Homeಕರ್ನಾಟಕಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌‌ ಆದೇಶದಂತೆ ಕಾಂಗ್ರೆಸ್ ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ರಮ್ಯ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿಯಾಗಿದ್ದು, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ ಎಂದು ಮಂಡ್ಯ ಕ್ಷೇತ್ರದ ಮಾಜಿ ಸಂಸದೆ, ನಟಿ ರಮ್ಯಾ ಗುರುವಾರ ಆರೋಪಿಸಿದ್ದಾರೆ. ಡಿ.ಕೆ. ಶಿವಕುಮಾರ್‌‌‌ ಅವರ ಆದೇಶದಂತೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಅವರು ಕಾಂಗ್ರೆಸ್ ಐಟಿ ಸೆಲ್‌ ಕಡೆಯಿಂದ ರಚಿತವಾಗಿದೆ ಎಂದು ಹೇಳಿ ಹಲವು ಸಂದೇಶಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದಿಂದ ರಕ್ಷಣೆ ಕೋರಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಕಾಂಗ್ರೆಸ್‌ನ ಪ್ರಚಾರ ಸಮಿತಿ ನಾಯಕ ಎಂ.ಬಿ. ಪಾಟೀಲ್ ಅವರನ್ನು ರಹಸ್ಯವಾಗಿ ಭೇಟಿ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು. ಡಿ.ಕೆ. ಶಿವಕುಮಾರ್‌ ಅವರ ಆರೋಪವನ್ನು ನಿರಾಕರಿಸಿರುವ ಎಂ.ಬಿ. ಪಾಟೀಲ್‌, “ಅಶ್ವಥ್‌ ನಾರಾಯಣ ಅವರು ನನ್ನನ್ನು ಭೇಟಿ ಮಾಡಿಲ್ಲ. ಒಂದು ವೇಳೆ ಅವರು ಭೇಟಿ ಮಾಡಿದ್ದರೂ ತಪ್ಪಿಲ್ಲ. ಅದು ನನ್ನ ಖಾಸಗಿ ವಿಚಾರ, ಅದರ ಬಗ್ಗೆ ಮಾತನಾಡಿರುವುದು ತಪ್ಪು, ಅದು ಅವರ ಸಣ್ಣತನ. ರಾಜಕೀಯ ವಿಚಾರ ಬಂದಾಗ ನಾನು ಪಕ್ಷದ ಜೊತೆಗೆ ಇರುತ್ತೇನೆ. ಶಿವಕುಮಾರ್‌ ಅವರ ಆರೋಪವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವೇದಿಕೆಗೆ ವಿಚಾರವನ್ನು ಕೊಂಡೊಯ್ಯುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮ್ಮ ಪಕ್ಷದ ಹಿರಿಯ ಸಹೋದ್ಯೋಗಿಯ ಮೇಲೆಯೇ ಡಿಕೆಶಿ ಇಂತಹ ಹೇಳಿಕೆ ನೀಡಬಾರದಿತ್ತು ಎಂದು ಕೆಲವು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ಪತ್ರಕರ್ತರು ಹೇಳಿದ್ದಾರೆ. ಅದರಂತೆಯೆ ಶಿವಕುಮಾರ್‌ ಅವರ ಹೇಳಿಕೆಯನ್ನು ಮಾಜಿ ಸಂಸದೆ ರಮ್ಯಾ ವಿರೋಧಿಸಿದ್ದರು.

ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ರಮ್ಯಾ ಅವರು, “ಬೇರೆ ಬೇರೆ ಪಕ್ಷದಲ್ಲಿ ಇರುವವರು ಪರಸ್ಪರ ಭೇಟಿಯಾಗುತ್ತಾರೆ, ಸಮಾರಂಭಗಳಿಗೆ ಹೋಗುತ್ತಾರೆ. ಅಷ್ಟೆ ಅಲ್ಲದೆ ಬೇರೆ ಪಕ್ಷದಲ್ಲಿ ಇರುವ ಕುಟುಂಬಗಳ ನಡುವೆ ಮದುವೆಯೂ ಆಗುತ್ತಾರೆ. ಡಿಕೆ ಶಿವಕುಮಾರ್ ಅವರು ಕಟ್ಟಾ ಕಾಂಗ್ರೆಸ್ಸಿಗ ಎಂ.ಬಿ. ಪಾಟೀಲ್ ಬಗ್ಗೆ ಹೀಗೆ ಹೇಳಿದ್ದು ನನಗೆ ಆಶ್ಚರ್ಯವಾಗಿದೆ. ಒಂದೇ ಪಕ್ಷವಾಗಿ ಎಲ್ಲರೂ ಒಟ್ಟಿಗೆ ಚುನಾವಣೆ ಎದುರಿಸಬೇಕಲ್ಲವೇ?” ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದರು.

ರಮ್ಯಾ ಅವರ ಟ್ವೀಟ್‌ಗೆ ಪ್ರತಿಯಾಗಿ ಕಾಂಗ್ರೆಸ್‌ನ ಕೆಲವು ನಾಯಕರು ಮತ್ತು ಕಾರ್ಯಕರ್ತರು ಅವರ ಮೇಲೆ ದಾಳಿ ಮಾಡಿ, ಅವರನ್ನು ಟ್ರೋಲ್ ಮಾಡಿತ್ತು. ಈ ರೀತಿ ದಾಳಿ ಮಾಡಲು ಸ್ವತಃ ರಾಜ್ಯ ಕಾಂಗ್ರೆಸ್‌ ‘ಕಚೇರಿ’ಯೆ ಕೇಳಿಕೊಂಡಿದೆ ಎಂದು ರಮ್ಯ ಆರೋಪಿಸಿದ್ದಾರೆ. ಜೊತೆಗೆ ‘ಕಚೇರಿ’ ಎಂದರೆ, ‘ಡಿ.ಕೆ. ಶಿವಕುಮಾರ್‌‌ ನಾಯಕತ್ವದ ರಾಜ್ಯ ಕಾಂಗ್ರೆಸ್‌’ ಎಂದು ಅವರು ಹೇಳಿದ್ದಾರೆ.

ತನ್ನ ವಿರುದ್ದ ಕಾಂಗ್ರೆಸ್‌ ಐಟಿ ಸೆಲ್ ರಚಿಸಿದೆ ಎನ್ನಲಾಗಿರುವ ಕೆಲವು ಸಂದೇಶಗಳನ್ನು ಸ್ಕ್ರೀನ್‌ ಶಾರ್ಟ್‌ಗಳನ್ನು ರಮ್ಯಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಡಿಕೆಶಿ ಆಫೀಸ್‌ ಇಂದ ಬಂದಿದೆ ಎನ್ನಲಾಗಿರುವ ರಮ್ಯಾ ಹಂಚಿಕೊಂಡಿರುವ ಸ್ಕ್ರೀನ್‌ಶಾರ್ಟ್

ಕಾಂಗ್ರೆಸ್‌ ಪಕ್ಷದಲ್ಲಿ ಮೇಲೇರಲು ಡಿ.ಕೆ. ಶಿವಕುಮಾರ್‌ ಅವರು ಅವಕಾಶ ನೀಡಿದ್ದಾರೆ ಎಂಬ, ಸಂದೇಶವನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ರಮ್ಯಾ, “ನನಗೆ ಅವಕಾಶಗಳನ್ನು ನೀಡಿದವರು ಮತ್ತು ನನ್ನ ಬೆಂಬಲಕ್ಕೆ ನಿಂತವರು ಯಾರಾದರೂ ಇದ್ದರೆ ಅದು ರಾಹುಲ್‌ಗಾಂಧಿ ಮಾತ್ರ. ಉಳಿದಂತೆ ನನಗೆ ಅವಕಾಶಗಳನ್ನು ಕೊಟ್ಟಿದ್ದಾರೆ ಎಂದು ಹೇಳಿಕೊಳ್ಳುವವರು ಅವಕಾಶವಾದಿ ಆಗಿದ್ದಾರೆ. ಈ ಅವಕಾಶವಾದಿ ನನ್ನ ಬೆನ್ನಿಗೆ ಚೂರಿ ಹಾಕಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ನೀವು ಟಿವಿಯಲ್ಲಿ ನೋಡುವ ಎಲ್ಲವೂ ಅವರ ಮೋಸಗೊಳಿಸುವ ಮನಸ್ಸನ್ನು ಮರೆಮಾಚುವ ಪ್ರಹಸನವಾಗಿದೆ” ಎಂದು ಅವರು ಡಿಕೆ ಶಿವಕುಮಾರ್‌ ಅವರ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

“ನಾನು ಪಕ್ಷವನ್ನು ತ್ಯಜಿಸಿದ ನಂತರ, ‘ಕಾಂಗ್ರೆಸ್‌ಗೆ 8 ಕೋಟಿ ಕಾಂಗ್ರೆಸ್‌ಗೆ ವಂಚಿಸಿ ಓಡಿಹೋದಳು’ ಎಂಬ ಸುದ್ದಿ ಮುಖ್ಯವಾಗಿ ಕನ್ನಡ ವಾಹಿನಿಗಳಲ್ಲಿ ನನ್ನ ವಿಶ್ವಾಸಾರ್ಹತೆಯನ್ನು ನಾಶಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ನಾನು ಓಡಿಹೋಗಲಿಲ್ಲ. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆ. ನಾನು ಪಕ್ಷಕ್ಕೆ 8 ಕೋಟಿ ವಂಚನೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಉಲ್ಲೇಖಿಸಿ “ನಾನು ಮೌನವಾಗಿರುವುದು ನನ್ನ ತಪ್ಪು. ದಯವಿಟ್ಟು ನೀವು ಮುಂದೆ ಕರ್ನಾಟಕಕ್ಕೆ ಬಂದಾಗ ಈ ಬಗ್ಗೆ ಮಾಧ್ಯಮಗಳೊಂದಿಗೆ ಸ್ಪಷ್ಟಪಡಿಸಿ. ಇದು ನೀವು ನನಗಾಗಿ ಮಾಡಬಹುದಾದ ಕನಿಷ್ಠ ಕೆಲಸ. ನನಗೆ ನನ್ನ ಜೀವನದುದ್ದಕ್ಕೂ ಈ ನಿಂದನೆ ಮತ್ತು ಟ್ರೋಲಿಂಗ್‌ನೊಂದಿಗೆ ಬದುಕಬೇಕಾಗಿಲ್ಲ” ಎಂದು ರಮ್ಯಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದಕ್ಕೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ಒಳ್ಳೇಯದು

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...