Homeಕರ್ನಾಟಕಗ್ಯಾರಂಟಿ ಯೋಜನೆ ಜಾರಿ ಕುರಿತು ಟೀಕೆ ಮಾಡಿದ್ದ ಪ್ರತಾಪ್‌ ಸಿಂಹ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಜಾರಿ ಕುರಿತು ಟೀಕೆ ಮಾಡಿದ್ದ ಪ್ರತಾಪ್‌ ಸಿಂಹ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಹಾಗೂ ‌ಪ್ರತಾಪ್ ಸಿಂಹ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್​​​ ಸಂಸದ ಡಿ.ಕೆ.ಸುರೇಶ್ ಅವರು ಬಿಜೆಪಿ ಹಾಗೂ ಪ್ರತಾಪ್ ಸಿಂಹರದ್ದು ಒಡೆದು ಆಳುವ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದರು.

ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್​ ಸಿಂಹ ಟೀಕೆ ವಿಚಾರಕ್ಕೆ ತಿರುಗೇಟು ನೀಡಿದರು. ”ಕಾಂಗ್ರೆಸ್​ನಲ್ಲಿ ಒಡೆದು ಆಳುವ ಸಂಸ್ಕೃತಿ ಇಲ್ಲ. ಪ್ರತಾಪ್ ಸಿಂಹ ಅವರು ಒಡೆದು ಆಳುವ ಸಂಸ್ಕೃತಿ ಇಟ್ಟುಕೊಂಡು ಮನೆಹಾಳು ಮಾಡುತ್ತಾರೆ” ಎಂದು ಕಿಡಿಕಾರಿದ್ದಾರೆ.

”ಸಂಸದ ಪ್ರತಾಪ್​ ಸಿಂಹ ಮುಸ್ಲಿಮರನ್ನು ವಿರೋಧ ಮಾಡುತ್ತಿದ್ದರು. ಈಗ ಯಾಕೆ ಮುಸ್ಲಿಮರ ಮೇಲೆ ಪ್ರೀತಿ. ಅವರು ತತ್ವ ಸಿದ್ಧಾಂತ ‌ಇಟ್ಟುಕೊಂಡಿದ್ದಾರೆ ಅದರಿಂದ ಆಚೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ​ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತದೆ. ನಾವು ಏನು ಗ್ಯಾರಂಟಿ ಕೊಟ್ಟಿದ್ದೆವೋ ಅದನ್ನ ಅನುಷ್ಠಾನ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ” ಎಂದು ಹೇಳಿದರು.

ಈ ವೇಳೆ ಗೋ ಹತ್ಯೆ ನಿಷೇದ ಕಾಯ್ದೆ ರದ್ದು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ್ದು, ”ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರ ಏನು ತೀರ್ಮಾನ ಮಾಡುತ್ತೇ ನೋಡೋಣ. ರೈತರಿಗೆ ಅನುಪಯುಕ್ತವಾದ ಜಾನುವಾರುಗಳನ್ನ ಇಂದಿನಿಂದಲೂ ಬೇರೆ ಬೇರೆದಕ್ಕೆ ಬಳಸುತ್ತಿದ್ದಾರೆ. ಈ ಬಗ್ಗೆ ವ್ಯಾಪಾಕ ಚರ್ಚೆ ಆಗಬೇಕು. ರೈತರ ದೃಷ್ಟಿಯಿಂದ ಮತ್ತು ಸಂಸ್ಕೃತಿ‌ ದೃಷ್ಟಿಯಿಂದ ಏನು ಮಾಡಬೇಕು ಎಂದು ಚರ್ಚೆ ಮಾಡಬೇಕಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು?

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ”ಗೃಹಲಕ್ಷ್ಮೀ ಯೋಜನೆ ಜಗಳ ಹಚ್ಚುವಂತಿದೆ. ಮನೆ ಯಜಮಾನಿ ಯಾರು ಅಂತಾ ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ – ಸೊಸೆ ಕೂತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಯಲ್ಲದರೂ ಅತ್ತೆ – ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತೆ. ಆದರೆ, ಸಾಬರ ಮನೆಯಲ್ಲಿ ಎರಡು ಹೆಂಡ್ತಿ ಮೂರು ಹೆಂಡ್ತಿ ಇದ್ದಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ಬೆಂಕಿ ಹಾಕುತ್ತಿದ್ದಿರಿ. ಕುಟುಂಬ ಒಡೆಯುವ ಕೆಲಸ ಆಗುತ್ತಿದೆ” ಎಂದಿದ್ದರು.

”ಜನ್ ಧನ್ ಅಕೌಂಟ್ ಓಪನ್ ಆಗಿದೆ. ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿದೆ. ಹೀಗಿದ್ದರು ಗೃಹ ಲಕ್ಷ್ಮಿ ಜಾರಿ ಯಾಕೆ ಆಗುತ್ತಿಲ್ಲ. ಗೃಹ ಲಕ್ಷ್ಮಿ ಯೋಜನೆ ಮುಂದೂಡಲು ಕುಂಟು ನೆಪ ಹೇಳಲಾಗುತ್ತಿದೆ. ಚುನಾವಣೆ ಮೊದಲು ಕಾಂಗ್ರೆಸ್‌ನವರು ಊರಿಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ತಮಟೆ ಬಾರಿಸಿದ್ದರು. ಸದ್ಯ ಮಹಿಳೆಯರ ಉಚಿತ ಪ್ರಯಾಣದ ಬಗ್ಗೆ ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿಲ್ಲ” ಎಂದು ಟೀಕಿಸಿದ್ದರು.

”ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ ಎನ್ನುತ್ತಿದ್ದರು. ಈಗ ಸರಾಸರಿ ಆಧರಿಸಿ ಉಚಿತ ವಿದ್ಯುತ್ ಎನ್ನುತ್ತಿದ್ದಾರೆ. ಯಾವುದೇ ಷರತ್ತು ಇಲ್ಲದೇ ಉಚಿತ ವಿದ್ಯುತ್ ಜಾರಿ ಮಾಡಿ. ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದಿರಿ. ಈಗ ಸರಾಸರಿ ತೆಗೆದು ಉಚಿತ ಕೊಡುತ್ತೇವೆ ಎಂದು ಹೇಳಿದ್ದೀರಿ ಇದು ಮೋಸ ಅಲ್ವಾ? ಯಾವುದು ಷರತ್ತು ಇಲ್ಲದೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲೇಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...