Homeಕರ್ನಾಟಕಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಈ ಸ್ಥಾನಕ್ಕೆ ಬರಲು ನನ್ನ ದುಡಿಮೆ ಇದೆ. 2004 ರಲ್ಲಿ ನನ್ನ ಆರ್ಥಿಕ ಶಕ್ತಿಯನ್ನು ಬಳಸಿ ಅವರನ್ನು ಡಿಸಿಎಂ ಮಾಡಿದ್ದೇನೆ. ಅವರು ನನ್ನ ಋಣದಲ್ಲಿದ್ದಾರೆ.

- Advertisement -
- Advertisement -

ಪ್ರತಿ ಪಕ್ಷವು ಅಧಿಕಾರ ಹೇಗೆ ಹಿಡಿಯಬೇಕು ಎಂಬುದನ್ನ ನೋಡುತ್ತವೆ. ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ. ಡಿಎಂಕೆ ಮತ್ತು ನಿತೀಶ್ ಕುಮಾರ್ ಕೂಡಾ ಕಾಂಗ್ರೆಸ್ ಹಾಗೂ ಬಿಜೆಪಿ ಎರಡರ ಜೊತೆ ಮೈತ್ರಿ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಬಿಜೆಪಿ ಜೊತೆಗೆ ವಿಲೀನಗೊಳ್ಳಲಿದೆ ಎಂಬ ಸುದ್ದಿಯ ಬಗ್ಗೆ ಬೆಂಗಳೂರಿನ ಜೆಪಿ ಭವನ ಕಚೇರಿಯಲ್ಲಿ  ಸ್ಫಷ್ಟನೆ ನೀಡಿದ ಕುಮಾರಸ್ವಾಮಿ, “ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದ ಊಹಾಪೋಹಗಳನ್ನ ಗಮನಿಸಿದ್ದೇನೆ. ಜೆಡಿಎಸ್‌ನ್ನು ಯಾವ ಪಕ್ಷದ ಜೊತೆ ವಿಲೀನ ಮಾಡುವುದು ನಾವು ಬದುಕಿರುವವರೆಗೆ ಆಗೊಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

“ಕಾಂಗ್ರೆಸ್ ನಿರಂತರವಾಗಿ ಜೆಡಿಎಸ್ ಕತ್ತು ಹಿಸುಕುವ ಪ್ರಯತ್ನಕ್ಕೆ ಮುಂದಾಗಿದೆ. ಆ ಕಾರಣಕ್ಕೆ ಅನಿವಾರ್ಯವಾಗಿ ಕೆಲವು ನಿರ್ಧಾರ ಮಾಡಿದ್ದೇವೆ. ಜೆಡಿ‌ಎಸ್‌ನಿಂದ ಹೋದ ಕಾಂಗ್ರೆಸ್‌ನ ಕೆಲವು ನಾಯಕರು ಜೆಡಿಎಸ್ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರತಿ ಪಕ್ಷವು ಅಧಿಕಾರ ಹೇಗೆ ಹಿಡಿಯಬೇಕು ಎಂಬುದನ್ನ ನೋಡುತ್ತವೆ. ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ. ಡಿಎಂಕೆ ಮತ್ತು ನಿತೀಶ್ ಕುಮಾರ್ ಕೂಡಾ ಕಾಂಗ್ರೆಸ್ ಹಾಗೂ ಬಿಜೆಪಿ ಎರಡರ ಮೈತ್ರಿ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಉಪಚುನಾವಣೆ ಯಾವುದೇ ಮಾನದಂಡ ಅಲ್ಲ. 2023 ರ ಚುನಾವಣೆ ನಮಗೆ ಮುಖ್ಯ. ಸಂಕ್ರಾಂತಿ ನಂತರ ಪಕ್ಷ ಸಂಘಟನೆ ಕಾರ್ಯ ಶುರುಮಾಡುತ್ತೇವೆ. ಕಾಂಗ್ರೆಸ್‌ನ ಕೆಲವು ನಾಯಕರಿಂದ ನಮಗೆ ಹಿನ್ನಡೆಯಾಗಿದೆ. ಪಕ್ಷದಿಂದ ಕಾಲು ಹೊರಗಿಟ್ಟವರು ಕೆಲವು ಹೇಳಿಕೆ ಕೊಡುತ್ತಾರೆ. ಅದಕ್ಕೆ ತಲೆ ಕೆಡಿಸಿಕೊಳ್ಳುವುದು ಬೇಡ. ನನ್ನ ಇದುವರೆಗಿನ ರಾಜಕಾರಣ ತಾತ್ಕಾಲಿಕ, ನಿಜವಾದ ರಾಜಕಾರಣ ಶುರುವಾಗುವುದು 2023 ಕ್ಕೆ. 2023 ಕ್ಕೆ ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದು ನನ್ನ ಗುರಿ” ಎಂದರು.

ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ತಾಜ್‌‌ ವೆಸ್ಟ್‌ಎಂಡ್‌ನಲ್ಲಿ ಇದ್ದು ಆಡಳಿತ ಮಾಡಿದ್ದಕ್ಕೆ ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡರು ಎಂದಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ, ಕುಮಾರಸ್ವಾಮಿ “ಸಿದ್ದರಾಮಯ್ಯ ಲಘುವಾಗಿ ಮಾತನಾಡುವುದು ಬೇಡ. ನಾನು ಬಿಜೆಪಿಯ ಬಿ ಟೀಮ್ ಆಗಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಮಾಡುತ್ತಿರಲಿಲ್ಲ. ಕಾಂಗ್ರೆಸ್‌‌ನವರೆ ಸರ್ಕಾರ ಮಾಡಿ ಎಂದು ದೇವೇಗೌಡರು ಸಿದ್ದರಾಮಯ್ಯನವರಿಗೆ ಹೇಳಿದ್ದರು” ಎಂದರು.

“ಸಿದ್ದರಾಮಯ್ಯ ಈ ಸ್ಥಾನಕ್ಕೆ ಬರಲು ನನ್ನ ದುಡಿಮೆ ಇದೆ. ನನ್ನನ್ನು ಸಿಎಂ ಮಾಡುವಲ್ಲಿ ಅವರ ದುಡಿಮೆ ಇಲ್ಲ. 2004 ರಲ್ಲಿ ನನ್ನ ಆರ್ಥಿಕ ಶಕ್ತಿಯನ್ನು ಬಳಸಿ ಅವರನ್ನು ಡಿಸಿಎಂ ಮಾಡಿದ್ದೇನೆ. ಸಿದ್ದರಾಮಯ್ಯ ನನ್ನ ಋಣದಲ್ಲಿದ್ದು, ನಾನು ಸಿದ್ದರಾಮಯ್ಯ ಋಣದಲ್ಲಿ ಇಲ್ಲ. ಅವರ ಇತ್ತೀಚಿನ ರಾಜಕೀಯ ಟೀಕೆಗಳು ಜೆಡಿಎಸ್‌ ಸುತ್ತಲೇ ಸುತ್ತುತ್ತಿವೆ. ಸಿದ್ದರಾಮಯ್ಯ ಏಕವಚನ ಪದ ಬಳಕೆ ಮಾಡಿದ್ದಾರೆ, ಆದರೆ ಅದಕ್ಕಿಂತ ಹೆಚ್ಚಿನಿದಾಗಿ ನಾನು ಏಕವಚನದಲ್ಲೇ ಪದ ಬಳಕೆ ಮಾಡಬಲ್ಲೇ. ಸಿದ್ದರಾಮಯ್ಯನವರೇ ನಿಮ್ಮ ನಾಲಿಗೆ ಮೇಲೆ ಹಿಡಿತವಿರಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಬೀಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು ಸಿಎಂ ಆಗುದಕ್ಕೆ ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...