Homeಮುಖಪುಟಖಾಸಗಿ ಉದ್ಯೋಗಗಳನ್ನಾದರೂ ಸೃಷ್ಟಿಸಬೇಕಲ್ಲವೇ: ಡಿ.ಕೆ.ಶಿವಕುಮಾರ್‌ ‘ಒಂದು ಪ್ರಶ್ನೆ’

ಖಾಸಗಿ ಉದ್ಯೋಗಗಳನ್ನಾದರೂ ಸೃಷ್ಟಿಸಬೇಕಲ್ಲವೇ: ಡಿ.ಕೆ.ಶಿವಕುಮಾರ್‌ ‘ಒಂದು ಪ್ರಶ್ನೆ’

‘ಒಂದು ಪ್ರಶ್ನೆ’ ವಿಡಿಯೋ ಸರಣಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ತಮ್ಮ ನಾಲ್ಕನೇ ಕಂತಿನಲ್ಲಿ ‘ಉದ್ಯೋಗ ಸೃಷ್ಟಿ’ಯ ಕುರಿತು ಮಾತನಾಡಿದ್ದಾರೆ.

- Advertisement -
- Advertisement -

‘ಒಂದು ಪ್ರಶ್ನೆ’ ವಿಡಿಯೋ ಸರಣಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ತಮ್ಮ ನಾಲ್ಕನೇ ಕಂತಿನಲ್ಲಿ ‘ಉದ್ಯೋಗ ಸೃಷ್ಟಿ’ಯ ಕುರಿತು ಮಾತನಾಡಿದ್ದಾರೆ.

“ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು. ಏಳು ವರ್ಷ ಆಯಿತು. ಹದಿನಾಲ್ಕು ಕೋಟಿ ಉದ್ಯೋಗಗಳನ್ನು ಸೃಷ್ಟಿ ಮಾಡಬೇಕಿತ್ತು. ನಾನು ನಿಮ್ಮಲ್ಲಿ ಸರ್ಕಾರದ ಉದ್ಯೋಗವನ್ನು ಕೊಡಿ ಎಂದು ಕೇಳುತ್ತಿಲ್ಲ. ಖಾಸಗಿ ಉದ್ಯೋಗಗಳನ್ನು ಸೃಷ್ಟಿ ಮಾಡುವ ಅವಕಾಶ ಸರ್ಕಾರಕ್ಕೆ ಇಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಜನ, ನಮ್ಮ ಯುವಕರು, ಪದವಿ ಪಡೆದವರು ಉದ್ಯೋಗವಿಲ್ಲದೆ ಹಳ್ಳಿಗಳಲ್ಲಿ ನರೇಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸರ್ಕಾರ ಆರ್ಥಿಕವಾಗಿ ಸಹಾಯವನ್ನು ಕೊಡಬೇಕಾಗಿದೆ. ಆದರೆ ಬಂಡವಾಳಶಾಹಿಗಳಿಗೆ ಮಾತ್ರ ಅನೇಕ ಘೋಷಣೆಗಳನ್ನು ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ನಗರಗಳಲ್ಲಿ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದ್ದವರಿಗೆ ಯಾವುದೇ ಸಹಕಾರವನ್ನು ನೀಡುತ್ತಿಲ್ಲ. ಸರ್ಕಾರ ಇಂತಹ ವಿಚಾರಗಳಲ್ಲಿ ಯಾವ ದಿಕ್ಕಿನಲ್ಲಿ ಹೋಗಬೇಕು? ಉದ್ಯೋಗಗಳನ್ನು ಸೃಷ್ಟಿ ಮಾಡಲಿಕ್ಕೆ, ಕೈಗಾರಿಕೆಗಳನ್ನು ತರಲಿಕ್ಕೆ, ಖಾಸಗಿ ಕ್ಷೇತ್ರಗಳಲ್ಲಿನ ಉದ್ಯೋಗಗಳನ್ನು ಜನರಿಗೆ ಕೊಡಲಿಕ್ಕೆ ಯಾವೆಲ್ಲ ರೀತಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ನಿಮ್ಮ ಸಲಹೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ನನ್ನಲ್ಲಿ ತಿಳಿಸಿರಿ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಬಿಕ್ಕಟ್ಟೆಂದು ಘೋಷಿಸಿ ಬಿಡಗಾಸೂ ನೀಡಿಲ್ಲ: ಡಿ.ಕೆ.ಶಿವಕುಮಾರ್‌

ಡಿ.ಕೆ.ಶಿವಕುಮಾರ್‌ ಅವರು ಮೂರನೇ ಕಂತಿನಲ್ಲಿ ‘ಕೋವಿಡ್‌ ಪರಿಹಾರ’ ಕುರಿತು ಪ್ರಸ್ತಾಪಿಸಿದ್ದರು. “ಮಳೆ ಹೆಚ್ಚಾದಾಗ, ಭೂಕಂಪವಾದಾಗ ಯಾವುದೇ ಸಂದರ್ಭಗಳಲ್ಲಿ ಸರ್ಕಾರ ಪರಿಹಾರಗಳನ್ನು ಘೋಷಣೆ ಮಾಡಿದೆ. ಕೋವಿಡ್‌ ಬಿಕ್ಕಟ್ಟನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸರ್ಕಾರ ಬಿಡುಗಾಸು ಪರಿಹಾರ ನೀಡಿಲ್ಲ. ಕೋವಿಡ್‌ನಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ. ಸರ್ಕಾರವೇ ನಂಬರ್‌ ಬಿಡುಗಡೆ ಮಾಡಿದೆ. ಒಬ್ಬರಿಗೂ ಪರಿಹಾರ ನೀಡಿಲ್ಲ” ಎಂದು ಟೀಕಿಸಿದ್ದರು.

ಎರಡನೇ ಕಂತಿನಲ್ಲಿ ‘ಸಿಲಿಂಡರ್‌ ಬೆಲೆ ಏರಿಕೆ’ಯ ಕುರಿತು ಮಾತನಾಡುತ್ತಾ, “ಸಿಲಿಂಡರ್ ಬೆಲೆ 888 ರೂ.  ಇದ್ದು, ಸದ್ಯದಲ್ಲೇ 900 ರೂಪಾಯಿಯಿಂದ 1000 ರೂ.ವರೆಗೆ ತಲುಪಬಹುದು. ರಾಜ್ಯದ ಜನತೆಗೆ ಎಂತಹ ಸಂಕಷ್ಟ ನೋಡಿ. ಕೋವಿಡ್‌ನಿಂದ ಜನ ಸಾಯುತ್ತಿದ್ದಾರೆ. ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಆದರೆ ಬೆಲೆ ಮಾತ್ರ ಕಡಿಮೆಯಾಗಲಿಲ್ಲ” ಎಂದಿದ್ದರು.

ಮೊದಲ ಕಂತಿನಲ್ಲಿ ‘ಎನ್‌ಇಪಿಯನ್ನು ನಾಗಪುರ ಎಜುಕೇಷನ್‌ ಪಾಲಿಸಿ’ ಎಂದು ವಿಶ್ಲೇಷಿಸಿದ್ದರು.


ಇದನ್ನೂ ಓದಿ: ಎಲ್‌ಪಿಜಿ ಬೆಲೆ ಏರಿಕೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ವಿಶೇಷ ವಿಡಿಯೋ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...