Homeಕರ್ನಾಟಕಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಈ ಸ್ಥಾನಕ್ಕೆ ಬರಲು ನನ್ನ ದುಡಿಮೆ ಇದೆ. 2004 ರಲ್ಲಿ ನನ್ನ ಆರ್ಥಿಕ ಶಕ್ತಿಯನ್ನು ಬಳಸಿ ಅವರನ್ನು ಡಿಸಿಎಂ ಮಾಡಿದ್ದೇನೆ. ಅವರು ನನ್ನ ಋಣದಲ್ಲಿದ್ದಾರೆ.

- Advertisement -
- Advertisement -

ಪ್ರತಿ ಪಕ್ಷವು ಅಧಿಕಾರ ಹೇಗೆ ಹಿಡಿಯಬೇಕು ಎಂಬುದನ್ನ ನೋಡುತ್ತವೆ. ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ. ಡಿಎಂಕೆ ಮತ್ತು ನಿತೀಶ್ ಕುಮಾರ್ ಕೂಡಾ ಕಾಂಗ್ರೆಸ್ ಹಾಗೂ ಬಿಜೆಪಿ ಎರಡರ ಜೊತೆ ಮೈತ್ರಿ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಬಿಜೆಪಿ ಜೊತೆಗೆ ವಿಲೀನಗೊಳ್ಳಲಿದೆ ಎಂಬ ಸುದ್ದಿಯ ಬಗ್ಗೆ ಬೆಂಗಳೂರಿನ ಜೆಪಿ ಭವನ ಕಚೇರಿಯಲ್ಲಿ  ಸ್ಫಷ್ಟನೆ ನೀಡಿದ ಕುಮಾರಸ್ವಾಮಿ, “ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದ ಊಹಾಪೋಹಗಳನ್ನ ಗಮನಿಸಿದ್ದೇನೆ. ಜೆಡಿಎಸ್‌ನ್ನು ಯಾವ ಪಕ್ಷದ ಜೊತೆ ವಿಲೀನ ಮಾಡುವುದು ನಾವು ಬದುಕಿರುವವರೆಗೆ ಆಗೊಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

“ಕಾಂಗ್ರೆಸ್ ನಿರಂತರವಾಗಿ ಜೆಡಿಎಸ್ ಕತ್ತು ಹಿಸುಕುವ ಪ್ರಯತ್ನಕ್ಕೆ ಮುಂದಾಗಿದೆ. ಆ ಕಾರಣಕ್ಕೆ ಅನಿವಾರ್ಯವಾಗಿ ಕೆಲವು ನಿರ್ಧಾರ ಮಾಡಿದ್ದೇವೆ. ಜೆಡಿ‌ಎಸ್‌ನಿಂದ ಹೋದ ಕಾಂಗ್ರೆಸ್‌ನ ಕೆಲವು ನಾಯಕರು ಜೆಡಿಎಸ್ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರತಿ ಪಕ್ಷವು ಅಧಿಕಾರ ಹೇಗೆ ಹಿಡಿಯಬೇಕು ಎಂಬುದನ್ನ ನೋಡುತ್ತವೆ. ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ. ಡಿಎಂಕೆ ಮತ್ತು ನಿತೀಶ್ ಕುಮಾರ್ ಕೂಡಾ ಕಾಂಗ್ರೆಸ್ ಹಾಗೂ ಬಿಜೆಪಿ ಎರಡರ ಮೈತ್ರಿ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಉಪಚುನಾವಣೆ ಯಾವುದೇ ಮಾನದಂಡ ಅಲ್ಲ. 2023 ರ ಚುನಾವಣೆ ನಮಗೆ ಮುಖ್ಯ. ಸಂಕ್ರಾಂತಿ ನಂತರ ಪಕ್ಷ ಸಂಘಟನೆ ಕಾರ್ಯ ಶುರುಮಾಡುತ್ತೇವೆ. ಕಾಂಗ್ರೆಸ್‌ನ ಕೆಲವು ನಾಯಕರಿಂದ ನಮಗೆ ಹಿನ್ನಡೆಯಾಗಿದೆ. ಪಕ್ಷದಿಂದ ಕಾಲು ಹೊರಗಿಟ್ಟವರು ಕೆಲವು ಹೇಳಿಕೆ ಕೊಡುತ್ತಾರೆ. ಅದಕ್ಕೆ ತಲೆ ಕೆಡಿಸಿಕೊಳ್ಳುವುದು ಬೇಡ. ನನ್ನ ಇದುವರೆಗಿನ ರಾಜಕಾರಣ ತಾತ್ಕಾಲಿಕ, ನಿಜವಾದ ರಾಜಕಾರಣ ಶುರುವಾಗುವುದು 2023 ಕ್ಕೆ. 2023 ಕ್ಕೆ ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದು ನನ್ನ ಗುರಿ” ಎಂದರು.

ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ತಾಜ್‌‌ ವೆಸ್ಟ್‌ಎಂಡ್‌ನಲ್ಲಿ ಇದ್ದು ಆಡಳಿತ ಮಾಡಿದ್ದಕ್ಕೆ ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡರು ಎಂದಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ, ಕುಮಾರಸ್ವಾಮಿ “ಸಿದ್ದರಾಮಯ್ಯ ಲಘುವಾಗಿ ಮಾತನಾಡುವುದು ಬೇಡ. ನಾನು ಬಿಜೆಪಿಯ ಬಿ ಟೀಮ್ ಆಗಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಮಾಡುತ್ತಿರಲಿಲ್ಲ. ಕಾಂಗ್ರೆಸ್‌‌ನವರೆ ಸರ್ಕಾರ ಮಾಡಿ ಎಂದು ದೇವೇಗೌಡರು ಸಿದ್ದರಾಮಯ್ಯನವರಿಗೆ ಹೇಳಿದ್ದರು” ಎಂದರು.

“ಸಿದ್ದರಾಮಯ್ಯ ಈ ಸ್ಥಾನಕ್ಕೆ ಬರಲು ನನ್ನ ದುಡಿಮೆ ಇದೆ. ನನ್ನನ್ನು ಸಿಎಂ ಮಾಡುವಲ್ಲಿ ಅವರ ದುಡಿಮೆ ಇಲ್ಲ. 2004 ರಲ್ಲಿ ನನ್ನ ಆರ್ಥಿಕ ಶಕ್ತಿಯನ್ನು ಬಳಸಿ ಅವರನ್ನು ಡಿಸಿಎಂ ಮಾಡಿದ್ದೇನೆ. ಸಿದ್ದರಾಮಯ್ಯ ನನ್ನ ಋಣದಲ್ಲಿದ್ದು, ನಾನು ಸಿದ್ದರಾಮಯ್ಯ ಋಣದಲ್ಲಿ ಇಲ್ಲ. ಅವರ ಇತ್ತೀಚಿನ ರಾಜಕೀಯ ಟೀಕೆಗಳು ಜೆಡಿಎಸ್‌ ಸುತ್ತಲೇ ಸುತ್ತುತ್ತಿವೆ. ಸಿದ್ದರಾಮಯ್ಯ ಏಕವಚನ ಪದ ಬಳಕೆ ಮಾಡಿದ್ದಾರೆ, ಆದರೆ ಅದಕ್ಕಿಂತ ಹೆಚ್ಚಿನಿದಾಗಿ ನಾನು ಏಕವಚನದಲ್ಲೇ ಪದ ಬಳಕೆ ಮಾಡಬಲ್ಲೇ. ಸಿದ್ದರಾಮಯ್ಯನವರೇ ನಿಮ್ಮ ನಾಲಿಗೆ ಮೇಲೆ ಹಿಡಿತವಿರಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಬೀಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು ಸಿಎಂ ಆಗುದಕ್ಕೆ ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...