Homeಕರ್ನಾಟಕವಿದ್ಯುತ್ ದರ ಏರಿಕೆ ಕೈಬಿಡದಿದ್ದರೆ ತೀವ್ರ ಪ್ರತಿಭಟನೆ: ಡಿಕೆಶಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಕೈಬಿಡದಿದ್ದರೆ ತೀವ್ರ ಪ್ರತಿಭಟನೆ: ಡಿಕೆಶಿ ಎಚ್ಚರಿಕೆ

ಮಳೆ ಹೆಚ್ಚಾಗಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿರುವ ಹೊತ್ತಲ್ಲಿ ಸರ್ಕಾರ ವಿದ್ಯುತ್ ದರ ಕಡಿಮೆ ಮಾಡಬಹುದಿತ್ತು. ಆದರೆ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ - ಡಿ.ಕೆ.ಶಿವಕುಮಾರ್‌

- Advertisement -
- Advertisement -

‘ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಜನ ಸಾಮಾನ್ಯರ ಬದುಕು ದಯನೀಯ ಸ್ಥಿತಿಯಲ್ಲಿದೆ. ಇಂತಹ ಸಮಯದಲ್ಲಿ ವಿದ್ಯುತ್ ದರ ಹೆಚ್ಚಿಸುವ ಸರ್ಕಾರದ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಎಚ್ಚರಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “’ಒಂದು ವೇಳೆ ಸರ್ಕಾರ ಈ ನಿರ್ಧಾರ ಒಂದು ವಾರದ ಒಳಗಾಗಿ ಕೈಬಿಡದಿದ್ದರೆ, 17ನೇ ತಾರೀಕಿನಿಂದ 20ನೇ ತಾರೀಕಿನವರೆಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, ಎಸ್ಕಾಂ ಸಂಸ್ಥೆಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ 23ರಿಂದ 28ನೇ ತಾರೀಕಿನ ನಡುವೆ ಒಂದು ದಿನ ಪ್ರತಿಯೊಂದು ತಾಲೂಕು ಮಟ್ಟದಲ್ಲೂ ಪ್ರತಿಭಟನೆ ನಡೆಸಲು ಯೋಚಿಸಿರುವುದಾಗಿ ತಿಳಿಸಿದ್ದಾರೆ.

‘ಕೊರೋನಾ ಪಿಡುಗಿನಿಂದ ದೇಶ ತತ್ತರಿಸಿದೆ. ಈ ಸಮಯದಲ್ಲಿ ಎಲ್ಲರೂ ಮಾನವೀಯತೆಗೆ ಗೌರವ ತೋರಿ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರಕ್ಕೆ ಎಲ್ಲರೂ ಸಂಪೂರ್ಣ ಸಹಕಾರ ನೀಡುತ್ತಾ ಬಂದಿದ್ದೇವೆ. ಆದರೆ ಸರ್ಕಾರ ಮಾತ್ರ ಜನಸಾಮಾನ್ಯರ ಮೇಲೆ ಸವಾರಿ ಮಾಡತ್ತಿದೆ ಎಂದರು.

ಇದನ್ನೂ ಓದಿ: ಯಡಿಯೂರಪ್ಪನವರು ಹೋದರೆ ಮುನಿರತ್ನ ಕಥೆ ಗೋವಿಂದ: ಡಿ.ಕೆ. ಶಿವಕುಮಾರ್‌

ರಾಜ್ಯದಲ್ಲಿ ಮಳೆ ಹೆಚ್ಚಾದಾಗ ಹಾಗೂ ಸೌರಶಕ್ತಿಯಿಂದ ವಿದ್ಯುತ್ ಹೆಚ್ಚಾಗಿ ಉತ್ಪಾದನೆ ಮಾಡುವುದನ್ನು ನಾವು ನೋಡಿದ್ದೇವೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಹೀಗಿರುವಾಗ ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಿಸಿ ವಿದ್ಯುತ್‌ ದರ ಏರಿಕೆ ಮಾಡಿದ್ದು ಸರಿಯಲ್ಲ. ಮಳೆ ಹೆಚ್ಚಾಗಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿರುವ ಹೊತ್ತಲ್ಲಿ ಸರ್ಕಾರ ವಿದ್ಯುತ್ ದರ ಕಡಿಮೆ ಮಾಡಬಹುದಿತ್ತು. ಆದರೆ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.

’ನಾನು ಪಕ್ಷದ ಪರವಾಗಿ, ರಾಜ್ಯದ ಆರೂವರೆ ಕೋಟಿ ಜನರ ಪರವಾಗಿ, ಈ ಜನ ವಿರೋಧಿ ನಿರ್ಧಾರವನ್ನು ಖಂಡಿಸುತ್ತೇನೆ. ಇದು ಕೈಗಾರಿಕೆ, ವ್ಯಾಪಾರಿ, ರೈತರು ಹಾಗೂ ಮಧ್ಯಮ ವರ್ಗದ ಜನರ ವಿರುದ್ಧ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರ ಕೂಡಲೇ ಈ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ’ ಎಂದಿದ್ದಾರೆ.

ಮುಂದಿನ ಒಂದೂವರೆ ವರ್ಷಗಳ ಕಾಲ ಇಂತಹ ತೀರ್ಮಾನ ತೆಗೆದುಕೊಳ್ಳಬಾರದು ಎಂದು ಜನರ ಧ್ವನಿಯಾಗಿ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಈಗ ಇರುವ ದರವನ್ನೇ ಮುಂದುವರಿಸಬೇಕು ಇಲ್ಲದಿದ್ದರೇ ಪ್ರತಿಭಟನೆ ನಡೆಸಿಯೇ ನಡೆಸುತ್ತೇವೆ ಎಂದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಮುಖಂಡರಾದ ಡಾ. ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಉಪಸ್ಥಿತರಿದ್ದರು.

ವಿದ್ಯತ್ ದರತ ಏರಿಕೆ ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದರ ಕಡಿತಗೊಳಿಸುವಂತೆ ಪತ್ರ ಬರೆದಿದ್ದರು.


ಇದನ್ನೂ ಓದಿ: ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...