Homeಕರ್ನಾಟಕಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ ಡಿ.ಕೆ ಸುರೇಶ್

ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ ಡಿ.ಕೆ ಸುರೇಶ್

ಅಂತ್ಯ ಸಂಸ್ಕಾರದಲ್ಲಿ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಧರಿಸಿದ್ದರು. ಡಿ.ಕೆ ಸುರೇಶ್ ರೊಂದಿಗೆ ವಿಧಾನ ಪರಿಷತ್ ಸದಸ್ಯ ರವಿ ಹಾಗೂ ಕನಕಪುರ ನಗರಸಭೆ ಸದಸ್ಯರು ಸಹ ಹಾಜರಿದ್ದರು.

- Advertisement -
- Advertisement -

ಕೊರೊನಾ ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಗಳಿಂದ ಸೋಂಕು ಹರಡುವುದಿಲ್ಲ. ಹಾಗಾಗಿ ಮೃತದೇಹಗಳ ಗೌರವಯುತ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದ ಸಂಸದ ಡಿ.ಕೆ ಸುರೇಶ್ ಇಂದು ಅಂತಹ ಅಂತ್ಯಸಂಸ್ಕಾರದಲ್ಲಿ ಸ್ವತಃ ಭಾಗಿಯಾಗಿದ್ದಾರೆ.

ಸೋಂಕಿನಿಂದ ನಿಧನರಾದವರ ಅಂತಿಮ ಸಂಸ್ಕಾರಕ್ಕೆ ಹಲವಾರು ಕಡೆ ತಡೆವೊಡ್ಡಲಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಸಂಸದರು ಇಂದು ತಾವೇ ಶವ ಸಂಸ್ಕರದಲ್ಲಿ ಭಾಗಿಯಾಗುವ ಮೂಳಕ ಸತ್ತವರಿಂದ ಸೋಂಕು ಹರಡುವುದಿಲ್ಲ ಎಂದು ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಕನಕಪುರದ ನಿವಾಸಿ 73 ವರ್ಷದ ನರಸಿಂಹ ಶೆಟ್ಟಿಯೆಂಬುವವರು ಕೊರೊನಾ ಸೋಂಕಿನ ಕಾರಣಕ್ಕೆ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಡಿ.ಕೆ ಸುರೇಶ್ ಭಾಗವಹಿಸಿದ್ದಾರೆ.

ಅಂತ್ಯ ಸಂಸ್ಕಾರದಲ್ಲಿ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಧರಿಸಿದ್ದರು. ಡಿ.ಕೆ ಸುರೇಶ್ ರೊಂದಿಗೆ ವಿಧಾನ ಪರಿಷತ್ ಸದಸ್ಯ ರವಿ ಹಾಗೂ ಕನಕಪುರ ನಗರಸಭೆ ಸದಸ್ಯರು ಸಹ ಹಾಜರಿದ್ದರು.

ಕೊರೊನ ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಗಳಿಂದ ಸಮಾಜಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ. ಈ ವಿಚಾರದಲ್ಲಿ ಬರೀ ಊಹಾಪೋಹಗಳನ್ನು ಹಬ್ಬಿಸಲಾಗಿದೆ. ಹೀಗಾಗಿ ಶವ ಸಂಸ್ಕಾರಕ್ಕೆ ಪ್ರತಿರೋಧ ಒಡ್ಡುವುದಾಗಲಿ, ಅಡ್ಡಿಪಡಿಸುವುದಾಗಲಿ ನಮ್ಮ ಸಂಸ್ಕೃತಿಯೂ ಅಲ್ಲ, ಸದಾಚಾರವೂ ಅಲ್ಲ. ಆದ್ದರಿಂದ ಆಯಾ ಪ್ರದೇಶಗಳಲ್ಲಿ ಕೋವಿಡ್‌ನಿಂದ ಮರಣ ಹೊಂದಿದ ವ್ಯಕ್ತಿಗಳ ಬಂಧುಗಳು ಹಾಗೂ ಗ್ರಾಮಸ್ಥರು ನಿರಾಂತಂಕವಾಗಿ, ಮೃತ ವ್ಯಕ್ತಿಗೆ ಗೌರವಯುತ ಅಂತಿಮ ಸಂಸ್ಕಾರ ನೆರವೇರಲು ಅವಕಾಶ ಮಾಡಿಕೊಡಬೇಕು. ಆ ಮೂಲಕ ಮಾನವೀಯತೆ ಮತ್ತು ಸೌಹಾರ್ದತೆ ಮೆರೆಯಬೇಕೆಂದು ಅವರು ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ‘ನರಸಿಂಹ ಶೆಟ್ಟಿಯವರು ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಜೀವ ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ ವರ್ಗದವರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ಅಂತ್ಯಸಂಸ್ಕಾರದಲ್ಲಿ ಭಾಗಿಯಾದ ಮತ್ತು ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ’ ಎಂದಿದ್ದಾರೆ.


ಇದನ್ನೂ ಓದಿ: ಮರಣ ಹೊಂದಿದ ವ್ಯಕ್ತಿಗಳಿಂದ ಕೊರೊನಾ ಸೋಂಕು ಹರಡುವುದಿಲ್ಲ: ಅಂತ್ಯಸಂಸ್ಕಾರಕ್ಕೆ ಅವಕಾಶಮಾಡಿಕೊಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...