Homeಕರ್ನಾಟಕಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌‌ ಆದೇಶದಂತೆ ಕಾಂಗ್ರೆಸ್ ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ರಮ್ಯ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿಯಾಗಿದ್ದು, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ ಎಂದು ಮಂಡ್ಯ ಕ್ಷೇತ್ರದ ಮಾಜಿ ಸಂಸದೆ, ನಟಿ ರಮ್ಯಾ ಗುರುವಾರ ಆರೋಪಿಸಿದ್ದಾರೆ. ಡಿ.ಕೆ. ಶಿವಕುಮಾರ್‌‌‌ ಅವರ ಆದೇಶದಂತೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಅವರು ಕಾಂಗ್ರೆಸ್ ಐಟಿ ಸೆಲ್‌ ಕಡೆಯಿಂದ ರಚಿತವಾಗಿದೆ ಎಂದು ಹೇಳಿ ಹಲವು ಸಂದೇಶಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದಿಂದ ರಕ್ಷಣೆ ಕೋರಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಕಾಂಗ್ರೆಸ್‌ನ ಪ್ರಚಾರ ಸಮಿತಿ ನಾಯಕ ಎಂ.ಬಿ. ಪಾಟೀಲ್ ಅವರನ್ನು ರಹಸ್ಯವಾಗಿ ಭೇಟಿ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು. ಡಿ.ಕೆ. ಶಿವಕುಮಾರ್‌ ಅವರ ಆರೋಪವನ್ನು ನಿರಾಕರಿಸಿರುವ ಎಂ.ಬಿ. ಪಾಟೀಲ್‌, “ಅಶ್ವಥ್‌ ನಾರಾಯಣ ಅವರು ನನ್ನನ್ನು ಭೇಟಿ ಮಾಡಿಲ್ಲ. ಒಂದು ವೇಳೆ ಅವರು ಭೇಟಿ ಮಾಡಿದ್ದರೂ ತಪ್ಪಿಲ್ಲ. ಅದು ನನ್ನ ಖಾಸಗಿ ವಿಚಾರ, ಅದರ ಬಗ್ಗೆ ಮಾತನಾಡಿರುವುದು ತಪ್ಪು, ಅದು ಅವರ ಸಣ್ಣತನ. ರಾಜಕೀಯ ವಿಚಾರ ಬಂದಾಗ ನಾನು ಪಕ್ಷದ ಜೊತೆಗೆ ಇರುತ್ತೇನೆ. ಶಿವಕುಮಾರ್‌ ಅವರ ಆರೋಪವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವೇದಿಕೆಗೆ ವಿಚಾರವನ್ನು ಕೊಂಡೊಯ್ಯುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮ್ಮ ಪಕ್ಷದ ಹಿರಿಯ ಸಹೋದ್ಯೋಗಿಯ ಮೇಲೆಯೇ ಡಿಕೆಶಿ ಇಂತಹ ಹೇಳಿಕೆ ನೀಡಬಾರದಿತ್ತು ಎಂದು ಕೆಲವು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ಪತ್ರಕರ್ತರು ಹೇಳಿದ್ದಾರೆ. ಅದರಂತೆಯೆ ಶಿವಕುಮಾರ್‌ ಅವರ ಹೇಳಿಕೆಯನ್ನು ಮಾಜಿ ಸಂಸದೆ ರಮ್ಯಾ ವಿರೋಧಿಸಿದ್ದರು.

ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ರಮ್ಯಾ ಅವರು, “ಬೇರೆ ಬೇರೆ ಪಕ್ಷದಲ್ಲಿ ಇರುವವರು ಪರಸ್ಪರ ಭೇಟಿಯಾಗುತ್ತಾರೆ, ಸಮಾರಂಭಗಳಿಗೆ ಹೋಗುತ್ತಾರೆ. ಅಷ್ಟೆ ಅಲ್ಲದೆ ಬೇರೆ ಪಕ್ಷದಲ್ಲಿ ಇರುವ ಕುಟುಂಬಗಳ ನಡುವೆ ಮದುವೆಯೂ ಆಗುತ್ತಾರೆ. ಡಿಕೆ ಶಿವಕುಮಾರ್ ಅವರು ಕಟ್ಟಾ ಕಾಂಗ್ರೆಸ್ಸಿಗ ಎಂ.ಬಿ. ಪಾಟೀಲ್ ಬಗ್ಗೆ ಹೀಗೆ ಹೇಳಿದ್ದು ನನಗೆ ಆಶ್ಚರ್ಯವಾಗಿದೆ. ಒಂದೇ ಪಕ್ಷವಾಗಿ ಎಲ್ಲರೂ ಒಟ್ಟಿಗೆ ಚುನಾವಣೆ ಎದುರಿಸಬೇಕಲ್ಲವೇ?” ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದರು.

ರಮ್ಯಾ ಅವರ ಟ್ವೀಟ್‌ಗೆ ಪ್ರತಿಯಾಗಿ ಕಾಂಗ್ರೆಸ್‌ನ ಕೆಲವು ನಾಯಕರು ಮತ್ತು ಕಾರ್ಯಕರ್ತರು ಅವರ ಮೇಲೆ ದಾಳಿ ಮಾಡಿ, ಅವರನ್ನು ಟ್ರೋಲ್ ಮಾಡಿತ್ತು. ಈ ರೀತಿ ದಾಳಿ ಮಾಡಲು ಸ್ವತಃ ರಾಜ್ಯ ಕಾಂಗ್ರೆಸ್‌ ‘ಕಚೇರಿ’ಯೆ ಕೇಳಿಕೊಂಡಿದೆ ಎಂದು ರಮ್ಯ ಆರೋಪಿಸಿದ್ದಾರೆ. ಜೊತೆಗೆ ‘ಕಚೇರಿ’ ಎಂದರೆ, ‘ಡಿ.ಕೆ. ಶಿವಕುಮಾರ್‌‌ ನಾಯಕತ್ವದ ರಾಜ್ಯ ಕಾಂಗ್ರೆಸ್‌’ ಎಂದು ಅವರು ಹೇಳಿದ್ದಾರೆ.

ತನ್ನ ವಿರುದ್ದ ಕಾಂಗ್ರೆಸ್‌ ಐಟಿ ಸೆಲ್ ರಚಿಸಿದೆ ಎನ್ನಲಾಗಿರುವ ಕೆಲವು ಸಂದೇಶಗಳನ್ನು ಸ್ಕ್ರೀನ್‌ ಶಾರ್ಟ್‌ಗಳನ್ನು ರಮ್ಯಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಡಿಕೆಶಿ ಆಫೀಸ್‌ ಇಂದ ಬಂದಿದೆ ಎನ್ನಲಾಗಿರುವ ರಮ್ಯಾ ಹಂಚಿಕೊಂಡಿರುವ ಸ್ಕ್ರೀನ್‌ಶಾರ್ಟ್

ಕಾಂಗ್ರೆಸ್‌ ಪಕ್ಷದಲ್ಲಿ ಮೇಲೇರಲು ಡಿ.ಕೆ. ಶಿವಕುಮಾರ್‌ ಅವರು ಅವಕಾಶ ನೀಡಿದ್ದಾರೆ ಎಂಬ, ಸಂದೇಶವನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ರಮ್ಯಾ, “ನನಗೆ ಅವಕಾಶಗಳನ್ನು ನೀಡಿದವರು ಮತ್ತು ನನ್ನ ಬೆಂಬಲಕ್ಕೆ ನಿಂತವರು ಯಾರಾದರೂ ಇದ್ದರೆ ಅದು ರಾಹುಲ್‌ಗಾಂಧಿ ಮಾತ್ರ. ಉಳಿದಂತೆ ನನಗೆ ಅವಕಾಶಗಳನ್ನು ಕೊಟ್ಟಿದ್ದಾರೆ ಎಂದು ಹೇಳಿಕೊಳ್ಳುವವರು ಅವಕಾಶವಾದಿ ಆಗಿದ್ದಾರೆ. ಈ ಅವಕಾಶವಾದಿ ನನ್ನ ಬೆನ್ನಿಗೆ ಚೂರಿ ಹಾಕಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ನೀವು ಟಿವಿಯಲ್ಲಿ ನೋಡುವ ಎಲ್ಲವೂ ಅವರ ಮೋಸಗೊಳಿಸುವ ಮನಸ್ಸನ್ನು ಮರೆಮಾಚುವ ಪ್ರಹಸನವಾಗಿದೆ” ಎಂದು ಅವರು ಡಿಕೆ ಶಿವಕುಮಾರ್‌ ಅವರ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

“ನಾನು ಪಕ್ಷವನ್ನು ತ್ಯಜಿಸಿದ ನಂತರ, ‘ಕಾಂಗ್ರೆಸ್‌ಗೆ 8 ಕೋಟಿ ಕಾಂಗ್ರೆಸ್‌ಗೆ ವಂಚಿಸಿ ಓಡಿಹೋದಳು’ ಎಂಬ ಸುದ್ದಿ ಮುಖ್ಯವಾಗಿ ಕನ್ನಡ ವಾಹಿನಿಗಳಲ್ಲಿ ನನ್ನ ವಿಶ್ವಾಸಾರ್ಹತೆಯನ್ನು ನಾಶಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ನಾನು ಓಡಿಹೋಗಲಿಲ್ಲ. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆ. ನಾನು ಪಕ್ಷಕ್ಕೆ 8 ಕೋಟಿ ವಂಚನೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಉಲ್ಲೇಖಿಸಿ “ನಾನು ಮೌನವಾಗಿರುವುದು ನನ್ನ ತಪ್ಪು. ದಯವಿಟ್ಟು ನೀವು ಮುಂದೆ ಕರ್ನಾಟಕಕ್ಕೆ ಬಂದಾಗ ಈ ಬಗ್ಗೆ ಮಾಧ್ಯಮಗಳೊಂದಿಗೆ ಸ್ಪಷ್ಟಪಡಿಸಿ. ಇದು ನೀವು ನನಗಾಗಿ ಮಾಡಬಹುದಾದ ಕನಿಷ್ಠ ಕೆಲಸ. ನನಗೆ ನನ್ನ ಜೀವನದುದ್ದಕ್ಕೂ ಈ ನಿಂದನೆ ಮತ್ತು ಟ್ರೋಲಿಂಗ್‌ನೊಂದಿಗೆ ಬದುಕಬೇಕಾಗಿಲ್ಲ” ಎಂದು ರಮ್ಯಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದಕ್ಕೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ಒಳ್ಳೇಯದು

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...