Homeಕರ್ನಾಟಕಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

- Advertisement -
- Advertisement -

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ಶನಿವಾರ (ಏ.11) ದಿಢೀರ್‌ ರಾಜೀನಾಮೆ ನೀಡಿದ್ದರು. ಭಾನುವಾರ (ಏ.12) ಡಿ.ಕೆ ಶಿವಕುಮಾರ್ ಅವರು ರಾಜೀನಾಮೆ ಅಂಗೀಕರಿಸಿ ಮುಂದಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ ಎಂದು ವರದಿ ಹೇಳಿದೆ.

“ಶೀಘ್ರ ನೂತನ ಸಮಿತಿ ರಚನೆಗೆ ಕ್ರಮ ವಹಿಸಲಾಗಿದೆ” ಎಂದು ಶಿವಕುಮಾರ್ ಅವರು ಹೇಳಿದ್ದಾರೆ. ಅಬ್ದುಲ್ ಜಬ್ಬಾರ್‌ ಅವರು ಕೇವಲ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರ ವಿಧಾನಪರಿಷತ್ ಸ್ಥಾನ ಮುಂದುವರೆಯಲಿದೆ ಎಂದು ವರದಿ ತಿಳಿಸಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತ ನಾಯಕರಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್‌ ಹೈಕಮಾಂಡ್ ಮೇಲೆ ಒತ್ತಡ ಇತ್ತು. ಆದರೆ, ಅದನ್ನು ಕಡೆಗಣಿಸಿ ಹೈಕಮಾಂಡ್ ಈ ಕ್ಷೇತ್ರದ ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ ಅವರ ಮಗ ಸಮರ್ಥ್ ಶಾಮನೂರಿಗೆ ಟಿಕೆಟ್ ನೀಡಿದೆ.

ಹೈಕಮಾಂಡ್‌ನ ಈ ನಿರ್ಧಾರದ ಪಕ್ಷದ ಅಲ್ಪಸಂಖ್ಯಾತ ನಾಯಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೂ, ಅಲ್ಪಸಂಖ್ಯಾತ ನಾಯಕರಲ್ಲಿ ಹೈಕಮಾಂಡ್ ನಿರ್ಧಾರದ ಬಗ್ಗೆ ಪರ-ವಿರುದ್ದ ನಿಲುವಿತ್ತು. ಸಚಿವ ರಹೀಂ ಖಾನ್, ಸಲೀಂ ಅಹ್ಮದ್, ರಿಝ್ವಾನ್ ಅರ್ಶದ್, ಯಾಸಿರ್ ಪಠಾಟ್, ತನ್ವೀರ್ ಸೇಠ್ ಹೈಕಮಾಂಡ್ ನಿರ್ಧಾರರ ಪರ ಇದ್ದರೆ, ಎಂಎಲ್‌ಸಿ ಅಬ್ದುಲ್ ಜಬ್ಬಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಚಿವ ಝಮೀರ್ ಅಹ್ಮದ್ ವಿರುದ್ದ ಇದ್ದರು ಎನ್ನಲಾಗಿದೆ.

ಆದರೆ, ಆರಂಭದಲ್ಲಿ ಸಮರ್ಥ್ ಪರ ಪ್ರಚಾರದಿಂದ ದೂರ ಇದ್ದ ಝಮೀರ್ ಅಹ್ಮದ್, ಕೊನೆ ಕ್ಷಣದಲ್ಲಿ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ ಮನೆಗೆ ಭೇಟಿ ನೀಡುವ ಮೂಲಕ ಎಲ್ಲವೂ ಸರಿ ಇದೆ ಎಂದು ತೋರ್ಪಡಿಸುವ ಪ್ರಯತ್ನ ಮಾಡಿದರು. ಆದರೆ, ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ದೂರವೇ ಉಳಿದಿದ್ದರು.

ಈ ನಡುವೆ ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರು ಬಂಡಾಯವೆದ್ದ ಸಾದಿಕ್ ಪೈಲ್ವಾನ್‌ನಂತಹ ಸ್ಥಳೀಯ ನಾಯಕರ ಮನವೊಲಿಸುವ ಕಾರ್ಯ ಕೂಡ ಮಾಡಿದ್ದರು.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...