Homeಕರ್ನಾಟಕಗ್ಯಾರಂಟಿ ಯೋಜನೆ ಜಾರಿ ಕುರಿತು ಟೀಕೆ ಮಾಡಿದ್ದ ಪ್ರತಾಪ್‌ ಸಿಂಹ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಜಾರಿ ಕುರಿತು ಟೀಕೆ ಮಾಡಿದ್ದ ಪ್ರತಾಪ್‌ ಸಿಂಹ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಹಾಗೂ ‌ಪ್ರತಾಪ್ ಸಿಂಹ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್​​​ ಸಂಸದ ಡಿ.ಕೆ.ಸುರೇಶ್ ಅವರು ಬಿಜೆಪಿ ಹಾಗೂ ಪ್ರತಾಪ್ ಸಿಂಹರದ್ದು ಒಡೆದು ಆಳುವ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದರು.

ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್​ ಸಿಂಹ ಟೀಕೆ ವಿಚಾರಕ್ಕೆ ತಿರುಗೇಟು ನೀಡಿದರು. ”ಕಾಂಗ್ರೆಸ್​ನಲ್ಲಿ ಒಡೆದು ಆಳುವ ಸಂಸ್ಕೃತಿ ಇಲ್ಲ. ಪ್ರತಾಪ್ ಸಿಂಹ ಅವರು ಒಡೆದು ಆಳುವ ಸಂಸ್ಕೃತಿ ಇಟ್ಟುಕೊಂಡು ಮನೆಹಾಳು ಮಾಡುತ್ತಾರೆ” ಎಂದು ಕಿಡಿಕಾರಿದ್ದಾರೆ.

”ಸಂಸದ ಪ್ರತಾಪ್​ ಸಿಂಹ ಮುಸ್ಲಿಮರನ್ನು ವಿರೋಧ ಮಾಡುತ್ತಿದ್ದರು. ಈಗ ಯಾಕೆ ಮುಸ್ಲಿಮರ ಮೇಲೆ ಪ್ರೀತಿ. ಅವರು ತತ್ವ ಸಿದ್ಧಾಂತ ‌ಇಟ್ಟುಕೊಂಡಿದ್ದಾರೆ ಅದರಿಂದ ಆಚೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ​ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತದೆ. ನಾವು ಏನು ಗ್ಯಾರಂಟಿ ಕೊಟ್ಟಿದ್ದೆವೋ ಅದನ್ನ ಅನುಷ್ಠಾನ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ” ಎಂದು ಹೇಳಿದರು.

ಈ ವೇಳೆ ಗೋ ಹತ್ಯೆ ನಿಷೇದ ಕಾಯ್ದೆ ರದ್ದು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ್ದು, ”ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರ ಏನು ತೀರ್ಮಾನ ಮಾಡುತ್ತೇ ನೋಡೋಣ. ರೈತರಿಗೆ ಅನುಪಯುಕ್ತವಾದ ಜಾನುವಾರುಗಳನ್ನ ಇಂದಿನಿಂದಲೂ ಬೇರೆ ಬೇರೆದಕ್ಕೆ ಬಳಸುತ್ತಿದ್ದಾರೆ. ಈ ಬಗ್ಗೆ ವ್ಯಾಪಾಕ ಚರ್ಚೆ ಆಗಬೇಕು. ರೈತರ ದೃಷ್ಟಿಯಿಂದ ಮತ್ತು ಸಂಸ್ಕೃತಿ‌ ದೃಷ್ಟಿಯಿಂದ ಏನು ಮಾಡಬೇಕು ಎಂದು ಚರ್ಚೆ ಮಾಡಬೇಕಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು?

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ”ಗೃಹಲಕ್ಷ್ಮೀ ಯೋಜನೆ ಜಗಳ ಹಚ್ಚುವಂತಿದೆ. ಮನೆ ಯಜಮಾನಿ ಯಾರು ಅಂತಾ ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ – ಸೊಸೆ ಕೂತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಯಲ್ಲದರೂ ಅತ್ತೆ – ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತೆ. ಆದರೆ, ಸಾಬರ ಮನೆಯಲ್ಲಿ ಎರಡು ಹೆಂಡ್ತಿ ಮೂರು ಹೆಂಡ್ತಿ ಇದ್ದಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ಬೆಂಕಿ ಹಾಕುತ್ತಿದ್ದಿರಿ. ಕುಟುಂಬ ಒಡೆಯುವ ಕೆಲಸ ಆಗುತ್ತಿದೆ” ಎಂದಿದ್ದರು.

”ಜನ್ ಧನ್ ಅಕೌಂಟ್ ಓಪನ್ ಆಗಿದೆ. ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿದೆ. ಹೀಗಿದ್ದರು ಗೃಹ ಲಕ್ಷ್ಮಿ ಜಾರಿ ಯಾಕೆ ಆಗುತ್ತಿಲ್ಲ. ಗೃಹ ಲಕ್ಷ್ಮಿ ಯೋಜನೆ ಮುಂದೂಡಲು ಕುಂಟು ನೆಪ ಹೇಳಲಾಗುತ್ತಿದೆ. ಚುನಾವಣೆ ಮೊದಲು ಕಾಂಗ್ರೆಸ್‌ನವರು ಊರಿಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ತಮಟೆ ಬಾರಿಸಿದ್ದರು. ಸದ್ಯ ಮಹಿಳೆಯರ ಉಚಿತ ಪ್ರಯಾಣದ ಬಗ್ಗೆ ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿಲ್ಲ” ಎಂದು ಟೀಕಿಸಿದ್ದರು.

”ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ ಎನ್ನುತ್ತಿದ್ದರು. ಈಗ ಸರಾಸರಿ ಆಧರಿಸಿ ಉಚಿತ ವಿದ್ಯುತ್ ಎನ್ನುತ್ತಿದ್ದಾರೆ. ಯಾವುದೇ ಷರತ್ತು ಇಲ್ಲದೇ ಉಚಿತ ವಿದ್ಯುತ್ ಜಾರಿ ಮಾಡಿ. ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದಿರಿ. ಈಗ ಸರಾಸರಿ ತೆಗೆದು ಉಚಿತ ಕೊಡುತ್ತೇವೆ ಎಂದು ಹೇಳಿದ್ದೀರಿ ಇದು ಮೋಸ ಅಲ್ವಾ? ಯಾವುದು ಷರತ್ತು ಇಲ್ಲದೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲೇಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...