Homeಕರ್ನಾಟಕ‘ಜೇಮ್ಸ್’ ಪ್ರದರ್ಶನಕ್ಕೆ ಅಡ್ಡಿ ಮಾಡುತ್ತಿರುವ ಬಿಜೆಪಿ ಶಾಸಕರ ನಡೆಗೆ ಡಿಕೆಶಿ ಆಕ್ರೋಶ

‘ಜೇಮ್ಸ್’ ಪ್ರದರ್ಶನಕ್ಕೆ ಅಡ್ಡಿ ಮಾಡುತ್ತಿರುವ ಬಿಜೆಪಿ ಶಾಸಕರ ನಡೆಗೆ ಡಿಕೆಶಿ ಆಕ್ರೋಶ

- Advertisement -
- Advertisement -

ಪುನೀತ್ ರಾಜಕುಮಾರ್ ಅವರ ಕೊನೆ ಚಿತ್ರ ಜೇಮ್ಸ್ ಅನ್ನು ಚಿತ್ರಮಂದಿರದಿಂದ ತೆಗೆಯಬಾರದು. ಅದನ್ನು ತೆಗೆಯುವಂತೆ ಒತ್ತಡ ಹಾಕುತ್ತಿರುವ ಬಿಜೆಪಿ ಶಾಸಕರ ನಡೆ ಖಂಡನೀಯ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕಲಬುರ್ಗಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ಅವರು, “ನನಗೆ ಹಲವು ಚಿತ್ರ ಮಂದಿರಗಳ ಮಾಲೀಕರು ಕರೆ ಮಾಡಿದ್ದರು. ಅಪ್ಪು ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನನ್ನ ಆತ್ಮೀಯ. ದೇಶದ ಇತಿಹಾಸದಲ್ಲಿ ಅಪಾರ ಜನರಿಂದ ಗೌರವ ಸಂಪಾದಿಸಿದವರು. ಅವರ ಕೊನೆಯ ಚಿತ್ರಕ್ಕೆ ತೊಂದರೆ ನೀಡಲಾಗುತ್ತಿದೆ. ಬಿಜೆಪಿಯವರಿಗೆ ಮಾನವೀಯತೆ ಇರಬೇಕಿತ್ತು. ಆದರೆ ಅದು ಕಾಣುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

“ಬೆಂಗಳೂರಿನ ಬಿಜೆಪಿ ಶಾಸಕರು ಚಿತ್ರಮಂದಿರಗಳಲ್ಲಿ ಜೇಮ್ಸ್ ಚಿತ್ರ ತೆಗೆಯುವಂತೆ ಕರೆ ಮಾಡುತ್ತಿದ್ದಾರೆ. ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಯಾವುದೇ ರೀತಿಯ ಪ್ರಚಾರ ಮಾಡಿಕೊಳ್ಳಲಿ. ಅವರು ತಮ್ಮ ಪಕ್ಷಕ್ಕೆ ಅನುಕೂಲವಾಗುವಂತೆ ಚಿತ್ರಕಥೆ ಮಾಡಿ ಸಿನಿಮಾ ಮಾಡಿದ್ದಾರೆ. ಮಹಾತ್ಮಾಗಾಂಧಿ, ಇಂದಿರಾಗಾಂಧಿ ಹತ್ಯೆಗಿಂತಲೂ ಚಿತ್ರಕಥೆ ಬೇಕಾ? ಅವರು ವಾಸ್ತವಾಂಶ ಬಿಟ್ಟು ಏನು ಮಾಡುತ್ತಾರೋ ಮಾಡಲಿ, ಅದು ಅವರ ಪಕ್ಷದ ಅಜೆಂಡಾ” ಎಂದು ಅವರು ಹೇಳಿದ್ದಾರೆ.

“ಆ ಚಿತ್ರ ತಯಾರಕರನ್ನು ಕರೆದು ಸನ್ಮಾನ ಮಾಡಿ ತೆರಿಗೆ ವಿನಾಯಿತಿ ನೀಡಿದ್ದಾರೆ. ಅದರ ಅಗತ್ಯ ಏನಿತ್ತು? ಅವರು ನಮ್ಮನ್ನು ವಿರೋಧಿಗಳು ಎಂದು ತೋರಿಸಲು ಈ ರೀತಿ ಮಾಡುತ್ತಿದ್ದಾರೆ. ಸಂವಿಧಾನದಲ್ಲಿ ನಮಗೆ ನೀಡಲಾಗಿರುವ ಹಕ್ಕನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ” ಎಂದು ಡಿಕೆಶಿ ಕಿಡಿ ಕಾರಿದ್ದಾರೆ.

“ಪುನೀತ್ ರಾಜಕುಮಾರ್ ಅವರ ಜೇಮ್ಸ್ ಚಿತ್ರವನ್ನು ಯಾವುದೇ ಚಿತ್ರಮಂದಿರದಿಂದ ತೆಗೆದುಹಾಕಬಾರದು. ಅವರು ಎಷ್ಟು ದಿನ ನಡೆಸುತ್ತಾರೋ ನಡೆಸಲಿ. ಬಿಜೆಪಿ ಶಾಸಕರ ಈ ನಡೆ ಖಂಡನೀಯ ಶಿವರಾಜಕುಮಾರ್ ಅವರು ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಮುಖ್ಯಮಂತ್ರಿಗಳು ಕರೆ ಮಾಡಿಸಿದ್ದರು. ಆದರೂ ಪರವಾಗಿಲ್ಲ. ನಾವು ನಮ್ಮ ನಾಡಿನ ನೀರಿಗಾಗಿ ಹೋರಾಟ ಮಾಡಿದ್ದೇವೆ” ಎಂದು ಅವರು ಹೇಳೀದ್ದಾರೆ.

ಇದನ್ನೂ ಓದಿ: `ಕಾಶ್ಮೀರ್‌ ಫೈಲ್ಸ್‌’ಗೆ ತೆರಿಗೆ ವಿನಾಯಿತಿ ನೀಡುವ ಸಿಎಂಗೆ ‘ಜೇಮ್ಸ್’ ನೆನಪಾಗಲಿಲ್ಲವೇ?: ಸಿದ್ದರಾಮಯ್ಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...