Homeಕರ್ನಾಟಕ‘ಜೇಮ್ಸ್’ ಪ್ರದರ್ಶನಕ್ಕೆ ಅಡ್ಡಿ ಮಾಡುತ್ತಿರುವ ಬಿಜೆಪಿ ಶಾಸಕರ ನಡೆಗೆ ಡಿಕೆಶಿ ಆಕ್ರೋಶ

‘ಜೇಮ್ಸ್’ ಪ್ರದರ್ಶನಕ್ಕೆ ಅಡ್ಡಿ ಮಾಡುತ್ತಿರುವ ಬಿಜೆಪಿ ಶಾಸಕರ ನಡೆಗೆ ಡಿಕೆಶಿ ಆಕ್ರೋಶ

- Advertisement -
- Advertisement -

ಪುನೀತ್ ರಾಜಕುಮಾರ್ ಅವರ ಕೊನೆ ಚಿತ್ರ ಜೇಮ್ಸ್ ಅನ್ನು ಚಿತ್ರಮಂದಿರದಿಂದ ತೆಗೆಯಬಾರದು. ಅದನ್ನು ತೆಗೆಯುವಂತೆ ಒತ್ತಡ ಹಾಕುತ್ತಿರುವ ಬಿಜೆಪಿ ಶಾಸಕರ ನಡೆ ಖಂಡನೀಯ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕಲಬುರ್ಗಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ಅವರು, “ನನಗೆ ಹಲವು ಚಿತ್ರ ಮಂದಿರಗಳ ಮಾಲೀಕರು ಕರೆ ಮಾಡಿದ್ದರು. ಅಪ್ಪು ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನನ್ನ ಆತ್ಮೀಯ. ದೇಶದ ಇತಿಹಾಸದಲ್ಲಿ ಅಪಾರ ಜನರಿಂದ ಗೌರವ ಸಂಪಾದಿಸಿದವರು. ಅವರ ಕೊನೆಯ ಚಿತ್ರಕ್ಕೆ ತೊಂದರೆ ನೀಡಲಾಗುತ್ತಿದೆ. ಬಿಜೆಪಿಯವರಿಗೆ ಮಾನವೀಯತೆ ಇರಬೇಕಿತ್ತು. ಆದರೆ ಅದು ಕಾಣುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

“ಬೆಂಗಳೂರಿನ ಬಿಜೆಪಿ ಶಾಸಕರು ಚಿತ್ರಮಂದಿರಗಳಲ್ಲಿ ಜೇಮ್ಸ್ ಚಿತ್ರ ತೆಗೆಯುವಂತೆ ಕರೆ ಮಾಡುತ್ತಿದ್ದಾರೆ. ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಯಾವುದೇ ರೀತಿಯ ಪ್ರಚಾರ ಮಾಡಿಕೊಳ್ಳಲಿ. ಅವರು ತಮ್ಮ ಪಕ್ಷಕ್ಕೆ ಅನುಕೂಲವಾಗುವಂತೆ ಚಿತ್ರಕಥೆ ಮಾಡಿ ಸಿನಿಮಾ ಮಾಡಿದ್ದಾರೆ. ಮಹಾತ್ಮಾಗಾಂಧಿ, ಇಂದಿರಾಗಾಂಧಿ ಹತ್ಯೆಗಿಂತಲೂ ಚಿತ್ರಕಥೆ ಬೇಕಾ? ಅವರು ವಾಸ್ತವಾಂಶ ಬಿಟ್ಟು ಏನು ಮಾಡುತ್ತಾರೋ ಮಾಡಲಿ, ಅದು ಅವರ ಪಕ್ಷದ ಅಜೆಂಡಾ” ಎಂದು ಅವರು ಹೇಳಿದ್ದಾರೆ.

“ಆ ಚಿತ್ರ ತಯಾರಕರನ್ನು ಕರೆದು ಸನ್ಮಾನ ಮಾಡಿ ತೆರಿಗೆ ವಿನಾಯಿತಿ ನೀಡಿದ್ದಾರೆ. ಅದರ ಅಗತ್ಯ ಏನಿತ್ತು? ಅವರು ನಮ್ಮನ್ನು ವಿರೋಧಿಗಳು ಎಂದು ತೋರಿಸಲು ಈ ರೀತಿ ಮಾಡುತ್ತಿದ್ದಾರೆ. ಸಂವಿಧಾನದಲ್ಲಿ ನಮಗೆ ನೀಡಲಾಗಿರುವ ಹಕ್ಕನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ” ಎಂದು ಡಿಕೆಶಿ ಕಿಡಿ ಕಾರಿದ್ದಾರೆ.

“ಪುನೀತ್ ರಾಜಕುಮಾರ್ ಅವರ ಜೇಮ್ಸ್ ಚಿತ್ರವನ್ನು ಯಾವುದೇ ಚಿತ್ರಮಂದಿರದಿಂದ ತೆಗೆದುಹಾಕಬಾರದು. ಅವರು ಎಷ್ಟು ದಿನ ನಡೆಸುತ್ತಾರೋ ನಡೆಸಲಿ. ಬಿಜೆಪಿ ಶಾಸಕರ ಈ ನಡೆ ಖಂಡನೀಯ ಶಿವರಾಜಕುಮಾರ್ ಅವರು ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಮುಖ್ಯಮಂತ್ರಿಗಳು ಕರೆ ಮಾಡಿಸಿದ್ದರು. ಆದರೂ ಪರವಾಗಿಲ್ಲ. ನಾವು ನಮ್ಮ ನಾಡಿನ ನೀರಿಗಾಗಿ ಹೋರಾಟ ಮಾಡಿದ್ದೇವೆ” ಎಂದು ಅವರು ಹೇಳೀದ್ದಾರೆ.

ಇದನ್ನೂ ಓದಿ: `ಕಾಶ್ಮೀರ್‌ ಫೈಲ್ಸ್‌’ಗೆ ತೆರಿಗೆ ವಿನಾಯಿತಿ ನೀಡುವ ಸಿಎಂಗೆ ‘ಜೇಮ್ಸ್’ ನೆನಪಾಗಲಿಲ್ಲವೇ?: ಸಿದ್ದರಾಮಯ್ಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...