HomeಮುಖಪುಟSIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

- Advertisement -
- Advertisement -

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಕ್ವಿಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದಲ್ಲಿ ಮತದಾರರ ಹಕ್ಕುಗಳ ಮೇಲೆ ದಾಳಿ ನಡೆಯುತ್ತಿದೆ. ಮತಗಳ್ಳತನದ ವಿರುದ್ಧ ಹೋರಾಟ ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ. ಪಕ್ಷದ ಇತರ ಕೆಲಸಗಳನ್ನು ಬದಿಗಿಟ್ಟು ವೋಟ್ ಚೋರಿ ವಿರುದ್ಧ ಹೋರಾಟ ನಡೆಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾಂಗ್ರೆಸ್ನ ಬಿಎಲ್ಎ-2 ಗಳು ಹಾಗೂ ಬೂತ್ ಮಟ್ಟದ ಕಾರ್ಯಕರ್ತರು ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು. ಮತದಾರರ ನೋಂದಣಿ ಅರ್ಜಿ ಗಳನ್ನು ವಾಪಾಸ್ ಸಲ್ಲಿಸದೇ ಇರುವವರನ್ನು ಸಂಪರ್ಕಿಸಿ, ಅರ್ಜಿ ವಾಪಾಸ್ ನೀಡುವಂತೆ ಮಾಡಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಅಳಿಸದಂತೆ ಎಚ್ಚರಿಕೆ ವಹಿಸಬೇಕು. 18 ವರ್ಷ ತುಂಬಿದ ಯುವಕರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅಧಿಕಾರ ಶಾಶ್ವತವಲ್ಲ, ಪಕ್ಷ ಉಳಿದರೆ ಸರ್ಕಾರ ಹಾಗೂ ಅಧಿಕಾರ ಎಲ್ಲವೂ ಉಳಿಯುತ್ತದೆ. ಹೀಗಾಗಿ ವ್ಯಕ್ತಿ ಪೂಜೆ ಮಾಡುವ ಬದಲು ಪಕ್ಷವನ್ನು ಬಲಪಡಿಸಬೇಕು ಸ್ವಾತಂತ್ರ್ಯ ಅಮೂಲ್ಯವಾದದ್ದು. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಹೊಸ ಮುನ್ನುಡಿ ಬರೆಯಲಾಗಿತ್ತು. ಇಂದು ಸರ್ವಾಧಿಕಾರಿ ಮನಸ್ಥಿತಿಯವರು ಅಧಿಕಾರ ಬಿಟ್ಟು ತೊಲಗಬೇಕು ಎಂಬ ಸಂದೇಶ ನೀಡಬೇಕಿದೆ. ಅಂದು ಸ್ವರಾಜ್ಯ ನಮ ಜನಸಿದ್ಧ ಹಕ್ಕು ಎಂಬ ಘೋಷಣೆ ಮೊಳಗಿದ್ದರೆ, ಇಂದು ಪ್ರತಿಭಟನೆ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸುವುದು ನಮ ಜನಸಿದ್ಧ ಹಕ್ಕು ಎಂಬ ಘೋಷಣೆ ಮೊಳಗಬೇಕಿದೆ ಎಂದರು.

ಸಂವಿಧಾನವೇ ನಮಗೆ ಪವಿತ್ರ ಗ್ರಂಥ. ನಮ ಹೆಗಲ ಮೇಲೆ ತ್ರಿವರ್ಣ ಧ್ವಜವಿದೆ. ಕಾಂಗ್ರೆಸ್ ಪಕ್ಷ ಯಾರಿಗೂ ತಲೆಬಾಗುವುದಿಲ್ಲ. ಗಾಂಧೀ ಕುಟುಂಬವನ್ನು ದೇಶದಿಂದ ಹೊರ ಹಾಕಲು ಹಲವು ರೀತಿಯ ಅಪಪ್ರಚಾರ ಹಾಗೂ ಷಡ್ಯಂತ್ರಗಳು ನಡೆದವು. ಯುಪಿಎ ಸರ್ಕಾರದ ವಿರುದ್ಧ ನಡೆದ ಅಪಪ್ರಚಾರದಿಂದ ಕಾಂಗ್ರೆಸ್ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಬೇಕಾಯಿತು. ಯುವ ಸಮುದಾಯಕ್ಕೆ ವಾಸ್ತವಾಂಶ ತಿಳಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದರು. ಕರ್ನಾಟಕದಲ್ಲಿ ಚಾಮರಾಜನಗರದಿಂದ ಬೀದರ್ವರೆಗೆ ನಡೆದ ಯಾತ್ರೆಗೆ ಅಪಾರ ಜನಬೆಂಬಲ ದೊರೆಯಿತು ಎಂದು ಸರಿಸಿದರು.

ಮಹಾತ್ಮ ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಸಲಾಗಿದೆ. ಇದರ ಅಂಗವಾಗಿ ರಾಜ್ಯಾದ್ಯಂತ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಬಿಜೆಪಿ ರೀತಿಯಲ್ಲಿ ನೂರಾರು ಎಕರೆ ಜಾಗವನ್ನು ಪಡೆದುಕೊಂಡಿಲ್ಲ. ಇಂದಿರಾ ಭವನ ಹಾಗೂ ಪ್ರಿಯದರ್ಶಿನಿ ಭವನಗಳಿಗೆ ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದರು.

ಶೀಘ್ರದಲ್ಲೇ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಗಾಂಧಿನಗರದ ರೇಸ್ಕೋರ್ಸ್ ರಸ್ತೆಯ ನಿವೇಶನದಲ್ಲಿ ನೂತನ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೂ ಏಕಕಾಲದಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಶಂಕುಸ್ಥಾಪನೆ ಕಾರ್ಯಕ್ರಮದ ದಿನ 70 ವರ್ಷ ಮೇಲ್ಪಟ್ಟ 100 ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಸನ್ಮಾನಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಮನವಿ ಮಾಡಿದರು. ಪಕ್ಷಕ್ಕಾಗಿ ನಿಷ್ಠೆಯಿಂದ ಹಾಗೂ ಪ್ರಾಮಾಣಿಕವಾಗಿ ದುಡಿದ ಕಾರ್ಯಕರ್ತರನ್ನು ಗುರುತಿಸಿ ಗೌರವಿಸಬೇಕು. ಪಕ್ಷದ ಕಚೇರಿಗಳಿಗೆ ನಿವೇಶನ ನೀಡಿದವರು ಹಾಗೂ ಆರ್ಥಿಕ ನೆರವು ನೀಡಿದವರನ್ನೂ ರಾಜ್ಯೋತ್ಸವ ಮಾದರಿಯಲ್ಲಿ ಸನಾನಿಸಿ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಭಾರತ್ ಜೋಡೋ ಯಾತ್ರೆಯ ನೆನಪಿಗಾಗಿ ಸುಮಾರು 1,000 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ ಯುವಕರನ್ನು ಒಳಗೊಂಡ 10 ಸಾವಿರ ಸಂಘಟನೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಶೀಘ್ರದಲ್ಲೇ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಈ ಸಂಘಟನೆಗಳಿಗೆ ಹೊಸ ಲಾಂಛನವನ್ನೂ ನೀಡಲಾಗುವುದು. 2029ರ ವೇಳೆಗೆ ದೇಶದಲ್ಲಿ ಮಹತ್ವದ ರಾಜಕೀಯ ಬದಲಾವಣೆ ಆಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ಸುಮಾರು 70 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. 2028ರ ವಿಧಾನಸಭೆ ಹಾಗೂ 2029ರ ಲೋಕಸಭೆ ಚುನಾವಣೆ ಕಾಂಗ್ರೆಸ್ನ ಪ್ರಮುಖ ಗುರಿಯಾಗಿರಬೇಕು. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಅದು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರತಿ ಗ್ರಾಮ ಪಂಚಾಯಿತಿಗೂ ಗ್ಯಾರಂಟಿ ಯೋಜನೆಗಳ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲಾಗುವುದು. ಈಗಾಗಲೇ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಸಮಿತಿಗಳ ನೇಮಕಾತಿ ಮಾಡಲಾಗಿದೆ. ಪಂಚಾಯಿತಿ ಮಟ್ಟದಲ್ಲಿ ಕಾರ್ಯಕರ್ತರನ್ನು ಗುರುತಿಸುವುದರಿಂದ ಗ್ಯಾರಂಟಿ ಯೋಜನೆಗಳಿಗೆ ಮತ್ತಷ್ಟು ಬಲ ಬರಲಿದೆ ಎಂದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೀಕಿಸಿದ್ದರು. ಆದರೆ ಇದೇ ಯೋಜನೆಗಳನ್ನು ಇದೀಗ ದೇಶದ ವಿವಿಧ ರಾಜ್ಯಗಳಲ್ಲಿ ಮಾದರಿಯಾಗಿ ಅನುಸರಿಸಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಸಚಿವರಾದ ರಾಮಲಿಂಗಾ ರೆಡ್ಡಿ, ಶಿವರಾಜ ತಂಗಡಗಿ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವರಾದ ರಾಣಿ ಸತೀಶ್, ಉಮಾಶ್ರೀ, ರಾಜ್ಯಸಭೆಯ ಮಾಜಿ ಸದಸ್ಯ ಎಲ್.ಹನುಮಂತಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...