Homeಕರ್ನಾಟಕಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌‌ ಆದೇಶದಂತೆ ಕಾಂಗ್ರೆಸ್ ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ರಮ್ಯ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿಯಾಗಿದ್ದು, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ ಎಂದು ಮಂಡ್ಯ ಕ್ಷೇತ್ರದ ಮಾಜಿ ಸಂಸದೆ, ನಟಿ ರಮ್ಯಾ ಗುರುವಾರ ಆರೋಪಿಸಿದ್ದಾರೆ. ಡಿ.ಕೆ. ಶಿವಕುಮಾರ್‌‌‌ ಅವರ ಆದೇಶದಂತೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಅವರು ಕಾಂಗ್ರೆಸ್ ಐಟಿ ಸೆಲ್‌ ಕಡೆಯಿಂದ ರಚಿತವಾಗಿದೆ ಎಂದು ಹೇಳಿ ಹಲವು ಸಂದೇಶಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದಿಂದ ರಕ್ಷಣೆ ಕೋರಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಕಾಂಗ್ರೆಸ್‌ನ ಪ್ರಚಾರ ಸಮಿತಿ ನಾಯಕ ಎಂ.ಬಿ. ಪಾಟೀಲ್ ಅವರನ್ನು ರಹಸ್ಯವಾಗಿ ಭೇಟಿ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು. ಡಿ.ಕೆ. ಶಿವಕುಮಾರ್‌ ಅವರ ಆರೋಪವನ್ನು ನಿರಾಕರಿಸಿರುವ ಎಂ.ಬಿ. ಪಾಟೀಲ್‌, “ಅಶ್ವಥ್‌ ನಾರಾಯಣ ಅವರು ನನ್ನನ್ನು ಭೇಟಿ ಮಾಡಿಲ್ಲ. ಒಂದು ವೇಳೆ ಅವರು ಭೇಟಿ ಮಾಡಿದ್ದರೂ ತಪ್ಪಿಲ್ಲ. ಅದು ನನ್ನ ಖಾಸಗಿ ವಿಚಾರ, ಅದರ ಬಗ್ಗೆ ಮಾತನಾಡಿರುವುದು ತಪ್ಪು, ಅದು ಅವರ ಸಣ್ಣತನ. ರಾಜಕೀಯ ವಿಚಾರ ಬಂದಾಗ ನಾನು ಪಕ್ಷದ ಜೊತೆಗೆ ಇರುತ್ತೇನೆ. ಶಿವಕುಮಾರ್‌ ಅವರ ಆರೋಪವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವೇದಿಕೆಗೆ ವಿಚಾರವನ್ನು ಕೊಂಡೊಯ್ಯುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮ್ಮ ಪಕ್ಷದ ಹಿರಿಯ ಸಹೋದ್ಯೋಗಿಯ ಮೇಲೆಯೇ ಡಿಕೆಶಿ ಇಂತಹ ಹೇಳಿಕೆ ನೀಡಬಾರದಿತ್ತು ಎಂದು ಕೆಲವು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ಪತ್ರಕರ್ತರು ಹೇಳಿದ್ದಾರೆ. ಅದರಂತೆಯೆ ಶಿವಕುಮಾರ್‌ ಅವರ ಹೇಳಿಕೆಯನ್ನು ಮಾಜಿ ಸಂಸದೆ ರಮ್ಯಾ ವಿರೋಧಿಸಿದ್ದರು.

ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ರಮ್ಯಾ ಅವರು, “ಬೇರೆ ಬೇರೆ ಪಕ್ಷದಲ್ಲಿ ಇರುವವರು ಪರಸ್ಪರ ಭೇಟಿಯಾಗುತ್ತಾರೆ, ಸಮಾರಂಭಗಳಿಗೆ ಹೋಗುತ್ತಾರೆ. ಅಷ್ಟೆ ಅಲ್ಲದೆ ಬೇರೆ ಪಕ್ಷದಲ್ಲಿ ಇರುವ ಕುಟುಂಬಗಳ ನಡುವೆ ಮದುವೆಯೂ ಆಗುತ್ತಾರೆ. ಡಿಕೆ ಶಿವಕುಮಾರ್ ಅವರು ಕಟ್ಟಾ ಕಾಂಗ್ರೆಸ್ಸಿಗ ಎಂ.ಬಿ. ಪಾಟೀಲ್ ಬಗ್ಗೆ ಹೀಗೆ ಹೇಳಿದ್ದು ನನಗೆ ಆಶ್ಚರ್ಯವಾಗಿದೆ. ಒಂದೇ ಪಕ್ಷವಾಗಿ ಎಲ್ಲರೂ ಒಟ್ಟಿಗೆ ಚುನಾವಣೆ ಎದುರಿಸಬೇಕಲ್ಲವೇ?” ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದರು.

ರಮ್ಯಾ ಅವರ ಟ್ವೀಟ್‌ಗೆ ಪ್ರತಿಯಾಗಿ ಕಾಂಗ್ರೆಸ್‌ನ ಕೆಲವು ನಾಯಕರು ಮತ್ತು ಕಾರ್ಯಕರ್ತರು ಅವರ ಮೇಲೆ ದಾಳಿ ಮಾಡಿ, ಅವರನ್ನು ಟ್ರೋಲ್ ಮಾಡಿತ್ತು. ಈ ರೀತಿ ದಾಳಿ ಮಾಡಲು ಸ್ವತಃ ರಾಜ್ಯ ಕಾಂಗ್ರೆಸ್‌ ‘ಕಚೇರಿ’ಯೆ ಕೇಳಿಕೊಂಡಿದೆ ಎಂದು ರಮ್ಯ ಆರೋಪಿಸಿದ್ದಾರೆ. ಜೊತೆಗೆ ‘ಕಚೇರಿ’ ಎಂದರೆ, ‘ಡಿ.ಕೆ. ಶಿವಕುಮಾರ್‌‌ ನಾಯಕತ್ವದ ರಾಜ್ಯ ಕಾಂಗ್ರೆಸ್‌’ ಎಂದು ಅವರು ಹೇಳಿದ್ದಾರೆ.

ತನ್ನ ವಿರುದ್ದ ಕಾಂಗ್ರೆಸ್‌ ಐಟಿ ಸೆಲ್ ರಚಿಸಿದೆ ಎನ್ನಲಾಗಿರುವ ಕೆಲವು ಸಂದೇಶಗಳನ್ನು ಸ್ಕ್ರೀನ್‌ ಶಾರ್ಟ್‌ಗಳನ್ನು ರಮ್ಯಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಡಿಕೆಶಿ ಆಫೀಸ್‌ ಇಂದ ಬಂದಿದೆ ಎನ್ನಲಾಗಿರುವ ರಮ್ಯಾ ಹಂಚಿಕೊಂಡಿರುವ ಸ್ಕ್ರೀನ್‌ಶಾರ್ಟ್

ಕಾಂಗ್ರೆಸ್‌ ಪಕ್ಷದಲ್ಲಿ ಮೇಲೇರಲು ಡಿ.ಕೆ. ಶಿವಕುಮಾರ್‌ ಅವರು ಅವಕಾಶ ನೀಡಿದ್ದಾರೆ ಎಂಬ, ಸಂದೇಶವನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ರಮ್ಯಾ, “ನನಗೆ ಅವಕಾಶಗಳನ್ನು ನೀಡಿದವರು ಮತ್ತು ನನ್ನ ಬೆಂಬಲಕ್ಕೆ ನಿಂತವರು ಯಾರಾದರೂ ಇದ್ದರೆ ಅದು ರಾಹುಲ್‌ಗಾಂಧಿ ಮಾತ್ರ. ಉಳಿದಂತೆ ನನಗೆ ಅವಕಾಶಗಳನ್ನು ಕೊಟ್ಟಿದ್ದಾರೆ ಎಂದು ಹೇಳಿಕೊಳ್ಳುವವರು ಅವಕಾಶವಾದಿ ಆಗಿದ್ದಾರೆ. ಈ ಅವಕಾಶವಾದಿ ನನ್ನ ಬೆನ್ನಿಗೆ ಚೂರಿ ಹಾಕಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ನೀವು ಟಿವಿಯಲ್ಲಿ ನೋಡುವ ಎಲ್ಲವೂ ಅವರ ಮೋಸಗೊಳಿಸುವ ಮನಸ್ಸನ್ನು ಮರೆಮಾಚುವ ಪ್ರಹಸನವಾಗಿದೆ” ಎಂದು ಅವರು ಡಿಕೆ ಶಿವಕುಮಾರ್‌ ಅವರ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

“ನಾನು ಪಕ್ಷವನ್ನು ತ್ಯಜಿಸಿದ ನಂತರ, ‘ಕಾಂಗ್ರೆಸ್‌ಗೆ 8 ಕೋಟಿ ಕಾಂಗ್ರೆಸ್‌ಗೆ ವಂಚಿಸಿ ಓಡಿಹೋದಳು’ ಎಂಬ ಸುದ್ದಿ ಮುಖ್ಯವಾಗಿ ಕನ್ನಡ ವಾಹಿನಿಗಳಲ್ಲಿ ನನ್ನ ವಿಶ್ವಾಸಾರ್ಹತೆಯನ್ನು ನಾಶಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ನಾನು ಓಡಿಹೋಗಲಿಲ್ಲ. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆ. ನಾನು ಪಕ್ಷಕ್ಕೆ 8 ಕೋಟಿ ವಂಚನೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಉಲ್ಲೇಖಿಸಿ “ನಾನು ಮೌನವಾಗಿರುವುದು ನನ್ನ ತಪ್ಪು. ದಯವಿಟ್ಟು ನೀವು ಮುಂದೆ ಕರ್ನಾಟಕಕ್ಕೆ ಬಂದಾಗ ಈ ಬಗ್ಗೆ ಮಾಧ್ಯಮಗಳೊಂದಿಗೆ ಸ್ಪಷ್ಟಪಡಿಸಿ. ಇದು ನೀವು ನನಗಾಗಿ ಮಾಡಬಹುದಾದ ಕನಿಷ್ಠ ಕೆಲಸ. ನನಗೆ ನನ್ನ ಜೀವನದುದ್ದಕ್ಕೂ ಈ ನಿಂದನೆ ಮತ್ತು ಟ್ರೋಲಿಂಗ್‌ನೊಂದಿಗೆ ಬದುಕಬೇಕಾಗಿಲ್ಲ” ಎಂದು ರಮ್ಯಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದಕ್ಕೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ಒಳ್ಳೇಯದು

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...