Homeಕರ್ನಾಟಕದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

- Advertisement -
- Advertisement -

‘ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೆ ಸಿ.ಟಿ ರವಿ. ಅವರಿಂದಲೇ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ’ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

‘ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬಿಜೆಪಿ ನಾಯಕರ ಕೊಡುಗೆ ಹೆಚ್ಚಾಗಿದೆ’ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ವ್ಯಂಗ್ಯವಾಡಿದ್ದಾರೆ. ‘ಹೌದು, ಸಿ.ಟಿ. ರವಿ ಅವರಿಂದಲೇ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ’ ಎಂದರು.

ಇನ್ನು ಕಾಂಗ್ರೆಸ್ ನಾಯಕರು ಮಾನಸಿಕ ಅಸ್ವಸ್ಥರಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ‘ನಾವು ಈಗಲೇ ನಿಮ್ಹಾನ್ಸ್ ಗೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುತ್ತೇವೆ’ ಎಂದು ಬಿಜೆಪಿಯವರಿಗೆ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ‘ನೇಣುಗಂಬ ಏರಬೇಕಾಗಿದ್ದ ಭಯೋತ್ಪಾದಕಿಯನ್ನು ಸಂಸದೆ ಮಾಡಿದ ಬಿಜೆಪಿಯದ್ದು ತಾಲಿಬಾನಿಯದ್ದೇ ರಕ್ತ’- ಕಾಂಗ್ರೆಸ್

‘ವಿನಯ್ ಕುಲಕರ್ಣಿ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವರಾಗಿದ್ದು, ಅವರು ಕಾಂಗ್ರೆಸ್‌ನ ಭಾಗ. ವಿನಯ್ ಕುಲಕರ್ಣಿ ಅವರ ಮೇಲೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿರುವುದು ಸಂತೋಷ. ಆದರೆ, ಇದೇ ರೀತಿ ಜನಾಶೀರ್ವಾದ ಯಾತ್ರೆ ಮೂಲಕ ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವ ಕೇಂದ್ರ ಸಚಿವರ ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ’ ಎಂದು ಪ್ರಶ್ನಿಸಿದ್ದಾರೆ.

’ಬಿಜೆಪಿ ಕಾರ್ಯಕರ್ತರ ಸಭೆ ಮಾಡಿದಾಗ ಯಾಕೆ ಪ್ರಕರಣ ದಾಖಲಿಸಿಲ್ಲ. ಸರ್ಕಾರ ತಮಗೆ ಬೇಕಾದ ರೀತಿಯಲ್ಲಿ ಕಾನೂನು ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

‘ಇಡಿ ದಾಳಿ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ಅವರು ಸ್ಪಷ್ಟನೆ ನೀಡಿದ್ದಾರೆ. ನಿರಪರಾಧಿಗಳಿಗೆ, ರಾಜಕೀಯ ದ್ವೇಷದ ದಾಳಿಗೆ ಒಳಗಾದವರಿಗೆ ನಾವು ಸ್ಪಂದಿಸಬೇಕು. ಅದನ್ನು ಮಾಡುತ್ತಿದ್ದೇವೆ’ ಎಂದಿದ್ದಾರೆ.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...