿ ರಿಜಿಸ್ಟ್ರೇಷನ್ ಮಾಡಿಸೋದು ಕಷ್ಟವಾಗುತ್ತದೆ.

ಮಹಿಳೆ: ಎಲ್ಲಾ ಒಂದೇ ದಿನಕ್ಕೆ ಆಗುತ್ತದೆ.

ಪುರುಷ 1: ಈಗ ನಾವು ಒಂದು ಮನೆ ನೋಡಬೇಕು.

ಮಹಿಳೆ: ಮೂರು ದಿನದಿಂದ ನೀವು ಮಾಡಿದ್ದು ಅದೇ ಕೆಲಸ ತಾನೇ?

ಪುರುಷ 1: ಅಣ್ಣನವರ ಹತ್ತಿರ ಒಂದು ಸಲ ಕೇಳಿಬಿಡೋಣ, ಏನ್ ಹೇಳ್ತಾರೆ…

(ಮಧ್ಯದಲ್ಲಿ ಮತ್ತೊಬ್ಬ ವ್ಯಕ್ತಿ ಮಾತನಾಡುತ್ತಾರೆ)

ಪುರುಷ 2: ಅಷ್ಟರಲ್ಲಿ ಮಾಡ್ತೀವಿ, ಇಲ್ಲ ಅಂತ ಹೇಳೋಲ್ಲ. ಆಗಲಿಲ್ಲ ಅಂದ್ರೆ ದುಡ್ಡು ಕೊಟ್ಟಿರುತ್ತೇವಲ್ಲ. ರಿಟರ್ನ್ ಮಾಡಿ, ಆಮೇಲೆ ರಿಜಿಸ್ಟರ್‌ ಮಾಡಿಸಿಕೊಳ್ಳಿ ಅಷ್ಟೇ. ಅಷ್ಟರೊಳಗೆ ಆದ್ರೆ ಮಾಡಿಸೋಣ, ತೊಂದರೆ ಇಲ್ಲ.

ಮಹಿಳೆ: ಹದಿನಾರನೇ ತಾರೀಖಿನೊಳಗೆ ಆದ್ರೆ ಮಾಡಿ, ಆಗಲಿಲ್ಲ ಅಂದ್ರೆ ಮನೆಗೆ ಆಗುವಷ್ಟು ಅಮೌಂಟ್‌ ತಲುಪಿಸಿ.

ಪುರುಷ 1: ಅಮೌಂಟ್ ಅಂದ್ರೆ ಎಷ್ಟು ಕೊಡಬೇಕು ಅಂತ ನೀವು ಹೇಳಬೇಕಲ್ಲವಾ?

ಮಹಿಳೆ: ನಿಮಗೆ ಹೇಳಬೇಕೇ ನಾವು? ನಿಮಗೆ ಗೊತ್ತಾಲ್ಲವಾ?

ಪುರುಷ 1: ನಾವು ಅಮೌಂಟ್ ತಲುಪಿಸಬೇಕಲ್ಲ, ಅದಕ್ಕೆ. ಎಷ್ಟು ಲಕ್ಷ ಅಂತ ಹೇಳಿಬಿಟ್ರೆ…

ಮಹಿಳೆ: ಮನೆಗೆಯೇ ನಲವತ್ತು, ಐವತ್ತು ಆಗುತ್ತದೆ. ಸೈಟ್‌ಗೆ ನಲವತ್ತು ಆಗುತ್ತದೆ. ಕಟ್ಟೋಕೆ ನಲವತ್ತು, ಐವತ್ತು ಬೇಕಾಗುತ್ತದೆ. ನಾವು ಹೆಂಗೆ ಮಾಡ್ತೀವಿ, ಹಂಗೆಲ್ಲ ಇರುತ್ತದೆ. ಗೊತ್ತಗದೆ ಏನಿಲ್ಲ.

ಪುರುಷ 1: ನಾಮಿನೇಷನ್ ಆಗುವುದಕ್ಕಿಂತ ಮುಂಚೆ ನಾವು ನಲವತ್ತು ಲಕ್ಷ ನೀಡಬೇಕು.

ಮಹಿಳೆ: ಏನ್ ಮಾಡಬೇಕು ಮಾಡಿ. ನೀವು ಹೇಳಿದ ದಿನ ರೆಡಿಯಾಗಿ ನಾನು ಬರ್ತಿನಿ.

ಪುರುಷ 1: ನೀವು ಬಿಜೆಪಿ ಪಕ್ಷಕ್ಕೆ ಮಾತ್ರ ಮಾಡಬೇಕು, ಪಕ್ಷೇತರರಿಗೆ, ಇನ್ಯಾರಿಗೂ ಮಾಡುವಂತಿಲ್ಲ. ನಿಮ್ಮ ಪಾಸ್‌ಬುಕ್ ಕೊಡಿ. ನಾವೀಗ ಟೋಕನ್ ಅಡ್ವನ್ಸ್‌ ಅಂತ ಕೊಟ್ಟಿರುತ್ತೇವೆ. ನಿಮ್ಮ ಅಕೌಂಟಿಗೆ ಡೈರೆಕ್ಟಾಗಿ ಹಣ ಹಾಕುತ್ತೇವೆ.

(ಹಣ ಎಣಿಸಿ ಕೊಡುತ್ತಿರುವುದು ವಿಡಿಯೊದಲ್ಲಿ ಬ್ಲರ್‌ ಆಗಿದೆ.)

ಪುರುಷ 1: 25,000 ಇದೆ. ಇದನ್ನು ಅಡ್ವಾನ್ಸ್ ಅಂತ ಕೊಟ್ಟಿರುತ್ತೇವೆ.

ಪುರುಷ 2: ನೀವು ಮತ್ತೆ ಇನ್ಯಾರಿಗೂ ಒಪ್ಪಿಕೊಳ್ಳಬಾರದು ಅಷ್ಟೆ.

ಮಹಿಳೆ: ಜಾಸ್ತಿ ಕೊಡಿ ಅಂತಾನೂ ನಾನು ಕೇಳಲ್ಲ. ಒಂದು ಮನೆಗೆ, ಒಂದು ಸೈಟಿಗೆ ಏನಾಗುತ್ತದೆ, ಅಷ್ಟು ಕೊಟ್ಟುಬಿಡಿ ಸಾಕು.

ಪುರುಷ 1: ನೀವು ಆದಷ್ಟು ಕುಸುಮಾ ಅವರ ಇಮೇಜ್ ಡ್ಯಾಮೇಜ್ ಆಗುವಂತೆ ಸ್ಟೇಟ್‌ಮೆಂಟ್ ಕೊಡಬೇಕು. ಆಮೇಲೆ ನಾವು ಕ್ಲಿಯರ್ ಮಾಡುತ್ತೇವೆ.

ಮಹಿಳೆ: ಅದನ್ನೇ ನಾನು ಮಾಡೋದು. ನೀವು ನಮಗೆ ಮಾಡಿ, ನಾನು ನಿಮಗೆ ಮಾಡ್ತೀನಿ ಅಷ್ಟೇ….

ಪುರುಷ 1: ನೀವು ಈಗ ಏನ್ ಹೇಳಿದ್ದೀರೋ ಅದನ್ನು ಮಾಡೋಕೆ ನಾವು ಒಪ್ಪಿಕೊಂಡಿದ್ದೇವೆ. ಕ್ಲಿಯರ್‌ ಮಾಡಿ ಕೊಡುತ್ತೇವೆ. ನಿಮ್ಮ ಪಾಸ್‌ಬುಕ್‌ಗೆ ಹಣ ಟ್ರಾನ್ಸ್‌ಫರ್‌ ಮಾಡ್ತೀವಿ. ನಾವು ಹೇಳೋ ಥರ ನೀವು ಅವರ ವಿರುದ್ಧವಾಗಿ ಸ್ಟೇಟ್‌ಮೆಂಟ್ ಕೊಡಬೇಕು.

ಮಹಿಳೆ 1: ನೋಡಪ್ಪ 40 ಮತ್ತು 40 ಕೊಡಿ.

ಪುರುಷ 1: ಅಂದ್ರೆ 40 ಲಕ್ಷ.

ಮಹಿಳೆ: ಸೈಟಿಗೆ 40, ಕಟ್ಟೋಕೆ 40.

ಪುರುಷ 2: 80 ಪೂರ್ತಿ ಈಗಲೇ ಹಾಕಬೇಕಾ? 40 ಈಗ ಹಾಕಿ, ಇನ್ನುಳಿದ 40 ಆಮೇಲೆ ಹಾಕಬಹುದಾ? ಎಲೆಕ್ಷನ್ ಆದಮೇಲೆ ಹಾಕ್ಬೋದಾ?

ಮಹಿಳೆ: ಎಲೆಕ್ಷನ್ ಆದಮೇಲೆ ಹಾಕ್ತೀನಿ ಅನ್ನೋದು ಆಗೋ ಕೆಲ್ಸನಾ?

ಪುರುಷ 2: ಸರಿಯಮ್ಮ ಆಯ್ತು.

ಪುರುಷ 1: ಸರಿಯಮ್ಮ ಆಯ್ತು. ಇನ್ನೆರಡು ದಿನಗಳಲ್ಲಿ ನಿಮ್ಮ ಅಕೌಂಟಿಗೆ ಹಣ ಜಮಾ ಮಾಡಿಸಿ, ಆಮೇಲೆ ಟಿವಿಯವರನ್ನು ಕರೆದುಕೊಂಡು ಬಂದು ನಿಮ್ಮಿಂದ ಮಾತನಾಡಿಸುತ್ತೇವೆ. ಬೇರೆ ಚಾನೆಲ್‌ನವರು ಇಂಟರ್‌ವ್ಯೂಗೆ ಕಳಿಸಿದಾಗ ನಾವೇ ಕಾರು ಕಳಿಸುತ್ತೇವೆ. ನಾವು ಏನು ಬರೆದುಕೊಡುತ್ತೇವೆಯೋ ಅದನ್ನು ನೀವು ಟಿವಿಯವರಿಗೆ ಹೇಳಿ.

ಮಹಿಳೆ: ಅದನ್ನು ನೀವು ಏನು ಹೇಳಿಕೊಡುವುದು ಬೇಕಿಲ್ಲ ಅಂತ ನಾನು ಹೇಳುತ್ತಿದ್ದೇನೆಲ್ಲವೇ? ಅಮ್ಮ ಹೆಂಗ್ ಮಾತನಾಡ್ತಾರೆ ಅನ್ನೋದನ್ನು ಆವಾಗಾದರೂ ನೋಡಿಕೊಳ್ಳಿ. ಸರಿಯೇ? ಎಲ್ಲವನ್ನೂ ನನ್ನ ಅಕೌಂಟಿಗೆ ಹಾಕಬೇಡಿ. (ಇನ್ನೊಬ್ಬರ) ಅಕೌಂಟ್ ನಂಬರ್‌ ಕೂಡ ಕೊಡುತ್ತೇನೆ. ಇಬ್ಬರ ಅಕೌಂಟಿಗೂ ಹಾಕ್ಬಿಡಿ.

ಪುರುಷ 2: ಸರಿಯಮ್ಮ.

ಪುರುಷ 1: ಪಾಸ್‌ಬುಕ್ ಕೊಡಿ, ಫೋಟೋ ತೆಗೆದುಕೊಳ್ತೀನಿ. ಬ್ಯಾಂಕ್‌ನಿಂದ ಆರ್‌ಟಿಜಿಎಸ್‌ ಮಾಡಿಬಿಟ್ಟು ನಿಮಗೆ ಫೋನ್ ಮಾಡ್ತೀವಿ.

ಮಹಿಳೆ: ಇದ್ದರೆ 40* 50 ಸೈಟ್‌ನೇ ಕೊಟ್ಟುಬಿಡಿ. ಮಿಕ್ಕಿದ್ದು ಅಕೌಂಟಿಗೆ ಹಾಕಿಬಿಡಿ.

ಪುರುಷ 1: ನಾವು ಅಮೌಂಟ್ ಕೊಟ್ಟಾದ ಮೇಲೆ ನಾವು ಕರೆದಲ್ಲಿಗೆ ನೀವು ಕ್ಯಾನ್ವಸ್‌ಗೆ ಬರಬೇಕಮ್ಮ.

ಮಹಿಳೆ: ಸೌಲಭ್ಯ ಮಾಡಿ, ಇವತ್ತೇ ಕರೆದುಕೊಂಡು ಹೋಗಿ, ನನಗೇನು?

ಪುರುಷ 1: ಹೊರಗಡೆ ಏನೂ ಗೊತ್ತಾಗಬಾರದಮ್ಮ. ದುಡ್ಡು ಇಸ್ಕೊಂಡು ಸೊಸೆ ವಿರುದ್ಧ ಹೀಗೆ ಮಾತನಾಡುತ್ತಿದ್ದಾರೆಂದು.

ಮಹಿಳೆ: ಏನೂ ಗೊತ್ತಾಗಲ್ಲ.

-ಹೀಗೆ ಮಾತನಾಡಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಪ್ರಸ್ತುತ ನಡೆಯುತ್ತಿರುವ ಚುನಾವಣೆಯಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಜೆಪಿಯ ಮುನಿರತ್ನ ಅವರ ವಿರುದ್ಧ ಕುಸುಮಾ ಸ್ಪರ್ಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...