Homeಕರ್ನಾಟಕಕುಸುಮಾ ವಿರುದ್ಧ ಪ್ರಚಾರಕ್ಕೆ 80 ಲಕ್ಷ ಬೇಡಿಕೆ ಇಟ್ಟ ಡಿ.ಕೆ.ರವಿ ತಾಯಿ?; ವಿಡಿಯೊ ವೈರಲ್

ಕುಸುಮಾ ವಿರುದ್ಧ ಪ್ರಚಾರಕ್ಕೆ 80 ಲಕ್ಷ ಬೇಡಿಕೆ ಇಟ್ಟ ಡಿ.ಕೆ.ರವಿ ತಾಯಿ?; ವಿಡಿಯೊ ವೈರಲ್

ಸದರಿ ವಿಡಿಯೊ ಹಳೆಯದೆಂದು ಹೇಳಲಾಗುತ್ತಿದೆ, ಆದರೆ ಇಲ್ಲಿನ ದಾಖಲಾಗಿರುವ ಮಾತುಗಳು ಚರ್ಚೆಗೆ ಗ್ರಾಸವಾಗಿವೆ.

- Advertisement -
- Advertisement -

ಆತ್ಮಹತ್ಯೆಗೆ ಶರಣಾದ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪನವರು ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಬೆನ್ನಲ್ಲೇ ಸ್ಪೋಟಕ ಆರೋಪಗಳನ್ನು ಹೊತ್ತ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಬಿಜೆಪಿ ಪರ ಪ್ರಚಾರ ಮಾಡಲು ಮತ್ತು ಕುಸುಮಾ ವಿರುದ್ಧ ಮಾತನಾಡಲು ಡಿ.ಕೆ.ರವಿ ಅವರ ತಾಯಿ ಗೌರಮ್ಮನವರು 80 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ವಿಡಿಯೊ ಹಂಚಿಕೆಯಾಗುತ್ತಿದೆ. ಸದರಿ ವಿಡಿಯೊವನ್ನು ‘ಪೀಪಲ್‌ ಮೀಡಿಯಾ’ ಯೂಟ್ಯೂಬ್‌ ಚಾನೆಲ್‌ನಲ್ಲಿಯೂ ಪ್ರಕಟ ಮಾಡಲಾಗಿದೆ.

ಬಿಜೆಪಿ ಪರ ಪ್ರಚಾರ ಮಾಡುವಂತೆ ಹಾಗೂ ಕುಸುಮಾ ವಿರುದ್ಧ ಮಾತನಾಡುವಂತೆ ಇಬ್ಬರು ವ್ಯಕ್ತಿಗಳು ಕೇಳಿಕೊಳ್ಳುತ್ತಿರುವಾಗ ಡಿ.ಕೆ.ರವಿ ತಾಯಿ ಗೌರಮ್ಮ ಈ ರೀತಿ ಮಾತನಾಡಿದ್ದಾರೆಂದು ಆರೋಪಿಸಲಾಗಿದೆ. ಈ ವಿಡಿಯೊವನ್ನು ಸೆರೆ ಹಿಡಿದಿರುವವರು ಯಾರೆಂದು ಪತ್ತೆಯಾಗಿಲ್ಲ. ಇಬ್ಬರು ಪುರುಷರು ಈ ವಿಡಿಯೊದಲ್ಲಿ ಮಾತನಾಡಿದ್ದಾರೆ. ಇದು ಹಳೆಯ ವಿಡಿಯೊವೆಂದೂ ಹೇಳಲಾಗುತ್ತಿದೆ. ಆದರೆ ಚುನಾವಣೆ ಹೊತ್ತಿನಲ್ಲಿ ವೈರಲ್ ಆಗುತ್ತಿದೆ.

ಸಂಭಾಷಣೆಯಲ್ಲಿ ಏನಿದೆ?

ಮಹಿಳೆ: ಏನ್ ಮಾಡೋಕೆ ಮಾಡಿದ್ದೀರಪ್ಪ?

ಪುರುಷ 1: ಕುಸುಮಾ ವಿರುದ್ಧ ಕ್ಯಾನ್ವಾಸ್ ಮಾಡುತ್ತಿದ್ದೇವೆ. ನೀವು ಬಂದು ನಮ್ಮ ಪಕ್ಷಕ್ಕೆ ವೋಟ್ ಮಾಡುವಂತೆ ಸೆಂಟಿಮೆಂಟ್‌ನಲ್ಲಿ ಮಾತನಾಡಬೇಕು. ನಮ್ಮದೇ ಚಾನೆಲ್ ಬರುತ್ತದೆ. ಟಿವಿಯವರು ಹೇಳಿಕೊಡುತ್ತಾರೆ. ಅವರು ಹೇಳಿದಂತೆ ಅತ್ತು, ನೋವುಗಳನ್ನು ಹೇಳಿಕೊಂಡು, ಕುಸುಮಾ ಬಗ್ಗೆ ಕೆಟ್ಟದ್ದಾಗಿ ಮಾತನಾಡಬೇಕು. ನೀವು ಮಾತನಾಡಿದರೆ ಜನ ಕನ್ವಿನ್ಸ್‌ ಆಗ್ತಾರೆ.

ಮಹಿಳೆ: ನೀವು ಹೇಳಿದಂತೆ ಮಾಡಿದಾಗ ತಾನೇ, ನಾವು ಮಾಡೋದು?

ಪುರುಷ 1: ನೀವು ಬಾಯಿ ಬಿಟ್ಟು ಹೇಳಿ. ನೀವು ಹೇಳಿದಂತೆ ಮಾಡೋಣ.

ಮಹಿಳೆ: ಅವತ್ತೇ ಹೇಳಿದೆವಲ್ಲ.

ಪುರುಷ 1: ಈಗ ಸಡನ್ನಾಗಿ ರಿಜಿಸ್ಟ್ರೇಷನ್ ಮಾಡಿಸೋದು ಕಷ್ಟವಾಗುತ್ತದೆ.

ಮಹಿಳೆ: ಎಲ್ಲಾ ಒಂದೇ ದಿನಕ್ಕೆ ಆಗುತ್ತದೆ.

ಪುರುಷ 1: ಈಗ ನಾವು ಒಂದು ಮನೆ ನೋಡಬೇಕು.

ಮಹಿಳೆ: ಮೂರು ದಿನದಿಂದ ನೀವು ಮಾಡಿದ್ದು ಅದೇ ಕೆಲಸ ತಾನೇ?

ಪುರುಷ 1: ಅಣ್ಣನವರ ಹತ್ತಿರ ಒಂದು ಸಲ ಕೇಳಿಬಿಡೋಣ, ಏನ್ ಹೇಳ್ತಾರೆ…

(ಮಧ್ಯದಲ್ಲಿ ಮತ್ತೊಬ್ಬ ವ್ಯಕ್ತಿ ಮಾತನಾಡುತ್ತಾರೆ)

ಪುರುಷ 2: ಅಷ್ಟರಲ್ಲಿ ಮಾಡ್ತೀವಿ, ಇಲ್ಲ ಅಂತ ಹೇಳೋಲ್ಲ. ಆಗಲಿಲ್ಲ ಅಂದ್ರೆ ದುಡ್ಡು ಕೊಟ್ಟಿರುತ್ತೇವಲ್ಲ. ರಿಟರ್ನ್ ಮಾಡಿ, ಆಮೇಲೆ ರಿಜಿಸ್ಟರ್‌ ಮಾಡಿಸಿಕೊಳ್ಳಿ ಅಷ್ಟೇ. ಅಷ್ಟರೊಳಗೆ ಆದ್ರೆ ಮಾಡಿಸೋಣ, ತೊಂದರೆ ಇಲ್ಲ.

ಮಹಿಳೆ: ಹದಿನಾರನೇ ತಾರೀಖಿನೊಳಗೆ ಆದ್ರೆ ಮಾಡಿ, ಆಗಲಿಲ್ಲ ಅಂದ್ರೆ ಮನೆಗೆ ಆಗುವಷ್ಟು ಅಮೌಂಟ್‌ ತಲುಪಿಸಿ.

ಪುರುಷ 1: ಅಮೌಂಟ್ ಅಂದ್ರೆ ಎಷ್ಟು ಕೊಡಬೇಕು ಅಂತ ನೀವು ಹೇಳಬೇಕಲ್ಲವಾ?

ಮಹಿಳೆ: ನಿಮಗೆ ಹೇಳಬೇಕೇ ನಾವು? ನಿಮಗೆ ಗೊತ್ತಾಲ್ಲವಾ?

ಪುರುಷ 1: ನಾವು ಅಮೌಂಟ್ ತಲುಪಿಸಬೇಕಲ್ಲ, ಅದಕ್ಕೆ. ಎಷ್ಟು ಲಕ್ಷ ಅಂತ ಹೇಳಿಬಿಟ್ರೆ…

ಮಹಿಳೆ: ಮನೆಗೆಯೇ ನಲವತ್ತು, ಐವತ್ತು ಆಗುತ್ತದೆ. ಸೈಟ್‌ಗೆ ನಲವತ್ತು ಆಗುತ್ತದೆ. ಕಟ್ಟೋಕೆ ನಲವತ್ತು, ಐವತ್ತು ಬೇಕಾಗುತ್ತದೆ. ನಾವು ಹೆಂಗೆ ಮಾಡ್ತೀವಿ, ಹಂಗೆಲ್ಲ ಇರುತ್ತದೆ. ಗೊತ್ತಗದೆ ಏನಿಲ್ಲ.

ಪುರುಷ 1: ನಾಮಿನೇಷನ್ ಆಗುವುದಕ್ಕಿಂತ ಮುಂಚೆ ನಾವು ನಲವತ್ತು ಲಕ್ಷ ನೀಡಬೇಕು.

ಮಹಿಳೆ: ಏನ್ ಮಾಡಬೇಕು ಮಾಡಿ. ನೀವು ಹೇಳಿದ ದಿನ ರೆಡಿಯಾಗಿ ನಾನು ಬರ್ತಿನಿ.

ಪುರುಷ 1: ನೀವು ಬಿಜೆಪಿ ಪಕ್ಷಕ್ಕೆ ಮಾತ್ರ ಮಾಡಬೇಕು, ಪಕ್ಷೇತರರಿಗೆ, ಇನ್ಯಾರಿಗೂ ಮಾಡುವಂತಿಲ್ಲ. ನಿಮ್ಮ ಪಾಸ್‌ಬುಕ್ ಕೊಡಿ. ನಾವೀಗ ಟೋಕನ್ ಅಡ್ವನ್ಸ್‌ ಅಂತ ಕೊಟ್ಟಿರುತ್ತೇವೆ. ನಿಮ್ಮ ಅಕೌಂಟಿಗೆ ಡೈರೆಕ್ಟಾಗಿ ಹಣ ಹಾಕುತ್ತೇವೆ.

(ಹಣ ಎಣಿಸಿ ಕೊಡುತ್ತಿರುವುದು ವಿಡಿಯೊದಲ್ಲಿ ಬ್ಲರ್‌ ಆಗಿದೆ.)

ಪುರುಷ 1: 25,000 ಇದೆ. ಇದನ್ನು ಅಡ್ವಾನ್ಸ್ ಅಂತ ಕೊಟ್ಟಿರುತ್ತೇವೆ.

ಪುರುಷ 2: ನೀವು ಮತ್ತೆ ಇನ್ಯಾರಿಗೂ ಒಪ್ಪಿಕೊಳ್ಳಬಾರದು ಅಷ್ಟೆ.

ಮಹಿಳೆ: ಜಾಸ್ತಿ ಕೊಡಿ ಅಂತಾನೂ ನಾನು ಕೇಳಲ್ಲ. ಒಂದು ಮನೆಗೆ, ಒಂದು ಸೈಟಿಗೆ ಏನಾಗುತ್ತದೆ, ಅಷ್ಟು ಕೊಟ್ಟುಬಿಡಿ ಸಾಕು.

ಪುರುಷ 1: ನೀವು ಆದಷ್ಟು ಕುಸುಮಾ ಅವರ ಇಮೇಜ್ ಡ್ಯಾಮೇಜ್ ಆಗುವಂತೆ ಸ್ಟೇಟ್‌ಮೆಂಟ್ ಕೊಡಬೇಕು. ಆಮೇಲೆ ನಾವು ಕ್ಲಿಯರ್ ಮಾಡುತ್ತೇವೆ.

ಮಹಿಳೆ: ಅದನ್ನೇ ನಾನು ಮಾಡೋದು. ನೀವು ನಮಗೆ ಮಾಡಿ, ನಾನು ನಿಮಗೆ ಮಾಡ್ತೀನಿ ಅಷ್ಟೇ….

ಪುರುಷ 1: ನೀವು ಈಗ ಏನ್ ಹೇಳಿದ್ದೀರೋ ಅದನ್ನು ಮಾಡೋಕೆ ನಾವು ಒಪ್ಪಿಕೊಂಡಿದ್ದೇವೆ. ಕ್ಲಿಯರ್‌ ಮಾಡಿ ಕೊಡುತ್ತೇವೆ. ನಿಮ್ಮ ಪಾಸ್‌ಬುಕ್‌ಗೆ ಹಣ ಟ್ರಾನ್ಸ್‌ಫರ್‌ ಮಾಡ್ತೀವಿ. ನಾವು ಹೇಳೋ ಥರ ನೀವು ಅವರ ವಿರುದ್ಧವಾಗಿ ಸ್ಟೇಟ್‌ಮೆಂಟ್ ಕೊಡಬೇಕು.

ಮಹಿಳೆ 1: ನೋಡಪ್ಪ 40 ಮತ್ತು 40 ಕೊಡಿ.

ಪುರುಷ 1: ಅಂದ್ರೆ 40 ಲಕ್ಷ.

ಮಹಿಳೆ: ಸೈಟಿಗೆ 40, ಕಟ್ಟೋಕೆ 40.

ಪುರುಷ 2: 80 ಪೂರ್ತಿ ಈಗಲೇ ಹಾಕಬೇಕಾ? 40 ಈಗ ಹಾಕಿ, ಇನ್ನುಳಿದ 40 ಆಮೇಲೆ ಹಾಕಬಹುದಾ? ಎಲೆಕ್ಷನ್ ಆದಮೇಲೆ ಹಾಕ್ಬೋದಾ?

ಮಹಿಳೆ: ಎಲೆಕ್ಷನ್ ಆದಮೇಲೆ ಹಾಕ್ತೀನಿ ಅನ್ನೋದು ಆಗೋ ಕೆಲ್ಸನಾ?

ಪುರುಷ 2: ಸರಿಯಮ್ಮ ಆಯ್ತು.

ಪುರುಷ 1: ಸರಿಯಮ್ಮ ಆಯ್ತು. ಇನ್ನೆರಡು ದಿನಗಳಲ್ಲಿ ನಿಮ್ಮ ಅಕೌಂಟಿಗೆ ಹಣ ಜಮಾ ಮಾಡಿಸಿ, ಆಮೇಲೆ ಟಿವಿಯವರನ್ನು ಕರೆದುಕೊಂಡು ಬಂದು ನಿಮ್ಮಿಂದ ಮಾತನಾಡಿಸುತ್ತೇವೆ. ಬೇರೆ ಚಾನೆಲ್‌ನವರು ಇಂಟರ್‌ವ್ಯೂಗೆ ಕಳಿಸಿದಾಗ ನಾವೇ ಕಾರು ಕಳಿಸುತ್ತೇವೆ. ನಾವು ಏನು ಬರೆದುಕೊಡುತ್ತೇವೆಯೋ ಅದನ್ನು ನೀವು ಟಿವಿಯವರಿಗೆ ಹೇಳಿ.

ಮಹಿಳೆ: ಅದನ್ನು ನೀವು ಏನು ಹೇಳಿಕೊಡುವುದು ಬೇಕಿಲ್ಲ ಅಂತ ನಾನು ಹೇಳುತ್ತಿದ್ದೇನೆಲ್ಲವೇ? ಅಮ್ಮ ಹೆಂಗ್ ಮಾತನಾಡ್ತಾರೆ ಅನ್ನೋದನ್ನು ಆವಾಗಾದರೂ ನೋಡಿಕೊಳ್ಳಿ. ಸರಿಯೇ? ಎಲ್ಲವನ್ನೂ ನನ್ನ ಅಕೌಂಟಿಗೆ ಹಾಕಬೇಡಿ. (ಇನ್ನೊಬ್ಬರ) ಅಕೌಂಟ್ ನಂಬರ್‌ ಕೂಡ ಕೊಡುತ್ತೇನೆ. ಇಬ್ಬರ ಅಕೌಂಟಿಗೂ ಹಾಕ್ಬಿಡಿ.

ಪುರುಷ 2: ಸರಿಯಮ್ಮ.

ಪುರುಷ 1: ಪಾಸ್‌ಬುಕ್ ಕೊಡಿ, ಫೋಟೋ ತೆಗೆದುಕೊಳ್ತೀನಿ. ಬ್ಯಾಂಕ್‌ನಿಂದ ಆರ್‌ಟಿಜಿಎಸ್‌ ಮಾಡಿಬಿಟ್ಟು ನಿಮಗೆ ಫೋನ್ ಮಾಡ್ತೀವಿ.

ಮಹಿಳೆ: ಇದ್ದರೆ 40* 50 ಸೈಟ್‌ನೇ ಕೊಟ್ಟುಬಿಡಿ. ಮಿಕ್ಕಿದ್ದು ಅಕೌಂಟಿಗೆ ಹಾಕಿಬಿಡಿ.

ಪುರುಷ 1: ನಾವು ಅಮೌಂಟ್ ಕೊಟ್ಟಾದ ಮೇಲೆ ನಾವು ಕರೆದಲ್ಲಿಗೆ ನೀವು ಕ್ಯಾನ್ವಸ್‌ಗೆ ಬರಬೇಕಮ್ಮ.

ಮಹಿಳೆ: ಸೌಲಭ್ಯ ಮಾಡಿ, ಇವತ್ತೇ ಕರೆದುಕೊಂಡು ಹೋಗಿ, ನನಗೇನು?

ಪುರುಷ 1: ಹೊರಗಡೆ ಏನೂ ಗೊತ್ತಾಗಬಾರದಮ್ಮ. ದುಡ್ಡು ಇಸ್ಕೊಂಡು ಸೊಸೆ ವಿರುದ್ಧ ಹೀಗೆ ಮಾತನಾಡುತ್ತಿದ್ದಾರೆಂದು.

ಮಹಿಳೆ: ಏನೂ ಗೊತ್ತಾಗಲ್ಲ.

-ಹೀಗೆ ಮಾತನಾಡಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಪ್ರಸ್ತುತ ನಡೆಯುತ್ತಿರುವ ಚುನಾವಣೆಯಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಜೆಪಿಯ ಮುನಿರತ್ನ ಅವರ ವಿರುದ್ಧ ಕುಸುಮಾ ಸ್ಪರ್ಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...