Homeಮುಖಪುಟಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಡಿಎಂಕೆ

ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಡಿಎಂಕೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿಆರ್‌. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ನಿರ್ಣಯ ಅಂಗೀಕರಿಸಿದೆ.

ಚೆನ್ನೈನ ಪಕ್ಷದ ಪ್ರಧಾನ ಕಚೇರಿ ಅಣ್ಣಾ ಅರಿವಾಲಯಂನಲ್ಲಿ ಭಾನುವಾರ (ಡಿ.22) ನಡೆದ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ ‘ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ತೀವ್ರವಾಗಿ ವಿರೋಧಿಸಲಾಗಿದೆ. ಅಲ್ಲದೆ, ಮಧುರೈ ಜಿಲ್ಲೆಯಲ್ಲಿ ಉದ್ದೇಶಿತ ಟಂಗ್‌ಸ್ಟನ್ ಗಣಿಗಾರಿಕೆ ಯೋಜನೆಯ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ.

ಮುಂಬರುವ 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 234 ವಿಧಾನಸಭಾ ಸ್ಥಾನಗಳ ಪೈಕಿ 200 ಸ್ಥಾನಗಳನ್ನು ಗೆಲ್ಲುವ ಮಹತ್ವಾಕಾಂಕ್ಷೆಯ ಗುರಿಯನ್ನು ಡಿಎಂಕೆ ಹೊಂದಿದೆ. ಅದರ ಕಾರ್ಯತಂತ್ರದ ಭಾಗವಾಗಿ, ಮುಖ್ಯಮಂತ್ರಿ ಸ್ಟಾಲಿನ್ ಅವರ ನಾಯಕತ್ವದಲ್ಲಿ ಜಾರಿಗೊಳಿಸಲಾದ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಪ್ರಚಾರಪಡಿಸುವಂತೆ ಸಭೆಯಲ್ಲಿ ಪಕ್ಷದ ಸದಸ್ಯರಿಗೆ ಸೂಚನೆ ನೀಡಲಾಗಿದೆ.

ಪಕ್ಷವು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಪೂರ್ಣಾವಧಿಯ ಪ್ರತಿನಿಧಿಗಳನ್ನು ನಿಯೋಜಿಸಿದೆ. ಅವರು ಪಕ್ಷದ ಕೇಂದ್ರ ಕಚೇರಿಗೆ ಕ್ಷೇತ್ರದಲ್ಲಿ ನಡೆಯುವ ಚುನಾವಣಾ ಸಂಬಂಧಿತ ಬೆಳವಣಿಗೆಗಳ ಕುರಿತು ನೇರವಾಗಿ ವರದಿ ನೀಡಲಿದ್ದಾರೆ. ಜನರೊಂದಿಗೆ ಸಂಪರ್ಕ ಸಾಧಿಸಿ, ತಳಮಟ್ಟದಲ್ಲಿ ಸರ್ಕಾರದ ಯೋಜನೆಗಳ ಕುರಿತು ಪ್ರಚಾರ ನಡೆಸಲಿದ್ದಾರೆ.

ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆಯ ಸಂಘಟನಾ ಕಾರ್ಯದರ್ಶಿ ಆರ್‌ಎಸ್‌ ಭಾರತಿ ಮತ್ತು ಸಚಿವರಾದ ತಂಗಂ ತೇನರಸು, ಇವಿ ವೇಲು ಮತ್ತು ಕೆಎನ್‌ ನೆಹರು ಸೇರಿದಂತೆ ಹಿರಿಯ ನಾಯಕರು ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ತಮಿಳುನಾಡು ವಿಧಾನಸಭೆಯ 159 ಸ್ಥಾನಗಳ ಪೈಕಿ ಆಡಳಿತರೂಢ ಡಿಎಂಕೆ ತನ್ನ ಮಿತ್ರಪಕ್ಷಗಳಾದ ಕಾಂಗ್ರೆಸ್ (18), ವಿಡುದಲೈ ಚಿರುತೈಗಲ್ ಕಚ್ಚಿ (ವಿಸಿಕೆ) (4), ಸಿಪಿಐ (2), ಮತ್ತು ಸಿಪಿಐ(ಎಂ) (2), ಸೇರಿ ಒಟ್ಟು 133 ಸ್ಥಾನಗಳನ್ನು ಹೊಂದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟ 45.38% ಮತಗಳನ್ನು ಗಳಿಸಿತ್ತು.

ಇದನ್ನೂ ಓದಿ : ನಿತೀಶ್, ಮೋದಿ ನೇತೃತ್ವದಲ್ಲಿ ಬಿಹಾರ ಚುನಾವಣೆ ಎದುರಿಸುತ್ತೇವೆ – ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...