Homeಕರ್ನಾಟಕಗ್ಯಾರಂಟಿ ಯೋಜನೆ ಜಾರಿ ಕುರಿತು ಟೀಕೆ ಮಾಡಿದ್ದ ಪ್ರತಾಪ್‌ ಸಿಂಹ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಜಾರಿ ಕುರಿತು ಟೀಕೆ ಮಾಡಿದ್ದ ಪ್ರತಾಪ್‌ ಸಿಂಹ ವಿರುದ್ಧ ಡಿ.ಕೆ.ಸುರೇಶ್ ವಾಗ್ದಾಳಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಹಾಗೂ ‌ಪ್ರತಾಪ್ ಸಿಂಹ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್​​​ ಸಂಸದ ಡಿ.ಕೆ.ಸುರೇಶ್ ಅವರು ಬಿಜೆಪಿ ಹಾಗೂ ಪ್ರತಾಪ್ ಸಿಂಹರದ್ದು ಒಡೆದು ಆಳುವ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದರು.

ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್​ ಸಿಂಹ ಟೀಕೆ ವಿಚಾರಕ್ಕೆ ತಿರುಗೇಟು ನೀಡಿದರು. ”ಕಾಂಗ್ರೆಸ್​ನಲ್ಲಿ ಒಡೆದು ಆಳುವ ಸಂಸ್ಕೃತಿ ಇಲ್ಲ. ಪ್ರತಾಪ್ ಸಿಂಹ ಅವರು ಒಡೆದು ಆಳುವ ಸಂಸ್ಕೃತಿ ಇಟ್ಟುಕೊಂಡು ಮನೆಹಾಳು ಮಾಡುತ್ತಾರೆ” ಎಂದು ಕಿಡಿಕಾರಿದ್ದಾರೆ.

”ಸಂಸದ ಪ್ರತಾಪ್​ ಸಿಂಹ ಮುಸ್ಲಿಮರನ್ನು ವಿರೋಧ ಮಾಡುತ್ತಿದ್ದರು. ಈಗ ಯಾಕೆ ಮುಸ್ಲಿಮರ ಮೇಲೆ ಪ್ರೀತಿ. ಅವರು ತತ್ವ ಸಿದ್ಧಾಂತ ‌ಇಟ್ಟುಕೊಂಡಿದ್ದಾರೆ ಅದರಿಂದ ಆಚೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ​ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತದೆ. ನಾವು ಏನು ಗ್ಯಾರಂಟಿ ಕೊಟ್ಟಿದ್ದೆವೋ ಅದನ್ನ ಅನುಷ್ಠಾನ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ” ಎಂದು ಹೇಳಿದರು.

ಈ ವೇಳೆ ಗೋ ಹತ್ಯೆ ನಿಷೇದ ಕಾಯ್ದೆ ರದ್ದು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ್ದು, ”ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರ ಏನು ತೀರ್ಮಾನ ಮಾಡುತ್ತೇ ನೋಡೋಣ. ರೈತರಿಗೆ ಅನುಪಯುಕ್ತವಾದ ಜಾನುವಾರುಗಳನ್ನ ಇಂದಿನಿಂದಲೂ ಬೇರೆ ಬೇರೆದಕ್ಕೆ ಬಳಸುತ್ತಿದ್ದಾರೆ. ಈ ಬಗ್ಗೆ ವ್ಯಾಪಾಕ ಚರ್ಚೆ ಆಗಬೇಕು. ರೈತರ ದೃಷ್ಟಿಯಿಂದ ಮತ್ತು ಸಂಸ್ಕೃತಿ‌ ದೃಷ್ಟಿಯಿಂದ ಏನು ಮಾಡಬೇಕು ಎಂದು ಚರ್ಚೆ ಮಾಡಬೇಕಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು?

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ”ಗೃಹಲಕ್ಷ್ಮೀ ಯೋಜನೆ ಜಗಳ ಹಚ್ಚುವಂತಿದೆ. ಮನೆ ಯಜಮಾನಿ ಯಾರು ಅಂತಾ ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ – ಸೊಸೆ ಕೂತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಯಲ್ಲದರೂ ಅತ್ತೆ – ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತೆ. ಆದರೆ, ಸಾಬರ ಮನೆಯಲ್ಲಿ ಎರಡು ಹೆಂಡ್ತಿ ಮೂರು ಹೆಂಡ್ತಿ ಇದ್ದಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ಬೆಂಕಿ ಹಾಕುತ್ತಿದ್ದಿರಿ. ಕುಟುಂಬ ಒಡೆಯುವ ಕೆಲಸ ಆಗುತ್ತಿದೆ” ಎಂದಿದ್ದರು.

”ಜನ್ ಧನ್ ಅಕೌಂಟ್ ಓಪನ್ ಆಗಿದೆ. ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿದೆ. ಹೀಗಿದ್ದರು ಗೃಹ ಲಕ್ಷ್ಮಿ ಜಾರಿ ಯಾಕೆ ಆಗುತ್ತಿಲ್ಲ. ಗೃಹ ಲಕ್ಷ್ಮಿ ಯೋಜನೆ ಮುಂದೂಡಲು ಕುಂಟು ನೆಪ ಹೇಳಲಾಗುತ್ತಿದೆ. ಚುನಾವಣೆ ಮೊದಲು ಕಾಂಗ್ರೆಸ್‌ನವರು ಊರಿಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ತಮಟೆ ಬಾರಿಸಿದ್ದರು. ಸದ್ಯ ಮಹಿಳೆಯರ ಉಚಿತ ಪ್ರಯಾಣದ ಬಗ್ಗೆ ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿಲ್ಲ” ಎಂದು ಟೀಕಿಸಿದ್ದರು.

”ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ ಎನ್ನುತ್ತಿದ್ದರು. ಈಗ ಸರಾಸರಿ ಆಧರಿಸಿ ಉಚಿತ ವಿದ್ಯುತ್ ಎನ್ನುತ್ತಿದ್ದಾರೆ. ಯಾವುದೇ ಷರತ್ತು ಇಲ್ಲದೇ ಉಚಿತ ವಿದ್ಯುತ್ ಜಾರಿ ಮಾಡಿ. ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದಿರಿ. ಈಗ ಸರಾಸರಿ ತೆಗೆದು ಉಚಿತ ಕೊಡುತ್ತೇವೆ ಎಂದು ಹೇಳಿದ್ದೀರಿ ಇದು ಮೋಸ ಅಲ್ವಾ? ಯಾವುದು ಷರತ್ತು ಇಲ್ಲದೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲೇಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...