Homeಕರ್ನಾಟಕಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಈ ಸ್ಥಾನಕ್ಕೆ ಬರಲು ನನ್ನ ದುಡಿಮೆ ಇದೆ. 2004 ರಲ್ಲಿ ನನ್ನ ಆರ್ಥಿಕ ಶಕ್ತಿಯನ್ನು ಬಳಸಿ ಅವರನ್ನು ಡಿಸಿಎಂ ಮಾಡಿದ್ದೇನೆ. ಅವರು ನನ್ನ ಋಣದಲ್ಲಿದ್ದಾರೆ.

- Advertisement -
- Advertisement -

ಪ್ರತಿ ಪಕ್ಷವು ಅಧಿಕಾರ ಹೇಗೆ ಹಿಡಿಯಬೇಕು ಎಂಬುದನ್ನ ನೋಡುತ್ತವೆ. ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ. ಡಿಎಂಕೆ ಮತ್ತು ನಿತೀಶ್ ಕುಮಾರ್ ಕೂಡಾ ಕಾಂಗ್ರೆಸ್ ಹಾಗೂ ಬಿಜೆಪಿ ಎರಡರ ಜೊತೆ ಮೈತ್ರಿ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಬಿಜೆಪಿ ಜೊತೆಗೆ ವಿಲೀನಗೊಳ್ಳಲಿದೆ ಎಂಬ ಸುದ್ದಿಯ ಬಗ್ಗೆ ಬೆಂಗಳೂರಿನ ಜೆಪಿ ಭವನ ಕಚೇರಿಯಲ್ಲಿ  ಸ್ಫಷ್ಟನೆ ನೀಡಿದ ಕುಮಾರಸ್ವಾಮಿ, “ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದ ಊಹಾಪೋಹಗಳನ್ನ ಗಮನಿಸಿದ್ದೇನೆ. ಜೆಡಿಎಸ್‌ನ್ನು ಯಾವ ಪಕ್ಷದ ಜೊತೆ ವಿಲೀನ ಮಾಡುವುದು ನಾವು ಬದುಕಿರುವವರೆಗೆ ಆಗೊಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

“ಕಾಂಗ್ರೆಸ್ ನಿರಂತರವಾಗಿ ಜೆಡಿಎಸ್ ಕತ್ತು ಹಿಸುಕುವ ಪ್ರಯತ್ನಕ್ಕೆ ಮುಂದಾಗಿದೆ. ಆ ಕಾರಣಕ್ಕೆ ಅನಿವಾರ್ಯವಾಗಿ ಕೆಲವು ನಿರ್ಧಾರ ಮಾಡಿದ್ದೇವೆ. ಜೆಡಿ‌ಎಸ್‌ನಿಂದ ಹೋದ ಕಾಂಗ್ರೆಸ್‌ನ ಕೆಲವು ನಾಯಕರು ಜೆಡಿಎಸ್ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರತಿ ಪಕ್ಷವು ಅಧಿಕಾರ ಹೇಗೆ ಹಿಡಿಯಬೇಕು ಎಂಬುದನ್ನ ನೋಡುತ್ತವೆ. ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ. ಡಿಎಂಕೆ ಮತ್ತು ನಿತೀಶ್ ಕುಮಾರ್ ಕೂಡಾ ಕಾಂಗ್ರೆಸ್ ಹಾಗೂ ಬಿಜೆಪಿ ಎರಡರ ಮೈತ್ರಿ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಉಪಚುನಾವಣೆ ಯಾವುದೇ ಮಾನದಂಡ ಅಲ್ಲ. 2023 ರ ಚುನಾವಣೆ ನಮಗೆ ಮುಖ್ಯ. ಸಂಕ್ರಾಂತಿ ನಂತರ ಪಕ್ಷ ಸಂಘಟನೆ ಕಾರ್ಯ ಶುರುಮಾಡುತ್ತೇವೆ. ಕಾಂಗ್ರೆಸ್‌ನ ಕೆಲವು ನಾಯಕರಿಂದ ನಮಗೆ ಹಿನ್ನಡೆಯಾಗಿದೆ. ಪಕ್ಷದಿಂದ ಕಾಲು ಹೊರಗಿಟ್ಟವರು ಕೆಲವು ಹೇಳಿಕೆ ಕೊಡುತ್ತಾರೆ. ಅದಕ್ಕೆ ತಲೆ ಕೆಡಿಸಿಕೊಳ್ಳುವುದು ಬೇಡ. ನನ್ನ ಇದುವರೆಗಿನ ರಾಜಕಾರಣ ತಾತ್ಕಾಲಿಕ, ನಿಜವಾದ ರಾಜಕಾರಣ ಶುರುವಾಗುವುದು 2023 ಕ್ಕೆ. 2023 ಕ್ಕೆ ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದು ನನ್ನ ಗುರಿ” ಎಂದರು.

ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ತಾಜ್‌‌ ವೆಸ್ಟ್‌ಎಂಡ್‌ನಲ್ಲಿ ಇದ್ದು ಆಡಳಿತ ಮಾಡಿದ್ದಕ್ಕೆ ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡರು ಎಂದಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ, ಕುಮಾರಸ್ವಾಮಿ “ಸಿದ್ದರಾಮಯ್ಯ ಲಘುವಾಗಿ ಮಾತನಾಡುವುದು ಬೇಡ. ನಾನು ಬಿಜೆಪಿಯ ಬಿ ಟೀಮ್ ಆಗಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಮಾಡುತ್ತಿರಲಿಲ್ಲ. ಕಾಂಗ್ರೆಸ್‌‌ನವರೆ ಸರ್ಕಾರ ಮಾಡಿ ಎಂದು ದೇವೇಗೌಡರು ಸಿದ್ದರಾಮಯ್ಯನವರಿಗೆ ಹೇಳಿದ್ದರು” ಎಂದರು.

“ಸಿದ್ದರಾಮಯ್ಯ ಈ ಸ್ಥಾನಕ್ಕೆ ಬರಲು ನನ್ನ ದುಡಿಮೆ ಇದೆ. ನನ್ನನ್ನು ಸಿಎಂ ಮಾಡುವಲ್ಲಿ ಅವರ ದುಡಿಮೆ ಇಲ್ಲ. 2004 ರಲ್ಲಿ ನನ್ನ ಆರ್ಥಿಕ ಶಕ್ತಿಯನ್ನು ಬಳಸಿ ಅವರನ್ನು ಡಿಸಿಎಂ ಮಾಡಿದ್ದೇನೆ. ಸಿದ್ದರಾಮಯ್ಯ ನನ್ನ ಋಣದಲ್ಲಿದ್ದು, ನಾನು ಸಿದ್ದರಾಮಯ್ಯ ಋಣದಲ್ಲಿ ಇಲ್ಲ. ಅವರ ಇತ್ತೀಚಿನ ರಾಜಕೀಯ ಟೀಕೆಗಳು ಜೆಡಿಎಸ್‌ ಸುತ್ತಲೇ ಸುತ್ತುತ್ತಿವೆ. ಸಿದ್ದರಾಮಯ್ಯ ಏಕವಚನ ಪದ ಬಳಕೆ ಮಾಡಿದ್ದಾರೆ, ಆದರೆ ಅದಕ್ಕಿಂತ ಹೆಚ್ಚಿನಿದಾಗಿ ನಾನು ಏಕವಚನದಲ್ಲೇ ಪದ ಬಳಕೆ ಮಾಡಬಲ್ಲೇ. ಸಿದ್ದರಾಮಯ್ಯನವರೇ ನಿಮ್ಮ ನಾಲಿಗೆ ಮೇಲೆ ಹಿಡಿತವಿರಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಬೀಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು ಸಿಎಂ ಆಗುದಕ್ಕೆ ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...