Homeಕರ್ನಾಟಕಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಈ ಸ್ಥಾನಕ್ಕೆ ಬರಲು ನನ್ನ ದುಡಿಮೆ ಇದೆ. 2004 ರಲ್ಲಿ ನನ್ನ ಆರ್ಥಿಕ ಶಕ್ತಿಯನ್ನು ಬಳಸಿ ಅವರನ್ನು ಡಿಸಿಎಂ ಮಾಡಿದ್ದೇನೆ. ಅವರು ನನ್ನ ಋಣದಲ್ಲಿದ್ದಾರೆ.

- Advertisement -
- Advertisement -

ಪ್ರತಿ ಪಕ್ಷವು ಅಧಿಕಾರ ಹೇಗೆ ಹಿಡಿಯಬೇಕು ಎಂಬುದನ್ನ ನೋಡುತ್ತವೆ. ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ. ಡಿಎಂಕೆ ಮತ್ತು ನಿತೀಶ್ ಕುಮಾರ್ ಕೂಡಾ ಕಾಂಗ್ರೆಸ್ ಹಾಗೂ ಬಿಜೆಪಿ ಎರಡರ ಜೊತೆ ಮೈತ್ರಿ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಬಿಜೆಪಿ ಜೊತೆಗೆ ವಿಲೀನಗೊಳ್ಳಲಿದೆ ಎಂಬ ಸುದ್ದಿಯ ಬಗ್ಗೆ ಬೆಂಗಳೂರಿನ ಜೆಪಿ ಭವನ ಕಚೇರಿಯಲ್ಲಿ  ಸ್ಫಷ್ಟನೆ ನೀಡಿದ ಕುಮಾರಸ್ವಾಮಿ, “ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದ ಊಹಾಪೋಹಗಳನ್ನ ಗಮನಿಸಿದ್ದೇನೆ. ಜೆಡಿಎಸ್‌ನ್ನು ಯಾವ ಪಕ್ಷದ ಜೊತೆ ವಿಲೀನ ಮಾಡುವುದು ನಾವು ಬದುಕಿರುವವರೆಗೆ ಆಗೊಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

“ಕಾಂಗ್ರೆಸ್ ನಿರಂತರವಾಗಿ ಜೆಡಿಎಸ್ ಕತ್ತು ಹಿಸುಕುವ ಪ್ರಯತ್ನಕ್ಕೆ ಮುಂದಾಗಿದೆ. ಆ ಕಾರಣಕ್ಕೆ ಅನಿವಾರ್ಯವಾಗಿ ಕೆಲವು ನಿರ್ಧಾರ ಮಾಡಿದ್ದೇವೆ. ಜೆಡಿ‌ಎಸ್‌ನಿಂದ ಹೋದ ಕಾಂಗ್ರೆಸ್‌ನ ಕೆಲವು ನಾಯಕರು ಜೆಡಿಎಸ್ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರತಿ ಪಕ್ಷವು ಅಧಿಕಾರ ಹೇಗೆ ಹಿಡಿಯಬೇಕು ಎಂಬುದನ್ನ ನೋಡುತ್ತವೆ. ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ. ಡಿಎಂಕೆ ಮತ್ತು ನಿತೀಶ್ ಕುಮಾರ್ ಕೂಡಾ ಕಾಂಗ್ರೆಸ್ ಹಾಗೂ ಬಿಜೆಪಿ ಎರಡರ ಮೈತ್ರಿ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಉಪಚುನಾವಣೆ ಯಾವುದೇ ಮಾನದಂಡ ಅಲ್ಲ. 2023 ರ ಚುನಾವಣೆ ನಮಗೆ ಮುಖ್ಯ. ಸಂಕ್ರಾಂತಿ ನಂತರ ಪಕ್ಷ ಸಂಘಟನೆ ಕಾರ್ಯ ಶುರುಮಾಡುತ್ತೇವೆ. ಕಾಂಗ್ರೆಸ್‌ನ ಕೆಲವು ನಾಯಕರಿಂದ ನಮಗೆ ಹಿನ್ನಡೆಯಾಗಿದೆ. ಪಕ್ಷದಿಂದ ಕಾಲು ಹೊರಗಿಟ್ಟವರು ಕೆಲವು ಹೇಳಿಕೆ ಕೊಡುತ್ತಾರೆ. ಅದಕ್ಕೆ ತಲೆ ಕೆಡಿಸಿಕೊಳ್ಳುವುದು ಬೇಡ. ನನ್ನ ಇದುವರೆಗಿನ ರಾಜಕಾರಣ ತಾತ್ಕಾಲಿಕ, ನಿಜವಾದ ರಾಜಕಾರಣ ಶುರುವಾಗುವುದು 2023 ಕ್ಕೆ. 2023 ಕ್ಕೆ ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದು ನನ್ನ ಗುರಿ” ಎಂದರು.

ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ತಾಜ್‌‌ ವೆಸ್ಟ್‌ಎಂಡ್‌ನಲ್ಲಿ ಇದ್ದು ಆಡಳಿತ ಮಾಡಿದ್ದಕ್ಕೆ ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡರು ಎಂದಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ, ಕುಮಾರಸ್ವಾಮಿ “ಸಿದ್ದರಾಮಯ್ಯ ಲಘುವಾಗಿ ಮಾತನಾಡುವುದು ಬೇಡ. ನಾನು ಬಿಜೆಪಿಯ ಬಿ ಟೀಮ್ ಆಗಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಮಾಡುತ್ತಿರಲಿಲ್ಲ. ಕಾಂಗ್ರೆಸ್‌‌ನವರೆ ಸರ್ಕಾರ ಮಾಡಿ ಎಂದು ದೇವೇಗೌಡರು ಸಿದ್ದರಾಮಯ್ಯನವರಿಗೆ ಹೇಳಿದ್ದರು” ಎಂದರು.

“ಸಿದ್ದರಾಮಯ್ಯ ಈ ಸ್ಥಾನಕ್ಕೆ ಬರಲು ನನ್ನ ದುಡಿಮೆ ಇದೆ. ನನ್ನನ್ನು ಸಿಎಂ ಮಾಡುವಲ್ಲಿ ಅವರ ದುಡಿಮೆ ಇಲ್ಲ. 2004 ರಲ್ಲಿ ನನ್ನ ಆರ್ಥಿಕ ಶಕ್ತಿಯನ್ನು ಬಳಸಿ ಅವರನ್ನು ಡಿಸಿಎಂ ಮಾಡಿದ್ದೇನೆ. ಸಿದ್ದರಾಮಯ್ಯ ನನ್ನ ಋಣದಲ್ಲಿದ್ದು, ನಾನು ಸಿದ್ದರಾಮಯ್ಯ ಋಣದಲ್ಲಿ ಇಲ್ಲ. ಅವರ ಇತ್ತೀಚಿನ ರಾಜಕೀಯ ಟೀಕೆಗಳು ಜೆಡಿಎಸ್‌ ಸುತ್ತಲೇ ಸುತ್ತುತ್ತಿವೆ. ಸಿದ್ದರಾಮಯ್ಯ ಏಕವಚನ ಪದ ಬಳಕೆ ಮಾಡಿದ್ದಾರೆ, ಆದರೆ ಅದಕ್ಕಿಂತ ಹೆಚ್ಚಿನಿದಾಗಿ ನಾನು ಏಕವಚನದಲ್ಲೇ ಪದ ಬಳಕೆ ಮಾಡಬಲ್ಲೇ. ಸಿದ್ದರಾಮಯ್ಯನವರೇ ನಿಮ್ಮ ನಾಲಿಗೆ ಮೇಲೆ ಹಿಡಿತವಿರಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಬೀಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು ಸಿಎಂ ಆಗುದಕ್ಕೆ ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...