Homeಮುಖಪುಟಖಾಸಗಿ ಉದ್ಯೋಗಗಳನ್ನಾದರೂ ಸೃಷ್ಟಿಸಬೇಕಲ್ಲವೇ: ಡಿ.ಕೆ.ಶಿವಕುಮಾರ್‌ ‘ಒಂದು ಪ್ರಶ್ನೆ’

ಖಾಸಗಿ ಉದ್ಯೋಗಗಳನ್ನಾದರೂ ಸೃಷ್ಟಿಸಬೇಕಲ್ಲವೇ: ಡಿ.ಕೆ.ಶಿವಕುಮಾರ್‌ ‘ಒಂದು ಪ್ರಶ್ನೆ’

‘ಒಂದು ಪ್ರಶ್ನೆ’ ವಿಡಿಯೋ ಸರಣಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ತಮ್ಮ ನಾಲ್ಕನೇ ಕಂತಿನಲ್ಲಿ ‘ಉದ್ಯೋಗ ಸೃಷ್ಟಿ’ಯ ಕುರಿತು ಮಾತನಾಡಿದ್ದಾರೆ.

- Advertisement -
- Advertisement -

‘ಒಂದು ಪ್ರಶ್ನೆ’ ವಿಡಿಯೋ ಸರಣಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ತಮ್ಮ ನಾಲ್ಕನೇ ಕಂತಿನಲ್ಲಿ ‘ಉದ್ಯೋಗ ಸೃಷ್ಟಿ’ಯ ಕುರಿತು ಮಾತನಾಡಿದ್ದಾರೆ.

“ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು. ಏಳು ವರ್ಷ ಆಯಿತು. ಹದಿನಾಲ್ಕು ಕೋಟಿ ಉದ್ಯೋಗಗಳನ್ನು ಸೃಷ್ಟಿ ಮಾಡಬೇಕಿತ್ತು. ನಾನು ನಿಮ್ಮಲ್ಲಿ ಸರ್ಕಾರದ ಉದ್ಯೋಗವನ್ನು ಕೊಡಿ ಎಂದು ಕೇಳುತ್ತಿಲ್ಲ. ಖಾಸಗಿ ಉದ್ಯೋಗಗಳನ್ನು ಸೃಷ್ಟಿ ಮಾಡುವ ಅವಕಾಶ ಸರ್ಕಾರಕ್ಕೆ ಇಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಜನ, ನಮ್ಮ ಯುವಕರು, ಪದವಿ ಪಡೆದವರು ಉದ್ಯೋಗವಿಲ್ಲದೆ ಹಳ್ಳಿಗಳಲ್ಲಿ ನರೇಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸರ್ಕಾರ ಆರ್ಥಿಕವಾಗಿ ಸಹಾಯವನ್ನು ಕೊಡಬೇಕಾಗಿದೆ. ಆದರೆ ಬಂಡವಾಳಶಾಹಿಗಳಿಗೆ ಮಾತ್ರ ಅನೇಕ ಘೋಷಣೆಗಳನ್ನು ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ನಗರಗಳಲ್ಲಿ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದ್ದವರಿಗೆ ಯಾವುದೇ ಸಹಕಾರವನ್ನು ನೀಡುತ್ತಿಲ್ಲ. ಸರ್ಕಾರ ಇಂತಹ ವಿಚಾರಗಳಲ್ಲಿ ಯಾವ ದಿಕ್ಕಿನಲ್ಲಿ ಹೋಗಬೇಕು? ಉದ್ಯೋಗಗಳನ್ನು ಸೃಷ್ಟಿ ಮಾಡಲಿಕ್ಕೆ, ಕೈಗಾರಿಕೆಗಳನ್ನು ತರಲಿಕ್ಕೆ, ಖಾಸಗಿ ಕ್ಷೇತ್ರಗಳಲ್ಲಿನ ಉದ್ಯೋಗಗಳನ್ನು ಜನರಿಗೆ ಕೊಡಲಿಕ್ಕೆ ಯಾವೆಲ್ಲ ರೀತಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ನಿಮ್ಮ ಸಲಹೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ನನ್ನಲ್ಲಿ ತಿಳಿಸಿರಿ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಬಿಕ್ಕಟ್ಟೆಂದು ಘೋಷಿಸಿ ಬಿಡಗಾಸೂ ನೀಡಿಲ್ಲ: ಡಿ.ಕೆ.ಶಿವಕುಮಾರ್‌

ಡಿ.ಕೆ.ಶಿವಕುಮಾರ್‌ ಅವರು ಮೂರನೇ ಕಂತಿನಲ್ಲಿ ‘ಕೋವಿಡ್‌ ಪರಿಹಾರ’ ಕುರಿತು ಪ್ರಸ್ತಾಪಿಸಿದ್ದರು. “ಮಳೆ ಹೆಚ್ಚಾದಾಗ, ಭೂಕಂಪವಾದಾಗ ಯಾವುದೇ ಸಂದರ್ಭಗಳಲ್ಲಿ ಸರ್ಕಾರ ಪರಿಹಾರಗಳನ್ನು ಘೋಷಣೆ ಮಾಡಿದೆ. ಕೋವಿಡ್‌ ಬಿಕ್ಕಟ್ಟನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸರ್ಕಾರ ಬಿಡುಗಾಸು ಪರಿಹಾರ ನೀಡಿಲ್ಲ. ಕೋವಿಡ್‌ನಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ. ಸರ್ಕಾರವೇ ನಂಬರ್‌ ಬಿಡುಗಡೆ ಮಾಡಿದೆ. ಒಬ್ಬರಿಗೂ ಪರಿಹಾರ ನೀಡಿಲ್ಲ” ಎಂದು ಟೀಕಿಸಿದ್ದರು.

ಎರಡನೇ ಕಂತಿನಲ್ಲಿ ‘ಸಿಲಿಂಡರ್‌ ಬೆಲೆ ಏರಿಕೆ’ಯ ಕುರಿತು ಮಾತನಾಡುತ್ತಾ, “ಸಿಲಿಂಡರ್ ಬೆಲೆ 888 ರೂ.  ಇದ್ದು, ಸದ್ಯದಲ್ಲೇ 900 ರೂಪಾಯಿಯಿಂದ 1000 ರೂ.ವರೆಗೆ ತಲುಪಬಹುದು. ರಾಜ್ಯದ ಜನತೆಗೆ ಎಂತಹ ಸಂಕಷ್ಟ ನೋಡಿ. ಕೋವಿಡ್‌ನಿಂದ ಜನ ಸಾಯುತ್ತಿದ್ದಾರೆ. ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಆದರೆ ಬೆಲೆ ಮಾತ್ರ ಕಡಿಮೆಯಾಗಲಿಲ್ಲ” ಎಂದಿದ್ದರು.

ಮೊದಲ ಕಂತಿನಲ್ಲಿ ‘ಎನ್‌ಇಪಿಯನ್ನು ನಾಗಪುರ ಎಜುಕೇಷನ್‌ ಪಾಲಿಸಿ’ ಎಂದು ವಿಶ್ಲೇಷಿಸಿದ್ದರು.


ಇದನ್ನೂ ಓದಿ: ಎಲ್‌ಪಿಜಿ ಬೆಲೆ ಏರಿಕೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ವಿಶೇಷ ವಿಡಿಯೋ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...