Homeಕರ್ನಾಟಕಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌‌ ಆದೇಶದಂತೆ ಕಾಂಗ್ರೆಸ್ ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ರಮ್ಯ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿಯಾಗಿದ್ದು, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ ಎಂದು ಮಂಡ್ಯ ಕ್ಷೇತ್ರದ ಮಾಜಿ ಸಂಸದೆ, ನಟಿ ರಮ್ಯಾ ಗುರುವಾರ ಆರೋಪಿಸಿದ್ದಾರೆ. ಡಿ.ಕೆ. ಶಿವಕುಮಾರ್‌‌‌ ಅವರ ಆದೇಶದಂತೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಅವರು ಕಾಂಗ್ರೆಸ್ ಐಟಿ ಸೆಲ್‌ ಕಡೆಯಿಂದ ರಚಿತವಾಗಿದೆ ಎಂದು ಹೇಳಿ ಹಲವು ಸಂದೇಶಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದಿಂದ ರಕ್ಷಣೆ ಕೋರಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಕಾಂಗ್ರೆಸ್‌ನ ಪ್ರಚಾರ ಸಮಿತಿ ನಾಯಕ ಎಂ.ಬಿ. ಪಾಟೀಲ್ ಅವರನ್ನು ರಹಸ್ಯವಾಗಿ ಭೇಟಿ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು. ಡಿ.ಕೆ. ಶಿವಕುಮಾರ್‌ ಅವರ ಆರೋಪವನ್ನು ನಿರಾಕರಿಸಿರುವ ಎಂ.ಬಿ. ಪಾಟೀಲ್‌, “ಅಶ್ವಥ್‌ ನಾರಾಯಣ ಅವರು ನನ್ನನ್ನು ಭೇಟಿ ಮಾಡಿಲ್ಲ. ಒಂದು ವೇಳೆ ಅವರು ಭೇಟಿ ಮಾಡಿದ್ದರೂ ತಪ್ಪಿಲ್ಲ. ಅದು ನನ್ನ ಖಾಸಗಿ ವಿಚಾರ, ಅದರ ಬಗ್ಗೆ ಮಾತನಾಡಿರುವುದು ತಪ್ಪು, ಅದು ಅವರ ಸಣ್ಣತನ. ರಾಜಕೀಯ ವಿಚಾರ ಬಂದಾಗ ನಾನು ಪಕ್ಷದ ಜೊತೆಗೆ ಇರುತ್ತೇನೆ. ಶಿವಕುಮಾರ್‌ ಅವರ ಆರೋಪವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವೇದಿಕೆಗೆ ವಿಚಾರವನ್ನು ಕೊಂಡೊಯ್ಯುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮ್ಮ ಪಕ್ಷದ ಹಿರಿಯ ಸಹೋದ್ಯೋಗಿಯ ಮೇಲೆಯೇ ಡಿಕೆಶಿ ಇಂತಹ ಹೇಳಿಕೆ ನೀಡಬಾರದಿತ್ತು ಎಂದು ಕೆಲವು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ಪತ್ರಕರ್ತರು ಹೇಳಿದ್ದಾರೆ. ಅದರಂತೆಯೆ ಶಿವಕುಮಾರ್‌ ಅವರ ಹೇಳಿಕೆಯನ್ನು ಮಾಜಿ ಸಂಸದೆ ರಮ್ಯಾ ವಿರೋಧಿಸಿದ್ದರು.

ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ರಮ್ಯಾ ಅವರು, “ಬೇರೆ ಬೇರೆ ಪಕ್ಷದಲ್ಲಿ ಇರುವವರು ಪರಸ್ಪರ ಭೇಟಿಯಾಗುತ್ತಾರೆ, ಸಮಾರಂಭಗಳಿಗೆ ಹೋಗುತ್ತಾರೆ. ಅಷ್ಟೆ ಅಲ್ಲದೆ ಬೇರೆ ಪಕ್ಷದಲ್ಲಿ ಇರುವ ಕುಟುಂಬಗಳ ನಡುವೆ ಮದುವೆಯೂ ಆಗುತ್ತಾರೆ. ಡಿಕೆ ಶಿವಕುಮಾರ್ ಅವರು ಕಟ್ಟಾ ಕಾಂಗ್ರೆಸ್ಸಿಗ ಎಂ.ಬಿ. ಪಾಟೀಲ್ ಬಗ್ಗೆ ಹೀಗೆ ಹೇಳಿದ್ದು ನನಗೆ ಆಶ್ಚರ್ಯವಾಗಿದೆ. ಒಂದೇ ಪಕ್ಷವಾಗಿ ಎಲ್ಲರೂ ಒಟ್ಟಿಗೆ ಚುನಾವಣೆ ಎದುರಿಸಬೇಕಲ್ಲವೇ?” ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದರು.

ರಮ್ಯಾ ಅವರ ಟ್ವೀಟ್‌ಗೆ ಪ್ರತಿಯಾಗಿ ಕಾಂಗ್ರೆಸ್‌ನ ಕೆಲವು ನಾಯಕರು ಮತ್ತು ಕಾರ್ಯಕರ್ತರು ಅವರ ಮೇಲೆ ದಾಳಿ ಮಾಡಿ, ಅವರನ್ನು ಟ್ರೋಲ್ ಮಾಡಿತ್ತು. ಈ ರೀತಿ ದಾಳಿ ಮಾಡಲು ಸ್ವತಃ ರಾಜ್ಯ ಕಾಂಗ್ರೆಸ್‌ ‘ಕಚೇರಿ’ಯೆ ಕೇಳಿಕೊಂಡಿದೆ ಎಂದು ರಮ್ಯ ಆರೋಪಿಸಿದ್ದಾರೆ. ಜೊತೆಗೆ ‘ಕಚೇರಿ’ ಎಂದರೆ, ‘ಡಿ.ಕೆ. ಶಿವಕುಮಾರ್‌‌ ನಾಯಕತ್ವದ ರಾಜ್ಯ ಕಾಂಗ್ರೆಸ್‌’ ಎಂದು ಅವರು ಹೇಳಿದ್ದಾರೆ.

ತನ್ನ ವಿರುದ್ದ ಕಾಂಗ್ರೆಸ್‌ ಐಟಿ ಸೆಲ್ ರಚಿಸಿದೆ ಎನ್ನಲಾಗಿರುವ ಕೆಲವು ಸಂದೇಶಗಳನ್ನು ಸ್ಕ್ರೀನ್‌ ಶಾರ್ಟ್‌ಗಳನ್ನು ರಮ್ಯಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಡಿಕೆಶಿ ಆಫೀಸ್‌ ಇಂದ ಬಂದಿದೆ ಎನ್ನಲಾಗಿರುವ ರಮ್ಯಾ ಹಂಚಿಕೊಂಡಿರುವ ಸ್ಕ್ರೀನ್‌ಶಾರ್ಟ್

ಕಾಂಗ್ರೆಸ್‌ ಪಕ್ಷದಲ್ಲಿ ಮೇಲೇರಲು ಡಿ.ಕೆ. ಶಿವಕುಮಾರ್‌ ಅವರು ಅವಕಾಶ ನೀಡಿದ್ದಾರೆ ಎಂಬ, ಸಂದೇಶವನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ರಮ್ಯಾ, “ನನಗೆ ಅವಕಾಶಗಳನ್ನು ನೀಡಿದವರು ಮತ್ತು ನನ್ನ ಬೆಂಬಲಕ್ಕೆ ನಿಂತವರು ಯಾರಾದರೂ ಇದ್ದರೆ ಅದು ರಾಹುಲ್‌ಗಾಂಧಿ ಮಾತ್ರ. ಉಳಿದಂತೆ ನನಗೆ ಅವಕಾಶಗಳನ್ನು ಕೊಟ್ಟಿದ್ದಾರೆ ಎಂದು ಹೇಳಿಕೊಳ್ಳುವವರು ಅವಕಾಶವಾದಿ ಆಗಿದ್ದಾರೆ. ಈ ಅವಕಾಶವಾದಿ ನನ್ನ ಬೆನ್ನಿಗೆ ಚೂರಿ ಹಾಕಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ನೀವು ಟಿವಿಯಲ್ಲಿ ನೋಡುವ ಎಲ್ಲವೂ ಅವರ ಮೋಸಗೊಳಿಸುವ ಮನಸ್ಸನ್ನು ಮರೆಮಾಚುವ ಪ್ರಹಸನವಾಗಿದೆ” ಎಂದು ಅವರು ಡಿಕೆ ಶಿವಕುಮಾರ್‌ ಅವರ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

“ನಾನು ಪಕ್ಷವನ್ನು ತ್ಯಜಿಸಿದ ನಂತರ, ‘ಕಾಂಗ್ರೆಸ್‌ಗೆ 8 ಕೋಟಿ ಕಾಂಗ್ರೆಸ್‌ಗೆ ವಂಚಿಸಿ ಓಡಿಹೋದಳು’ ಎಂಬ ಸುದ್ದಿ ಮುಖ್ಯವಾಗಿ ಕನ್ನಡ ವಾಹಿನಿಗಳಲ್ಲಿ ನನ್ನ ವಿಶ್ವಾಸಾರ್ಹತೆಯನ್ನು ನಾಶಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ನಾನು ಓಡಿಹೋಗಲಿಲ್ಲ. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆ. ನಾನು ಪಕ್ಷಕ್ಕೆ 8 ಕೋಟಿ ವಂಚನೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಉಲ್ಲೇಖಿಸಿ “ನಾನು ಮೌನವಾಗಿರುವುದು ನನ್ನ ತಪ್ಪು. ದಯವಿಟ್ಟು ನೀವು ಮುಂದೆ ಕರ್ನಾಟಕಕ್ಕೆ ಬಂದಾಗ ಈ ಬಗ್ಗೆ ಮಾಧ್ಯಮಗಳೊಂದಿಗೆ ಸ್ಪಷ್ಟಪಡಿಸಿ. ಇದು ನೀವು ನನಗಾಗಿ ಮಾಡಬಹುದಾದ ಕನಿಷ್ಠ ಕೆಲಸ. ನನಗೆ ನನ್ನ ಜೀವನದುದ್ದಕ್ಕೂ ಈ ನಿಂದನೆ ಮತ್ತು ಟ್ರೋಲಿಂಗ್‌ನೊಂದಿಗೆ ಬದುಕಬೇಕಾಗಿಲ್ಲ” ಎಂದು ರಮ್ಯಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದಕ್ಕೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ಒಳ್ಳೇಯದು

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...