Homeಮುಖಪುಟಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

ಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

- Advertisement -
- Advertisement -

ತಮಿಳುನಾಡು ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರ ವಿಭಿನ್ನ ರೀತಿಯಲ್ಲಿ ನಡೆಯುತ್ತಿದೆ. ಇದಕ್ಕೆ ಹೊಸ ರೂಪ ಕೊಟ್ಟಿರುವ ಡಿಎಂಕೆ ಅಭ್ಯರ್ಥಿಗಳು, ತಮ್ಮ ಎದುರಾಳಿ ಬಿಜೆಪಿ ಮತ್ತು ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಿಕೊಂಡಿದ್ದಾರೆ!

ಹೌದು, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಕಣಕ್ಕಿಳಿದಿದೆ. ಇವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಬಿಜೆಪಿ ತಂಡವೇ ಭರ್ಜರಿ ಪ್ರಚಾರ ನಡೆಸುತ್ತಿದೆ. ಇಂದು ಟ್ವಿಟರ್‌ ಸಮರ ಆರಂಭಿಸಿರುವ ಡಿಎಂಕೆ ನಾಯಕರು, ತಮ್ಮ ಕ್ಷೇತ್ರಗಳಲ್ಲಿನ ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ದಯವಿಟ್ಟು ಬನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನಿಸಿದ್ದಾರೆ. ನೀವು ಬಂದು ಪ್ರಚಾರ ಮಾಡುವುದರಿಂದ ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತದೆ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ಧರಮಪುರಿಯಿಂದ ತಿರುವಣ್ಣಾಮಲೈ ಮತ್ತು ಕಾಂಚೀಪುರಂನಿಂದ ಕೃಷ್ಣಗಿರಿವರೆಗಿನ ಎಲ್ಲಾ ಡಿಎಂಕೆ ನಾಯಕರು ಸಂಘಟಿತ ಐಟಿ ಸೆಲ್ ಅಭಿಯಾನದಲ್ಲಿ ಟ್ವೀಟ್ ಮಾಡಿದ್ದಾರೆ. ಟ್ವೀಟ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ. ರಾಜ್ಯದಲ್ಲಿ ನರೇಂದ್ರ ಮೋದಿ ವಿರುದ್ಧದ ದೊಡ್ಡ ಅಲೆಯಿದ್ದು, ಮೋದಿ ಬಂದು ವಿರೋಧಿಗಳ ಪರ ಪ್ರಚಾರ ನಡೆಸಿದರೆ ನಮ್ಮ ಗೆಲುವು ಸುಲಭ ಎಂದು ಡಿಎಂಕೆ ಅಭ್ಯರ್ಥಿಗಳು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಟ್ವಿಟರ್‌ ಅಭಿಯಾನವನ್ನು ಮಾರ್ಚ್ 31 ರಂದು ಡಿಎಂಕೆ ಪರಿಸರ ವಿಭಾಗದ ಕಾರ್ಯದರ್ಶಿ ಕಾರ್ತಿಕೇಯ ಶಿವಸೇನಾಪತಿ ಅವರು ಪ್ರಾರಂಭಿಸಿದರು.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ದ್ರಾವಿಡ ರಾಜಕೀಯಕ್ಕೆ ಹೊಸ ಸವಾಲುಗಳು!

ತಮ್ಮ ಟ್ವಿಟರ್‌ ಖಾತೆಯಲ್ಲಿ ಕಾರ್ತಿಕೇಯ ಶಿವಸೇನಾಪತಿ, ’ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ… ಸಚಿವ ಎಸ್.ಪಿ.ವೇಲುಮನಿ ಅವರಿಗಾಗಿ ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಡಿಎಂಕೆ ಅಭ್ಯರ್ಥಿಯಾಗಿದ್ದೇನೆ. ನೀವು ಅವರನ್ನು ಬೆಂಬಲಿಸಿದರೆ ಅದು ನನಗೆ ತುಂಬಾ ಉಪಯುಕ್ತವಾಗಿರುತ್ತದೆ. ಧನ್ಯವಾದಗಳು ಸರ್” ಎಂದಿದ್ದಾರೆ.

ಇದೇ ರೀತಿ ಎಲ್ಲಾ ಡಿಎಂಕೆ ನಾಯಕರು ಕೂಡ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿ ಬಿಜೆಪಿ ಮುಖಂಡರಿಗೆ ಟ್ಯಾಗ್ ಮಾಡಿ ವ್ಯಂಗ್ಯವಾಡಿದ್ದಾರೆ.

ಶಾಸಕ ಎಸ್.ಆರ್‌. ರಾಜಾ ಟ್ವೀಟ್ ಮಾಡಿ, ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ.. ದಯವಿಟ್ಟು ಟಿಕೆಎಂ ಚಿನ್ನಯ್ಯ ಪರ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಸ್ಪರ್ಧಿಸಿರುವ ಡಿಎಂಕೆ ಅಭ್ಯರ್ಥಿ. ಅವರ ಪರವಾಗಿ ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತರವನ್ನು ಹೆಚ್ಚಿಸಲು ತುಂಬಾ ಉಪಯೋಗವಾಗುತ್ತದೆ. ಧನ್ಯವಾದಗಳು ಸರ್” ಎಂದು ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ.

ಡಿಎಂಕೆ ನಾಯಕರ ಜೊತೆಗೆ ಶ್ರೀಪೆರುಂಬದೂರ್‌ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೆಲ್ವಪೆರುಂದಗೈ ಕೂಡ ಈದೇ ರೀತಿಯ ಟ್ವೀಟ್ ಮಾಡಿದ್ದು, ಮೋದಿಯವರೆ ನನ್ನ ಪ್ರತಿಸ್ಪರ್ಧಿ ಕೆ.ಪಳನಿ ಪರ ಪ್ರಚಾರ ನಡೆಸಿ. ನಾನು ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದೇನೆ. ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತಹ ಹೆಚ್ಚಾಗುತ್ತದೆ ಎಂದಿದ್ದಾರೆ.

ಡಿಎಂಕೆ ನಾಯಕರ ಟ್ವೀಟ್‌ಗಳನ್ನು ಸೇರಿಸಿ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ತಾವು ಕೂಡ ವ್ಯಂಗ್ಯವಾಡಿದ್ದಾರೆ.

234 ವಿಧಾನಸಭಾ ಕ್ಷೇತ್ರಗಳ ತಮಿಳುನಾಡಿನ ಚುನಾವಣೆ ಏಪ್ರಿಲ್ 6 ರಂದು ನಡೆಯಲಿದೆ. ಶುಕ್ರವಾರ (ಏಪ್ರಿಲ್ 2) ರಂದು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅಳಿಯ ಸಬರೀಸನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ನಾಲ್ಕು ಮನೆಗಳಲ್ಲಿ ಶೋಧ ಕಾರ್ಯ ನಡೆಯತ್ತಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಲು BJP ಅಭ್ಯರ್ಥಿ ಹಿಂದೇಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...