Homeಕರ್ನಾಟಕಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ ಡಿ.ಕೆ ಸುರೇಶ್

ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ ಡಿ.ಕೆ ಸುರೇಶ್

ಅಂತ್ಯ ಸಂಸ್ಕಾರದಲ್ಲಿ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಧರಿಸಿದ್ದರು. ಡಿ.ಕೆ ಸುರೇಶ್ ರೊಂದಿಗೆ ವಿಧಾನ ಪರಿಷತ್ ಸದಸ್ಯ ರವಿ ಹಾಗೂ ಕನಕಪುರ ನಗರಸಭೆ ಸದಸ್ಯರು ಸಹ ಹಾಜರಿದ್ದರು.

- Advertisement -
- Advertisement -

ಕೊರೊನಾ ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಗಳಿಂದ ಸೋಂಕು ಹರಡುವುದಿಲ್ಲ. ಹಾಗಾಗಿ ಮೃತದೇಹಗಳ ಗೌರವಯುತ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದ ಸಂಸದ ಡಿ.ಕೆ ಸುರೇಶ್ ಇಂದು ಅಂತಹ ಅಂತ್ಯಸಂಸ್ಕಾರದಲ್ಲಿ ಸ್ವತಃ ಭಾಗಿಯಾಗಿದ್ದಾರೆ.

ಸೋಂಕಿನಿಂದ ನಿಧನರಾದವರ ಅಂತಿಮ ಸಂಸ್ಕಾರಕ್ಕೆ ಹಲವಾರು ಕಡೆ ತಡೆವೊಡ್ಡಲಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಸಂಸದರು ಇಂದು ತಾವೇ ಶವ ಸಂಸ್ಕರದಲ್ಲಿ ಭಾಗಿಯಾಗುವ ಮೂಳಕ ಸತ್ತವರಿಂದ ಸೋಂಕು ಹರಡುವುದಿಲ್ಲ ಎಂದು ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಕನಕಪುರದ ನಿವಾಸಿ 73 ವರ್ಷದ ನರಸಿಂಹ ಶೆಟ್ಟಿಯೆಂಬುವವರು ಕೊರೊನಾ ಸೋಂಕಿನ ಕಾರಣಕ್ಕೆ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಡಿ.ಕೆ ಸುರೇಶ್ ಭಾಗವಹಿಸಿದ್ದಾರೆ.

ಅಂತ್ಯ ಸಂಸ್ಕಾರದಲ್ಲಿ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಧರಿಸಿದ್ದರು. ಡಿ.ಕೆ ಸುರೇಶ್ ರೊಂದಿಗೆ ವಿಧಾನ ಪರಿಷತ್ ಸದಸ್ಯ ರವಿ ಹಾಗೂ ಕನಕಪುರ ನಗರಸಭೆ ಸದಸ್ಯರು ಸಹ ಹಾಜರಿದ್ದರು.

ಕೊರೊನ ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಗಳಿಂದ ಸಮಾಜಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ. ಈ ವಿಚಾರದಲ್ಲಿ ಬರೀ ಊಹಾಪೋಹಗಳನ್ನು ಹಬ್ಬಿಸಲಾಗಿದೆ. ಹೀಗಾಗಿ ಶವ ಸಂಸ್ಕಾರಕ್ಕೆ ಪ್ರತಿರೋಧ ಒಡ್ಡುವುದಾಗಲಿ, ಅಡ್ಡಿಪಡಿಸುವುದಾಗಲಿ ನಮ್ಮ ಸಂಸ್ಕೃತಿಯೂ ಅಲ್ಲ, ಸದಾಚಾರವೂ ಅಲ್ಲ. ಆದ್ದರಿಂದ ಆಯಾ ಪ್ರದೇಶಗಳಲ್ಲಿ ಕೋವಿಡ್‌ನಿಂದ ಮರಣ ಹೊಂದಿದ ವ್ಯಕ್ತಿಗಳ ಬಂಧುಗಳು ಹಾಗೂ ಗ್ರಾಮಸ್ಥರು ನಿರಾಂತಂಕವಾಗಿ, ಮೃತ ವ್ಯಕ್ತಿಗೆ ಗೌರವಯುತ ಅಂತಿಮ ಸಂಸ್ಕಾರ ನೆರವೇರಲು ಅವಕಾಶ ಮಾಡಿಕೊಡಬೇಕು. ಆ ಮೂಲಕ ಮಾನವೀಯತೆ ಮತ್ತು ಸೌಹಾರ್ದತೆ ಮೆರೆಯಬೇಕೆಂದು ಅವರು ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ‘ನರಸಿಂಹ ಶೆಟ್ಟಿಯವರು ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಜೀವ ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ ವರ್ಗದವರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ಅಂತ್ಯಸಂಸ್ಕಾರದಲ್ಲಿ ಭಾಗಿಯಾದ ಮತ್ತು ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ’ ಎಂದಿದ್ದಾರೆ.


ಇದನ್ನೂ ಓದಿ: ಮರಣ ಹೊಂದಿದ ವ್ಯಕ್ತಿಗಳಿಂದ ಕೊರೊನಾ ಸೋಂಕು ಹರಡುವುದಿಲ್ಲ: ಅಂತ್ಯಸಂಸ್ಕಾರಕ್ಕೆ ಅವಕಾಶಮಾಡಿಕೊಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...