Homeಮುಖಪುಟಪದ್ಮನಾಭನಗರದಿಂದ ಡಿ.ಕೆ ಸುರೇಶ್ ಕಣಕ್ಕೆ? : ಕೂತೂಹಲ ಮೂಡಿಸಿದ ಬೆಳವಣಿಗೆಗಳು

ಪದ್ಮನಾಭನಗರದಿಂದ ಡಿ.ಕೆ ಸುರೇಶ್ ಕಣಕ್ಕೆ? : ಕೂತೂಹಲ ಮೂಡಿಸಿದ ಬೆಳವಣಿಗೆಗಳು

- Advertisement -
- Advertisement -

ಕಾಂಗ್ರೆಸ್ ಪಕ್ಷದ ರಾಜ್ಯದ ಮುಂಚೂಣಿ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರನ್ನು ಹೆದರಿಸಲು ಬಿಜೆಪಿ ಅರೆಬರೆ ಯತ್ನ ಮಾಡುತ್ತಿದೆ. ಅದರ ಭಾಗವಾಗಿ ಆರ್ ಅಶೋಕ್‌ರವರು ಪದ್ಮನಾಭನಗರದ ಜೊತೆಗೆ ಕನಕಪುರದಲ್ಲಿ ಮತ್ತು ವಿ.ಸೋಮಣ್ಣ ಚಾಮರಾಜನಗರದ ಜೊತೆಗೆ ವರುಣದಲ್ಲಿ ಎರಡೆರೆಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಘೋಷಿಸಲಾಗಿದೆ. ಈ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂಬುದೇ ಒಂದು ರೀತಿಯಲ್ಲಿ ಚುನಾವಣೆಗೂ ಮೊದಲೆ ಬಿಜೆಪಿ ಒಂದೊಂದು ಕ್ಷೇತ್ರದಲ್ಲಿ ಸೋಲು ಒಪ್ಪಿಕೊಂಡಂತೆ ಎಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಆರ್ ಅಶೋಕ್ ಕನಕಪುರದಲ್ಲಿ ಸೋತರೂ ಪದ್ಮನಾಭನಗರ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ವಿ.ಸೋಮಣ್ಣ ಚಾಮರಾಜನಗರ ಮತ್ತು ವರುಣ ಎರಡೂ ಕಡೆ ಸೋಲಬಹುದು ಎನ್ನಲಾಗುತ್ತಿತ್ತು. ಆದರೆ ಈಗ ಪದ್ಮನಾಭನಗರದಲ್ಲಿಯೂ ಮತ್ತಷ್ಟು ಬಲಿಷ್ಠ ಅಭ್ಯರ್ಥಿಯಾದ ಡಿ.ಕೆ ಸುರೇಶ್‌ರನ್ನು ಕಣಕ್ಕಿಳಿಸುವ ಮೂಲಕ ಆರ್‌.ಅಶೋಕ್‌ಗೆ ನಡುಕ ಹುಟ್ಟಿಸಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗುತ್ತಿದೆ.

ಗುರಪ್ಪ ನಾಯ್ಡುರವರ ಪುತ್ರ ರಘುನಾಥ ನಾಯ್ಡುರವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಅವರು ಗುರುವಾರ ಭಿ ಫಾರಂ ಕೂಡ ಪಡೆದಿದ್ದಾರೆ. ಆದರೆ “ಡಿ.ಕೆ ಸುರೇಶ್‌ರವರು ಪದ್ಮನಾಭನಗರಕ್ಕೆ ಬಂದರೆ ಟಿಕೆಟ್ ಬಿಟ್ಟುಕೊಡಲು ಸಿದ್ದ. ಅಲ್ಲದೇ ಅವರನ್ನು 70,000 ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಆಯ್ಕೆ ಮಾಡುತ್ತೇವೆ. ಅಲ್ಲದೇ ಕನಕಪುರದಲ್ಲಿಯೂ ಅಶೋಕ್‌ರನ್ನು ಸೋಲಿಸುತ್ತೇವೆ” ಎಂದು ರಘುನಾಥ ನಾಯ್ಡು ಹೇಳಿದ್ದಾರೆ.

ಪದ್ಮನಾಭನಗರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಹೊಸ ಕಾಂಗ್ರೆಸ್ ಸದಸ್ಯರನ್ನು ಮಾಡಿಸಿದ್ದೇವೆ. ನಾಯ್ಡು ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಹಾಗಾಗಿ ಕಾಂಗ್ರೆಸ್ ಜಯ ಸಾಧಿಸುವುದರಲ್ಲಿ ಅನುಮಾನವಿಲ್ಲ. ಆದರೂ ಡಿ.ಕೆ ಸುರೇಶ್‌ರವರು ಇಲ್ಲಿ ಸ್ಪರ್ಧಿಸಿದರೆ ದೊಡ್ಡ ಅಂತರದಲ್ಲಿ ಗೆಲ್ಲಬಹುದು ಮತ್ತು ಆರ್‌.ಅಶೋಕ್‌ಗೆ ಮುಖಭಂಗವಾಗುವಂತೆ ಮಾಡಬಹುದು. ಈ ಕುರಿತು ಡಿ.ಕೆ ಶಿವಕುಮಾರ್‌ರವರಿಗೆ ತಿಳಿಸಿದ್ದೇನೆ ಮತ್ತು ಯಾವುದೇ ಕ್ಷಣದಲ್ಲಿ ಟಿಕೆಟ್ ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಸಹ ರಘುನಾಥ ನಾಯ್ಡುರವರಿಗೆ ಭಿ ಫಾರಂ ನೀಡುವ ಸಂದರ್ಭದಲ್ಲಿ ಸದ್ಯ ಕ್ಷೇತ್ರದಲ್ಲಿ ಕೆಲಸ ಮತ್ತು ಪ್ರಚಾರ ಮಾಡುತ್ತೀರಿ. ಮುಂದೆ ನೋಡೋಣ ಎಂದು ಹೇಳಿರುವುದು ಡಿ.ಕೆ ಸುರೇಶ್ ಬರಬಹುದು ಎಂಬ ವಾದಕ್ಕೆ ಪುಷ್ಠಿ ನೀಡಿದೆ.

ಇದನ್ನೂ ಓದಿ: ಬಿಜೆಪಿ ಸೋಲಿಸಲು ಜಾತ್ಯಾತೀತ ಅಭ್ಯರ್ಥಿಗೆ ಬೆಂಬಲ; ಸ್ಪರ್ಧೆ ಮಾಡಲ್ಲ ಎಂದ ಎಡಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...