Homeಕರ್ನಾಟಕಸಿದ್ಧಗಂಗಾ, ನೊಣವಿಣಕೆರೆ, ಗುರುಗುಂಡ ಮಠಗಳಿಗೆ ಡಿ.ಕೆ.ಶಿವಕುಮಾರ್ ಭೇಟಿ: ಸ್ವಾಮೀಜಿಗಳೊಂದಿಗೆ ಚರ್ಚೆ

ಸಿದ್ಧಗಂಗಾ, ನೊಣವಿಣಕೆರೆ, ಗುರುಗುಂಡ ಮಠಗಳಿಗೆ ಡಿ.ಕೆ.ಶಿವಕುಮಾರ್ ಭೇಟಿ: ಸ್ವಾಮೀಜಿಗಳೊಂದಿಗೆ ಚರ್ಚೆ

- Advertisement -
- Advertisement -

ಜೈಲಿನಿಂದ ಬಿಡುಗಡೆಯಾದ ಬಳಿಕ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಮಠಗಳನ್ನು ಸುತ್ತುವುದರಲ್ಲಿ ನಿರತರಾಗಿದ್ದಾರೆ. ನೊಣವಿನಕೆರೆಯ ಕಾಡಸಿದ್ದೇಶ್ವರ ಮಠ, ಗುರುಗುಂಡ ಬ್ರಹ್ಮಶ್ವರ ಮಠ, ಸಿದ್ದಗಂಗಾ ಮಠಗಳನ್ನು ಸುತ್ತಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಮನೋಭಿಲಾಷೆಗಳು ಈಡೇರಿದಾಗ ಮತ್ತು ಸಂಕಷ್ಟಗಳು ನಿವಾರಣೆಯಾದಾಗ ಹೀಗೆ ಮಠಗಳನ್ನು ಸುತ್ತುವುದನ್ನು ಹಿಂದಿನಿಂದಲೂ ರೂಢಿಸಿಕೊಂಡು ಬಂದಿರುವ ಡಿ.ಕೆ.ಶಿವಕುಮಾರ್, ಭಾನುವಾರ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಅಜ್ಜಯ್ಯನವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು.

ಬಳಿಕ ಶಿರಾ ತಾಲೂಕು ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠಕ್ಕೆ ತೆರಳಿ, ನಂಜಾವಧೂತ ಸ್ವಾಮಿಗಳನ್ನು ಭೇಟಿ ಮಾಡಿದರು. ನಂಜಾವಧೂತ ಸ್ವಾಮಿಗಳು, ಡಿ.ಕೆ.ಶಿವಕುಮಾರ್ ಪರವಾಗಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ಶಿರಾದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉಭಯ ಪಕ್ಷಗಳ ಬಾವುಗಳನ್ನು ಹಿಡಿದು ಸ್ವಾಗತಿಸಿದರು. ನಂಜಾವಧೂತ ಸ್ವಾಮಿಗಳಿಗೆ ನಡೆದಿದ್ದೆಲ್ಲವನ್ನೂ ಡಿಕೆಶಿ ವಿವರಿಸಿದರು ಎಂದು ತಿಳಿದು ಬಂದಿದೆ.

ಸೋಮವಾರ ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾ ಮಠಕ್ಕೆ ಬಂದರು. ಹಿರಿಯ ಸ್ವಾಮಿಗಳ ಗದ್ದುಗೆಗೆ ಭೇಟಿ ನೀಡಿ, ನಮಸ್ಕರಿಸಿ ನಂತರ ಸಿದ್ದಲಿಂಗಸ್ವಾಮಿಗಳನ್ನು ಭೇಟಿ ಮಾಡಿದರು. ಇಲ್ಲಿ ಕೂಡ ಸ್ವಲ್ಪ ಹೊತ್ತು ಶ್ರೀಗಳೊಂದಿಗೆ ಮಾತುಕತೆ ನಡೆಸಿದರು.

ಡಿ.ಕೆ.ಶಿವಕುಮಾರ್ ಒಂದೇ ದಿನದಲ್ಲಿ ಮೂರು ಮಠಗಳನ್ನು ಸುತ್ತಿ ಮನಶಾಂತಿ, ನೆಮ್ಮದಿಯಿಂದ ಇರಲು ಪ್ರಯತ್ನಿಸಿದರು. ತಿಹಾರ್ ಜೈಲಿನಲ್ಲಿದ್ದಾಗ ಡಿ.ಕೆ.ಶಿ ಅವರಿಗೆ ರಕ್ತದೊತ್ತಡ ಅಧಿಕವಾಗಿತ್ತು. ಅವರೇ ಹೇಳಿದಂತೆ ಬಿ.ಪಿ ಸಮತೋಲನಕ್ಕೆ ಬಂದಿಲ್ಲ. ಹೀಗೆ ಮಠಗಳನ್ನು ಸುತ್ತಿದರೆ ನೆಮ್ಮದಿ ಸಿಗಬಹುದೆಂಬ ನಂಬಿಕೆ ಅವರಲ್ಲಿ ಬಲವಾದಂತಿದೆ.

ಎಲ್ಲಾ ಶ್ರೀಗಳಿಗೂ ಕೃತಜ್ಞತೆಯನ್ನು ಸಲ್ಲಿಸಿರುವ ಡಿ.ಕೆ.ಶಿವಕುಮಾರ್ ನ್ಯಾಯಯುತ ಹಾದಿಯಲ್ಲೇ ನಡೆಯುತ್ತಿದ್ದೇನೆ. ಮಾನಸಿಕ ನೆಮ್ಮದಿಗಾಗಿ ಮಠಗಳನ್ನು ಭೇಟಿ ಮಾಡಿದ್ದೇನೆ. ಹಿಂದೆಯೂ ಹಲವು ಬಾರಿ ಮಠಗಳಿಗೆ ಭೇಟಿ ನೀಡಿದ್ದೇನೆ. ಶ್ರೀಗಳ ಆಶೀರ್ವಾದ ಪಡೆಯುವ ಉದ್ದೇಶದಿಂದ ಬಂದಿದ್ದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...