Homeಕರ್ನಾಟಕಅರ್ಹರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ

ಅರ್ಹರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ

- Advertisement -
- Advertisement -

ರಾಜ್ಯ ಸರ್ಕಾರ ಲಾಕ್‌ಡೌನ್ ಎಂಬ ಪದ ಬಳಸದೇ ಎಲ್ಲವನ್ನು ಬಂದ್ ಮಾಡಿದ್ದಾರೆ. ಮುಖ್ಯಮಂತ್ರಿಗಳು ಏನು ಬೇಕಾದರೂ ಕ್ರಮ ಕೈಗೊಳ್ಳಲಿ, ನಮ್ಮ ಅಭ್ಯಂತರ ಇಲ್ಲ. ಆದರೆ ಕೂಡಲೇ ಪರಿಹಾರ ಪ್ಯಾಕೇಜ್ ಘೋಷಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ನಾಳೆಯಿಂದ ಮೇ 10ರವರೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, “ಸರ್ಕಾರ ರಾಜ್ಯದ ಹಿತವನ್ನ ಕಾಪಾಡುವಲ್ಲಿ ವಿಫಲವಾಗಿದೆ, ಅವರು ಒಪ್ಪಿಕೊಳ್ಳುತ್ತಿಲ್ಲ. ಲಾಕ್‌ಡೌನ್ ಎಂಬ ಪದ ಬಳಸದೇ ಎಲ್ಲವನ್ನು ಬಂದ್ ಮಾಡಿದ್ದಾರೆ. ಈ ನಿರ್ಬಂಧದಿಂದ ತೊಂದರೆ ಎದುರಿಸುವವರಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಿ. ಇಂದು ಸಂಜೆಯೊಳಗೆ ಪರಿಹಾರ ಪ್ಯಾಕೇಜ್ ನೀಡಲಿ” ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಆರೋಗ್ಯ ಕಾಪಾಡಲು ರಾಜ್ಯ ಸರ್ಕಾರ ಏನು ಬೇಕಾದರೂ ಮಾಡಲಿ. ಆದರೆ, ಬಡವರು, ಕೆಲಸ ಇಲ್ಲದವರ ಖಾತೆಗೆ ನೇರವಾಗಿ ಸರ್ಕಾರ ಹಣ ಹಾಕಿಲಿ. ಉದ್ಯೋಗ ಕಳೆದುಕೊಂಡವರಿಗೆ ಪ್ಯಾಕೇಜ್ ಘೋಷಣೆ ಮಾಡಲಿ ಎಂದಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ಒಂದು ವರ್ಷದಿಂದ ವ್ಯಾಪಾರ-ವಹಿವಾಟು ನಿಂತಿದೆ. ಮುಂದಿನ ಒಂದು ವರ್ಷ ಈಗಾಗಿರುವ ಹೊಡೆತದಿಂದ ಚೇತರಿಕೆ ಆಗುವುದಿಲ್ಲ. ಹೀಗಾಗಿ ಸರ್ಕಾರ ಎಲ್ಲ 2 ವರ್ಷಗಳ ಕಾಲ ಕಮರ್ಷಿಯಲ್ ಪ್ರಾಪರ್ಟಿ ಟ್ಯಾಕ್ಸ್ ಮನ್ನಾ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್‌ ಬೇಡಿಕೆ ಇಟ್ಟಿದ್ದಾರೆ. ಜೊತೆಗೆ ಎಲ್ಲ ಸಾಲಗಳ ಅವಧಿ 2 ವರ್ಷ ಮುಂದೂಡಬೇಕು ಎಂದಿದ್ದಾರೆ.

ಬರಗಾಲ ಬಂದಾಗೆಲ್ಲ ರೈತರಿಗೆ ಆಸ್ತಿ ತೆರಿಗೆ ಮನ್ನಾ ಮಾಡಿದ್ದೇವೆ. ಅದೇ ರೀತಿ ಇವರಿಗೆ ಆಸ್ತಿ ತೆರಿಗೆ ಮನ್ನಾ ಮಾಡಿ. ಈ ಕೊರೊನಾ ಸೋಂಕನ್ನು ಇವರು ಹರಡಿಲ್ಲ, ಸರ್ಕಾರ ಹರಡಿದೆ. ಸರ್ಕಾರ ಚಪ್ಪಾಳೆ ಹೊಡಿ ಅಂದಾಗ ಹೊಡೆದಿದ್ದೇವೆ, ದೀಪ ಹಚ್ಚಿ ಅಂದಾಗ ದೀಪ ಹಚ್ಚಿದ್ದೇವೆ. ಎಲ್ಲ ಮಾಡಿದ್ದೇವೆ ಎಂದು ಸರ್ಕಾರವನ್ನು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಒಂದು ಮಿತಿಯವರೆಗೂ ಸಾಲ ಮನ್ನಾ ಮಾಡಬೇಕು. ರಾಜ್ಯ ಸರ್ಕಾರಕ್ಕೆ ಇದರ ವ್ಯಾಪ್ತಿ ಬರುವುದಿಲ್ಲ. ಆದರೆ, ಸಭೆ ಕರೆದು 10-20 ಲಕ್ಷದವರೆಗಿನ ಸಾಲದವರಿಗೆ ಬಡ್ಡಿ ಕಟ್ಟಿಕೊಡುವ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ವಾಹನ ಸಾಲ ಪಡೆದವರ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದು, ಎಲ್ಲ ವಾಹನ ಮಾಲೀಕರಿಗೆ ರಕ್ಷಣೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಒತ್ತಾಯಿಸಿದ್ದಾರೆ.

“ವರ್ತಕರ ಧ್ವನಿಯಾಗಿ ನಾನು ಕೆಲಸ ಮಾಡುತ್ತಿದ್ದು, ಇವರ ನೇತೃತ್ವದಲ್ಲೇ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ. ನೀವು ಇವರ ನೆರವಿಗೆ ಬಾರದಿದ್ದರೆ ನಾವು ಇವರ ಪರವಾಗಿ ಬೀದಿಗಿಳಿದು ಹೋರಾಡುತ್ತೇವೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 150 ದಿನ: ಬಿರು ಬೇಸಿಗೆಯಲ್ಲೂ ಬತ್ತದ ಉತ್ಸಾಹ, ಮೇ 10 ರಿಂದ ಮತ್ತಷ್ಟು ಬಿರುಸು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...