Homeಮುಖಪುಟಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

- Advertisement -
- Advertisement -

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ. ಇಂತಹ ನಡವಳಿಕೆಯು ‘ಫ್ಯೂಡಲ್’ ಮನಸ್ಥಿತಿಯನ್ನು ನೆನಪಿಸುತ್ತದೆ. ಹೌದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂತಹ ನಡವಳಿಕೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿರುವುದು ಟೀಕೆಗೆ ಗುರಿಯಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೇಬನ್ನು ಕಚ್ಚಿ, ಬಳಿಕ ಅದನ್ನು ನೆರೆದಿದ್ದ ಜನರತ್ತ ಎಸೆಯುತ್ತಿರುವ ವಿಡಿಯೋ

ಕನಕಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೇಬನ್ನು ಕಚ್ಚಿ, ಬಳಿಕ ಅದನ್ನು ನೆರೆದಿದ್ದ ಜನರತ್ತ ಎಸೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಡಿ.ಕೆ. ಶಿವಕುಮಾರ್ ಅವರು ಕನಕಪುರದ ಹಾರೋಹಳ್ಳಿಗೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದ್ದು, ಅಲ್ಲಿನ ಬೆಂಬಲಿಗರು ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಅವರಿಗೆ ತಾಜಾ ಸೇಬು ಮತ್ತು ಹೂವುಗಳಿಂದ ಮಾಡಿದ ಬೃಹತ್‌ “ಗಜಮಾಲೆ”ಯನ್ನು ಹಾಕಿ ಬರಮಾಡಿಕೊಂಡಿದ್ದರು.

ವೈರಲ್ ವಿಡಿಯೋದಲ್ಲಿ, ಶಿವಕುಮಾರ್ ಅವರು ಆ ಗಜಮಾಲೆಯಿಂದ ಸೇಬುಗಳನ್ನು ಕಿತ್ತು, ಅದಕ್ಕೊಂದು ಕಚ್ಚು ಹಾಕಿ, ನಂತರ ಅಲ್ಲಿ ನೆರೆದಿದ್ದ ಬೆಂಬಲಿಗರ ಕಡೆಗೆ ಎಸೆಯುತ್ತಿರುವುದನ್ನು ಕಾಣಬಹುದು. ಅಲ್ಲಿ ನೆರೆದಿದ್ದ ಜನರೂ ಸಹ ಅಷ್ಟೇ ಉತ್ಸಾಹದಿಂದ, ಗಾಳಿಯಲ್ಲಿ ತೇಲಿಬರುತ್ತಿದ್ದ ಆ ಸೇಬುಗಳನ್ನು ಹಿಡಿಯಲು ಮುಗಿಬಿದ್ದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವು ಬೆಂಬಲಿಗರು ಇದನ್ನು “ಜನರ ಮೇಲಿನ ಪ್ರೀತಿ ಮತ್ತು ಸಹಜ ಒಡನಾಟ” ಎಂದು ಬಣ್ಣಿಸಿದರೆ, ವಿರೋಧಿಗಳು ಮತ್ತು ವಿಮರ್ಶಕರು “ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೀಗೆ ಎಂಜಲು ಮಾಡಿದ ಆಹಾರವನ್ನು ಎಸೆಯುವುದು ಎಷ್ಟು ಸರಿ?” ಎಂದು ಪ್ರಶ್ನಿಸುತ್ತಿದ್ದಾರೆ.

ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು, “ಡಿ.ಕೆ. ಶಿವಕುಮಾರ್ ಅವರು ತಮ್ಮನ್ನು ತಾವೇ ದೇವರೆಂದು ಅಂದುಕೊಂಡಿದ್ದಾರೆಯೇ? ಸೇಬಿನ ಮಾಲೆಯನ್ನು ಕಚ್ಚಿ ಅದನ್ನೇನೋ ದೇವರ ಪ್ರಸಾದ ಎಂಬಂತೆ ಜನರಿಗೆ ಹಂಚುತ್ತಿದ್ದಾರೆ. ಇದು ಯಾವ ಸೀಮೆಯ ನ್ಯಾಯ?” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪುನರಾವರ್ತನೆಯಾಗುತ್ತಿರುವ ವಿವಾದಾತ್ಮಕ ನಡವಳಿಕೆ

ಸಿಎಂ ಡಿ.ಕೆ. ಶಿವಕುಮಾರ್ ಅವರ ಸಾರ್ವಜನಿಕ ವರ್ತನೆಗಳು ವಿವಾದಕ್ಕೆ ಇಡಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ತಮ್ಮನ್ನು ಸೆಲ್ಫಿ ಕೇಳಲು ಬಂದ ಅಭಿಮಾನಿಯ ಕೈಗೆ ಹೊಡೆದಿದ್ದು, ಪಕ್ಷದ ಕಾರ್ಯಕರ್ತರನ್ನು ಸಾರ್ವಜನಿಕವಾಗಿ ತಳ್ಳಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದ್ದವು. ಈಗ ಮುಖ್ಯಮಂತ್ರಿಯಾದ ಮೇಲೂ ಕಚ್ಚಿದ ಹಣ್ಣನ್ನು ಜನರತ್ತ ಎಸೆದಿರುವುದು ಅವರ ಫ್ಯೂಡಲ್ ಮತ್ತು ಉಡಾಫೆಯ ವರ್ತನೆ ಮತ್ತೆ ಪುನರಾವರ್ತನೆಯಾಗುತ್ತಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

ಅಧಿಕಾರ ಮತ್ತು ಜನಪ್ರಿಯತೆ ಹೆಚ್ಚಾದಂತೆ ವಿನಯತೆ ಕೂಡ ಹೆಚ್ಚಾಗಬೇಕು. ಕರ್ನಾಟಕ ರಾಜ್ಯವೊಂದರ ಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್‌ರವರ ಬೇಜವಾಬ್ದಾರಿ ವರ್ತನೆಗಳು ಅವರ ಇಡೀ ರಾಜಕೀಯ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆಯಾಗುತ್ತವೆ. ಇನ್ನಾದರೂ ಜನಪ್ರತಿನಿಧಿಗಳು ಸಾರ್ವಜನಿಕ ವೇದಿಕೆಗಳಲ್ಲಿ ತಮ್ಮ ಬಾಡಿ ಲಾಂಗ್ವೇಜ್ ಮತ್ತು ನಡವಳಿಕೆಗಳ ಬಗ್ಗೆ ಸ್ವಯಂ ವಿಮರ್ಶೆ ಮಾಡಿಕೊಳ್ಳಬೇಕಾದ ತುರ್ತು ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...