Homeಮುಖಪುಟಪದ್ಮನಾಭನಗರದಿಂದ ಡಿ.ಕೆ ಸುರೇಶ್ ಕಣಕ್ಕೆ? : ಕೂತೂಹಲ ಮೂಡಿಸಿದ ಬೆಳವಣಿಗೆಗಳು

ಪದ್ಮನಾಭನಗರದಿಂದ ಡಿ.ಕೆ ಸುರೇಶ್ ಕಣಕ್ಕೆ? : ಕೂತೂಹಲ ಮೂಡಿಸಿದ ಬೆಳವಣಿಗೆಗಳು

- Advertisement -
- Advertisement -

ಕಾಂಗ್ರೆಸ್ ಪಕ್ಷದ ರಾಜ್ಯದ ಮುಂಚೂಣಿ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರನ್ನು ಹೆದರಿಸಲು ಬಿಜೆಪಿ ಅರೆಬರೆ ಯತ್ನ ಮಾಡುತ್ತಿದೆ. ಅದರ ಭಾಗವಾಗಿ ಆರ್ ಅಶೋಕ್‌ರವರು ಪದ್ಮನಾಭನಗರದ ಜೊತೆಗೆ ಕನಕಪುರದಲ್ಲಿ ಮತ್ತು ವಿ.ಸೋಮಣ್ಣ ಚಾಮರಾಜನಗರದ ಜೊತೆಗೆ ವರುಣದಲ್ಲಿ ಎರಡೆರೆಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಘೋಷಿಸಲಾಗಿದೆ. ಈ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂಬುದೇ ಒಂದು ರೀತಿಯಲ್ಲಿ ಚುನಾವಣೆಗೂ ಮೊದಲೆ ಬಿಜೆಪಿ ಒಂದೊಂದು ಕ್ಷೇತ್ರದಲ್ಲಿ ಸೋಲು ಒಪ್ಪಿಕೊಂಡಂತೆ ಎಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಆರ್ ಅಶೋಕ್ ಕನಕಪುರದಲ್ಲಿ ಸೋತರೂ ಪದ್ಮನಾಭನಗರ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ವಿ.ಸೋಮಣ್ಣ ಚಾಮರಾಜನಗರ ಮತ್ತು ವರುಣ ಎರಡೂ ಕಡೆ ಸೋಲಬಹುದು ಎನ್ನಲಾಗುತ್ತಿತ್ತು. ಆದರೆ ಈಗ ಪದ್ಮನಾಭನಗರದಲ್ಲಿಯೂ ಮತ್ತಷ್ಟು ಬಲಿಷ್ಠ ಅಭ್ಯರ್ಥಿಯಾದ ಡಿ.ಕೆ ಸುರೇಶ್‌ರನ್ನು ಕಣಕ್ಕಿಳಿಸುವ ಮೂಲಕ ಆರ್‌.ಅಶೋಕ್‌ಗೆ ನಡುಕ ಹುಟ್ಟಿಸಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗುತ್ತಿದೆ.

ಗುರಪ್ಪ ನಾಯ್ಡುರವರ ಪುತ್ರ ರಘುನಾಥ ನಾಯ್ಡುರವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಅವರು ಗುರುವಾರ ಭಿ ಫಾರಂ ಕೂಡ ಪಡೆದಿದ್ದಾರೆ. ಆದರೆ “ಡಿ.ಕೆ ಸುರೇಶ್‌ರವರು ಪದ್ಮನಾಭನಗರಕ್ಕೆ ಬಂದರೆ ಟಿಕೆಟ್ ಬಿಟ್ಟುಕೊಡಲು ಸಿದ್ದ. ಅಲ್ಲದೇ ಅವರನ್ನು 70,000 ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಆಯ್ಕೆ ಮಾಡುತ್ತೇವೆ. ಅಲ್ಲದೇ ಕನಕಪುರದಲ್ಲಿಯೂ ಅಶೋಕ್‌ರನ್ನು ಸೋಲಿಸುತ್ತೇವೆ” ಎಂದು ರಘುನಾಥ ನಾಯ್ಡು ಹೇಳಿದ್ದಾರೆ.

ಪದ್ಮನಾಭನಗರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಹೊಸ ಕಾಂಗ್ರೆಸ್ ಸದಸ್ಯರನ್ನು ಮಾಡಿಸಿದ್ದೇವೆ. ನಾಯ್ಡು ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಹಾಗಾಗಿ ಕಾಂಗ್ರೆಸ್ ಜಯ ಸಾಧಿಸುವುದರಲ್ಲಿ ಅನುಮಾನವಿಲ್ಲ. ಆದರೂ ಡಿ.ಕೆ ಸುರೇಶ್‌ರವರು ಇಲ್ಲಿ ಸ್ಪರ್ಧಿಸಿದರೆ ದೊಡ್ಡ ಅಂತರದಲ್ಲಿ ಗೆಲ್ಲಬಹುದು ಮತ್ತು ಆರ್‌.ಅಶೋಕ್‌ಗೆ ಮುಖಭಂಗವಾಗುವಂತೆ ಮಾಡಬಹುದು. ಈ ಕುರಿತು ಡಿ.ಕೆ ಶಿವಕುಮಾರ್‌ರವರಿಗೆ ತಿಳಿಸಿದ್ದೇನೆ ಮತ್ತು ಯಾವುದೇ ಕ್ಷಣದಲ್ಲಿ ಟಿಕೆಟ್ ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಸಹ ರಘುನಾಥ ನಾಯ್ಡುರವರಿಗೆ ಭಿ ಫಾರಂ ನೀಡುವ ಸಂದರ್ಭದಲ್ಲಿ ಸದ್ಯ ಕ್ಷೇತ್ರದಲ್ಲಿ ಕೆಲಸ ಮತ್ತು ಪ್ರಚಾರ ಮಾಡುತ್ತೀರಿ. ಮುಂದೆ ನೋಡೋಣ ಎಂದು ಹೇಳಿರುವುದು ಡಿ.ಕೆ ಸುರೇಶ್ ಬರಬಹುದು ಎಂಬ ವಾದಕ್ಕೆ ಪುಷ್ಠಿ ನೀಡಿದೆ.

ಇದನ್ನೂ ಓದಿ: ಬಿಜೆಪಿ ಸೋಲಿಸಲು ಜಾತ್ಯಾತೀತ ಅಭ್ಯರ್ಥಿಗೆ ಬೆಂಬಲ; ಸ್ಪರ್ಧೆ ಮಾಡಲ್ಲ ಎಂದ ಎಡಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...