Homeಕರ್ನಾಟಕಡಿ.ಕೆ.ಶಿವಕುಮಾರ್‌, ನನ್ನ ನಡುವೆ ಬಿರುಕಿಲ್ಲ, ಅದು ಮಾಧ್ಯಮ ಸೃಷ್ಟಿ: ಅಮೃತ ಮಹೋತ್ಸವದಲ್ಲಿ ಸಿದ್ದರಾಮಯ್ಯ ಮನದ ಮಾತು

ಡಿ.ಕೆ.ಶಿವಕುಮಾರ್‌, ನನ್ನ ನಡುವೆ ಬಿರುಕಿಲ್ಲ, ಅದು ಮಾಧ್ಯಮ ಸೃಷ್ಟಿ: ಅಮೃತ ಮಹೋತ್ಸವದಲ್ಲಿ ಸಿದ್ದರಾಮಯ್ಯ ಮನದ ಮಾತು

- Advertisement -
- Advertisement -

“ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ನನ್ನ ನಡುವೆ ಯಾವುದೇ ಬಿರುಕಿಲ್ಲ. ಅದು ಮಾಧ್ಯಮ ಹಾಗೂ ವಿರೋಧಿ ಪಕ್ಷಗಳು ಸೃಷ್ಟಿಸಿರುವ ಸುಳ್ಳು” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದ ಸಿದ್ದರಾಮಯ್ಯನವರ ಅಮೃತ ಮಹೋತ್ಸವ (75ನೇ ಜನ್ಮದಿನದ ಸಂಭ್ರಮ) ಸಮಾರಂಭದಲ್ಲಿ ಅವರು ಮಾತನಾಡಿದರು.

“ಅನೇಕ ಸಲ ಮಾಧ್ಯಮಗಳು, ವಿರೋಧಿ ಪಕ್ಷಗಳು ಸುಳ್ಳುಗಳನ್ನು ಸೃಷ್ಟಿ ಮಾಡಿ ತಪ್ಪು ಮಾಹಿತಿ ನೀಡುತ್ತಿವೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ಬಿರುಕಿದೆ ಎಂಬುದು ಭ್ರಮೆ. ನಾನು ಮತ್ತು ಶಿವಕುಮಾರ್‌ ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಎಂಬ ಸಂದೇಶ ನೀಡಿದರು.

“ನಮ್ಮ ಮುಂದೆ ಇರುವ ಭ್ರಷ್ಟ ಕೋಮುವಾದಿ ಸರ್ಕಾರವನ್ನು ಕಿತ್ತೊಗೆಯುವುದೇ ಆಗಿದೆ. ಈ ಜನಪೀಡಕ ಸರ್ಕಾರವನ್ನು ಕಿತ್ತೊಗೆದು, ರಾಹುಲ್‌ ಗಾಂಧಿಯವರ ನಾಯಕತ್ವದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ತರುತ್ತೇವೆ. ಇದಕ್ಕೆ ನಿಮ್ಮೆಲ್ಲರ ಆರ್ಶೀವಾದ ಇರಬೇಕು” ಎಂದರು.

ತಾವು ನಡೆದು ಬಂದ ಜೀವನವನ್ನು ಮೆಲುಕು ಹಾಕಿದ ಸಿದ್ದರಾಮಯ್ಯನವರು, “ಅಂದಿನಿಂದ ಇಂದಿನವರೆಗೆ ನಿರಂತರವಾಗಿ ರಾಜ್ಯದ ಜನತೆಯ ಸಂಪರ್ಕದಲ್ಲಿದ್ದೇನೆ. ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಶಕ್ತಿಯೇ ಬಹಳ ದೊಡ್ಡದು” ಎಂದು ತಿಳಿಸಿದರು.

“ಜನಶಕ್ತಿಯ ಆರ್ಶೀವಾದ ಇಲ್ಲವಾದರೆ ಯಾರೂ ಕೂಡ, ದೀರ್ಘಕಾಲ ರಾಜಕಾರಣ ಮಾಡಲು ಸಾಧ್ಯವಿಲ್ಲ. ಜನರ ನಿರಂತರವಾದ ಪ್ರೀತಿ, ವಿಶ್ವಾಸ ಆರ್ಶೀವಾದದಿಂದ ಶಾಸಕನಾಗಿ, ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿತು” ಎಂದು ಬಣ್ಣಿಸಿದ್ದಾರೆ.

“ಎಲ್ಲಿಯವರೆಗೆ ದೈಹಿಕವಾಗಿ ಮಾನಸಿಕವಾಗಿ ಸದೃಢನಾಗಿರುತ್ತೇನೋ ಅಲ್ಲಿಯವರೆಗೆ ಸಕ್ರಿಯ ರಾಜಕಾರಣ ಮಾಡಿ ನಾಡಿನ ಸೇವೆಯನ್ನು ಮಾಡುತ್ತೇನೆ. ನಾನು 44 ವರ್ಷ ಕಾಲ ಸಕ್ರಿಯ ರಾಜಕಾರಣದಲ್ಲಿ ಇದ್ದೇನೆ. ಈಗ ಇರುವ ಬಿಜೆಪಿ ಸರ್ಕಾರದಷ್ಟು ಭ್ರಷ್ಟವಾದ, ಕೋಮುವಾದಿಯಾದ ಮತ್ತೊಂದು ಸರ್ಕಾರವನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿರಲಿಲ್ಲ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಸಿದ್ದರಾಮಯ್ಯ ಅಮೃತ ಮಹೋತ್ಸವ: ದುರುದ್ದೇಶಪೂರಿತ ಪೋಸ್ಟ್‌ ಹಾಕಿದ ಬಿಜೆಪಿ

“ರಾಜ್ಯದ ಮೂಲೆ ಮೂಲೆಗಳಿಂದ ಶುಭ ಕೋರಲು ಬಂದಿದ್ದೀರಿ. ನನಗೆ ಶುಭ ಕೋರುವ ಮೂಲಕ- ಈ ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತು ಹೊಗೆಯುವ, ಕಾಂಗ್ರೆಸ್ ಸರ್ಕಾರನ್ನು ಅಧಿಕಾರಕ್ಕೆ ತರುವ ಶಪಥ ಮಾಡಬೇಕು” ಎಂದು ಆಶಿಸಿದರು.

ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಯುವಕರು, ಮಹಿಳೆಯರು ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಡೀ ದೇಶದಲ್ಲಿಯೇ ಈ ಪರಿಸ್ಥಿತಿ ಇದೆ. ಮೋದಿ ಪ್ರಧಾನಿಯಾದ ಮೇಲೆ ಈ ದೇಶ, ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ. ಸಂವಿಧಾನಕ್ಕೆ ರಕ್ಷಣೆ ಇಲ್ಲವಾಗಿದೆ ಎಂದು ಎಚ್ಚರಿಸಿದರು.

ಹಿಂದೂ ರಾಷ್ಟ್ರ ಮಾಡಬೇಕು, ಲೂಟಿ ಮಾಡಬೇಕು, ಸರ್ವಾಧಿಕಾರ ತರಬೇಕು, ಸಂವಿಧಾನ ಬದಲಾಯಿಸಬೇಕು ಎಂಬುದು ಬಿಜೆಪಿಯವರ ಉದ್ದೇಶ. ಕಾಂಗ್ರೆಸ್‌ ಮುಗಿಸಲು ಯಾರಿಂದರೂ ಸಾಧ್ಯವಿಲ್ಲ. ಸಂವಿಧಾನ ಬದಲಾವಣೆ ಮಾಡಲು ಈ ದೇಶದ ಜನ ಬಿಡುವುದಿಲ್ಲ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆದ್ದು ಅಧಿಕಾರಕ್ಕೆ ಬರಲಿದೆ. ಬಡವರ ಬಗ್ಗೆ, ದಲಿತರು, ಹಿಂದುಳಿದ ವರ್ಗದ ಬಗ್ಗೆ ಕಾಳಜಿ ಇರುವವರು ಈ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ರಾಹುಲ್ ಗಾಂಧಿಯವರಿಗೆ ಆ ಅರ್ಹತೆ ಇದೆ. ಮೋದಿ ನುಡಿದಂತೆ ನಡೆಯಲಿಲ್ಲ. ದೇಶದ ಆರ್ಥಿಕತೆ ನಾಶವಾಯಿತು ಎಂದು ಟೀಕಿಸಿದರು.

ಸಮಾರಂಭದಲ್ಲಿ ಸೇರಿದ್ದ ಜನಸ್ತೋಮ

ದಲಿತರು, ರೈತರು, ಅಲ್ಪಸಂಖ್ಯಾತರು, ಹಿಂದುಳಿದವರ ಬದುಕನ್ನು ಹಾಳು ಮಾಡಿದ್ದೀರಿ. ಯುವಕರಿಗೆ ಉದ್ಯೋಗ ನೀಡಲಿಲ್ಲ. ಬೆಲೆ ಏರಿಕೆ ಗಗನಕ್ಕೇರಿದೆ. ಕರ್ನಾಟಕದಲ್ಲಿರುವ ಗುತ್ತಿಗೆದಾರರ ಸಂಘದವರು ನಲವತ್ತು ಪರ್ಸೆಂಟ್ ಕಮಿಷನ್‌ ಆರೋಪ ಮಾಡಿ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಉತ್ತರ ಸಿಕ್ಕಿಲ್ಲ ಎಂದರು.

ಮಾತ್ತೆತ್ತಿದರೆ ಸಬ್‌ ಕಾ ಸಾತ್ ಸಬ್‌ ಕಾ ವಿಕಾಸ್ ಎನ್ನುತ್ತಾರೆ. ಕರಾವಳಿಯಲ್ಲಿ ಮೂರು ಕೊಲೆಗಳಾಗಿವೆ. ಬಸವರಾಜ ಬೊಮ್ಮಾಯಿ ಕರಾವಳಿಗೆ ಹೋಗಿದ್ದರು. ಮಸೂದ್, ಪ್ರವೀಣ್, ಫಾಝಿಲ್ ಎನ್ನುವವರ ಕೊಲೆಯಾಗಿತ್ತು. ಬೊಮ್ಮಾಯಿಯವರೇ ನೀವು ಇಡೀ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯೋ ಅಥವಾ ಒಂದು ಧರ್ಮದ ಮುಖ್ಯಮಂತ್ರಿಯೋ? ಮಸೂದ್ ಹಾಗೂ ಫಾಝಿಲ್ ಮನೆಗೆ ಹೋಗಲಿಲ್ಲ. ಪ್ರವೀಣ್‌ಗೆ ಮಾತ್ರ ಪರಿಹಾರ ನೀಡಿದ್ದೀರಿ. ಅದು ತಪ್ಪೆಂದು ಹೇಳುತ್ತಿಲ್ಲ. ಆದರೆ ಯಾಕೆ ನೀವು ಫಾಝಿಲ್‌ ಕುಟುಂಬಕ್ಕೆ ಪರಿಹಾರ ಕೊಟ್ಟಿಲ್ಲ. ಮಸೂದ್‌ ಕುಟುಂಬಕ್ಕೆ ಕೊಡಲಿಲ್ಲ. ಸಬ್‌ಕಾ ಸಾತ್ ಸಬ್‌ ಕಾ ವಿಕಾಸ್‌ ಎನ್ನುವ ನೈತಿಕತೆ ನಿಮಗಿದೆಯಾ? ಈ ರಾಜ್ಯದ ಮುಖ್ಯಮಂತ್ರಿಯಾಗಿರಲು ನೀವು ಲಾಯಾಕ್ಕಾ? ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ಎಲ್ಲ ಜನರನ್ನು ಕಾಪಾಡುವ ಜವಾಬ್ದಾರಿ ಹೊತ್ತಿರುತ್ತೀರಿ. ಆದರೆ ಅಲ್ಪಸಂಖ್ಯಾತರು ಆತಂಕದಲ್ಲಿ ಬದುಕುತ್ತಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ ಎಂದು ವಾಗ್ದಾಳಿ ನಡೆಸಿದರು.

ಸಂತೋಷ್ ಪಾಟೀಲ್ ಎನ್ನುವ ವ್ಯಕ್ತಿ ಲಂಚ ಕೊಡಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡರು. ಅದಕ್ಕಾಗಿ ನಿಮ್ಮ ಮಂತ್ರಿಯೊಬ್ಬರು ರಾಜೀನಾಮೆ ಕೊಟ್ಟರು. ಅದನ್ನು ಮುಚ್ಚಿ ಹಾಕಲು ಹೊರಟಿದ್ದೀರಿ. ಇಂದು ದ್ವೇಷದ ರಾಜಕಾರಣ ಪ್ರಾರಂಭ ಮಾಡಿದ್ದೀರಿ. ಮೋದಿಯವರೇ ಎಷ್ಟು ಕಾಲ ದ್ವೇಷದ ರಾಜಕಾರಣ ಮಾಡಲು ಸಾಧ್ಯವಾಗುತ್ತದೆ. ಜನಶಕ್ತಿಯ ಮುಂದೆ ರಾಜ್ಯ ಶಕ್ತಿ ಎಂದಿಗೂ ಅಂಕುಶವನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ರಾಹುಲ್ ಗಾಂಧಿಯವರಿಗೆ, ಸೋನಿಯಾ ಗಾಂಧಿಯವರಿಗೆ ಅನಗತ್ಯವಾಗಿ ವಿಚಾರಣೆ ಮಾಡಿದ್ದೀರಿ. ಯಾವ ತಪ್ಪಿಗಾಗಿ, ಸೋನಿಯಾ ಗಾಂಧಿಯವರ ವಯಸ್ಸನ್ನೂ ಲೆಕ್ಕಿಸದೆ ‌ಇ.ಡಿ. ಕಚೇರಿಗೆ ಕರೆಸಿ ಗಂಟೆಗಟ್ಟಲೆ ವಿಚಾರಣೆ ಮಾಡಿದ್ದೀರಿ. ಕಾಂಗ್ರೆಸ್‌ನಲ್ಲಿ ಕೋಟ್ಯಾಂತರ ಕಾರ್ಯಕರ್ತರಿದ್ದಾರೆ. ಎಲ್ಲರೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಜೊತೆಯಲ್ಲಿ ಇದ್ದಾರೆ ಎಂದು ತಿಳಿಸಿದರು.

ಹಿಟ್ಲರ್‌ನಂತೆ ಅಧಿಕಾರ ನಡೆಸುತ್ತಿದ್ದಾರೆ. ಸರ್ವಾಧಿಕಾರ ಜಾರಿಗೆ ತಂದು ಸಂವಿಧಾನವನ್ನು ನಾಶ ಮಾಡಲು ಹೊರಟಿದ್ದಾರೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಕೊಟ್ಟ ಸಂವಿಧಾನ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ದಲಿತರು, ಅಲ್ಪಸಂಖ್ಯಾತರು, ರೈತರು, ಹಿಂದುಳಿದವರು ಉಳಿಯಲು ಸಾಧ್ಯ ಎಂದು ತಿಳಿಸಿದರು.

ಇದನ್ನೂ ಓದಿರಿ: “ಬಸವರಾಜ ಬೊಮ್ಮಾಯಿ ಎಂಬ ಹೆಸರಿನ ನಾನು…” ಸ್ವೀಕರಿಸಿದ ಪ್ರಮಾಣವಚನ ಮರೆತುಹೋಯಿತೇ ಮುಖ್ಯಮಂತ್ರಿಗಳಿಗೆ?

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಮಾಡಲಾಯಿತು. ನರೇಂದ್ರ ಮೋದಿಯವರು ರೈತ ವಿರೋಧ ಮೂರು ಕಾಯ್ದೆಗಳನ್ನು ತಂದು ರೈತರು ಒಂದು ವರ್ಷ ಚಳವಳಿ ಮಾಡುವಂತಾಯಿತು. ವಿಧಿ ಇಲ್ಲದೆ ವಾಪಸ್‌ ಪಡೆದುಕೊಂಡಿದ್ದಾರೆ. ಆದರೆ ಕರ್ನಾಟಕದಲ್ಲಿ ಇನ್ನೂ ವಾಪಸ್ ತೆಗೆದುಕೊಂಡಿಲ್ಲ. ಎಪಿಎಂಸಿ ಹಾಳು ಮಾಡಿದ್ದಾರೆ ಎಂದು ದೂರಿದರು.

2013 ಕೊಟ್ಟ ಭರವಸೆಗಳನ್ನು ನಾವು ಈಡೇರಿಸಿದ್ದೇವೆ. ಎಸ್‌ಸಿ, ಎಸ್‌ಟಿಗಳಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗಾಗಿ ವಿಶೇಷ ಕಾನೂನುಗಳನ್ನು ಮಾಡಿದ್ದೇವೆ. ಎಲ್ಲ ಬಡವರಿಗೆ ನ್ಯಾಯ ಕೊಡುವ ಕೆಲಸವನ್ನು ಮಾಡಿದ್ದೇವೆ. ಅನ್ನಭಾಗ್ಯ, ಶೂ ಭಾಗ್ಯ, ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್‌, ಮನಸ್ವಿನಿ, ವಿದ್ಯಾಸಿರಿ, ಕೃಷಿ ಭಾಗ್ಯ- ಈ ಎಲ್ಲ ಕಾರ್ಯಕ್ರಮ ಮಾಡಿದ್ದೇವೆ. ನೀವೇನು ಮಾಡಿದ್ದೀರಿ ಬೊಮ್ಮಾಯಿ? ಎಂದು ಪ್ರಶ್ನಿಸಿದರು.

ಭಾಷಣದ ಕೊನೆಯಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲ ಅಭಿಮಾನಿಗಳನ್ನು, ಕಾರ್ಯಕರ್ತರನ್ನು, ಪಕ್ಷದ ನಾಯಕರನ್ನು ಸಿದ್ದರಾಮಯ್ಯ ಸ್ಮರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...