Homeಮುಖಪುಟಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

ಮೋದಿಯವರೇ ನನ್ನ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಪರ ಪ್ರಚಾರ ನಡೆಸಿ ಎಂದ ಡಿಎಂಕೆ ನಾಯಕರು: ಕಾರಣವೇನು?

- Advertisement -
- Advertisement -

ತಮಿಳುನಾಡು ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರ ವಿಭಿನ್ನ ರೀತಿಯಲ್ಲಿ ನಡೆಯುತ್ತಿದೆ. ಇದಕ್ಕೆ ಹೊಸ ರೂಪ ಕೊಟ್ಟಿರುವ ಡಿಎಂಕೆ ಅಭ್ಯರ್ಥಿಗಳು, ತಮ್ಮ ಎದುರಾಳಿ ಬಿಜೆಪಿ ಮತ್ತು ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಿಕೊಂಡಿದ್ದಾರೆ!

ಹೌದು, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಕಣಕ್ಕಿಳಿದಿದೆ. ಇವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಬಿಜೆಪಿ ತಂಡವೇ ಭರ್ಜರಿ ಪ್ರಚಾರ ನಡೆಸುತ್ತಿದೆ. ಇಂದು ಟ್ವಿಟರ್‌ ಸಮರ ಆರಂಭಿಸಿರುವ ಡಿಎಂಕೆ ನಾಯಕರು, ತಮ್ಮ ಕ್ಷೇತ್ರಗಳಲ್ಲಿನ ಎಐಎಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ದಯವಿಟ್ಟು ಬನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನಿಸಿದ್ದಾರೆ. ನೀವು ಬಂದು ಪ್ರಚಾರ ಮಾಡುವುದರಿಂದ ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತದೆ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ಧರಮಪುರಿಯಿಂದ ತಿರುವಣ್ಣಾಮಲೈ ಮತ್ತು ಕಾಂಚೀಪುರಂನಿಂದ ಕೃಷ್ಣಗಿರಿವರೆಗಿನ ಎಲ್ಲಾ ಡಿಎಂಕೆ ನಾಯಕರು ಸಂಘಟಿತ ಐಟಿ ಸೆಲ್ ಅಭಿಯಾನದಲ್ಲಿ ಟ್ವೀಟ್ ಮಾಡಿದ್ದಾರೆ. ಟ್ವೀಟ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ. ರಾಜ್ಯದಲ್ಲಿ ನರೇಂದ್ರ ಮೋದಿ ವಿರುದ್ಧದ ದೊಡ್ಡ ಅಲೆಯಿದ್ದು, ಮೋದಿ ಬಂದು ವಿರೋಧಿಗಳ ಪರ ಪ್ರಚಾರ ನಡೆಸಿದರೆ ನಮ್ಮ ಗೆಲುವು ಸುಲಭ ಎಂದು ಡಿಎಂಕೆ ಅಭ್ಯರ್ಥಿಗಳು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಟ್ವಿಟರ್‌ ಅಭಿಯಾನವನ್ನು ಮಾರ್ಚ್ 31 ರಂದು ಡಿಎಂಕೆ ಪರಿಸರ ವಿಭಾಗದ ಕಾರ್ಯದರ್ಶಿ ಕಾರ್ತಿಕೇಯ ಶಿವಸೇನಾಪತಿ ಅವರು ಪ್ರಾರಂಭಿಸಿದರು.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ದ್ರಾವಿಡ ರಾಜಕೀಯಕ್ಕೆ ಹೊಸ ಸವಾಲುಗಳು!

ತಮ್ಮ ಟ್ವಿಟರ್‌ ಖಾತೆಯಲ್ಲಿ ಕಾರ್ತಿಕೇಯ ಶಿವಸೇನಾಪತಿ, ’ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ… ಸಚಿವ ಎಸ್.ಪಿ.ವೇಲುಮನಿ ಅವರಿಗಾಗಿ ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಡಿಎಂಕೆ ಅಭ್ಯರ್ಥಿಯಾಗಿದ್ದೇನೆ. ನೀವು ಅವರನ್ನು ಬೆಂಬಲಿಸಿದರೆ ಅದು ನನಗೆ ತುಂಬಾ ಉಪಯುಕ್ತವಾಗಿರುತ್ತದೆ. ಧನ್ಯವಾದಗಳು ಸರ್” ಎಂದಿದ್ದಾರೆ.

ಇದೇ ರೀತಿ ಎಲ್ಲಾ ಡಿಎಂಕೆ ನಾಯಕರು ಕೂಡ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿ ಬಿಜೆಪಿ ಮುಖಂಡರಿಗೆ ಟ್ಯಾಗ್ ಮಾಡಿ ವ್ಯಂಗ್ಯವಾಡಿದ್ದಾರೆ.

ಶಾಸಕ ಎಸ್.ಆರ್‌. ರಾಜಾ ಟ್ವೀಟ್ ಮಾಡಿ, ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೇ.. ದಯವಿಟ್ಟು ಟಿಕೆಎಂ ಚಿನ್ನಯ್ಯ ಪರ ಪ್ರಚಾರ ಮಾಡಿ. ನಾನು ಅವರ ವಿರುದ್ಧ ಸ್ಪರ್ಧಿಸಿರುವ ಡಿಎಂಕೆ ಅಭ್ಯರ್ಥಿ. ಅವರ ಪರವಾಗಿ ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತರವನ್ನು ಹೆಚ್ಚಿಸಲು ತುಂಬಾ ಉಪಯೋಗವಾಗುತ್ತದೆ. ಧನ್ಯವಾದಗಳು ಸರ್” ಎಂದು ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ.

ಡಿಎಂಕೆ ನಾಯಕರ ಜೊತೆಗೆ ಶ್ರೀಪೆರುಂಬದೂರ್‌ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೆಲ್ವಪೆರುಂದಗೈ ಕೂಡ ಈದೇ ರೀತಿಯ ಟ್ವೀಟ್ ಮಾಡಿದ್ದು, ಮೋದಿಯವರೆ ನನ್ನ ಪ್ರತಿಸ್ಪರ್ಧಿ ಕೆ.ಪಳನಿ ಪರ ಪ್ರಚಾರ ನಡೆಸಿ. ನಾನು ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದೇನೆ. ನೀವು ಪ್ರಚಾರ ನಡೆಸಿದರೇ ನನ್ನ ಗೆಲುವಿನ ಅಂತಹ ಹೆಚ್ಚಾಗುತ್ತದೆ ಎಂದಿದ್ದಾರೆ.

ಡಿಎಂಕೆ ನಾಯಕರ ಟ್ವೀಟ್‌ಗಳನ್ನು ಸೇರಿಸಿ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ತಾವು ಕೂಡ ವ್ಯಂಗ್ಯವಾಡಿದ್ದಾರೆ.

234 ವಿಧಾನಸಭಾ ಕ್ಷೇತ್ರಗಳ ತಮಿಳುನಾಡಿನ ಚುನಾವಣೆ ಏಪ್ರಿಲ್ 6 ರಂದು ನಡೆಯಲಿದೆ. ಶುಕ್ರವಾರ (ಏಪ್ರಿಲ್ 2) ರಂದು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅಳಿಯ ಸಬರೀಸನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ನಾಲ್ಕು ಮನೆಗಳಲ್ಲಿ ಶೋಧ ಕಾರ್ಯ ನಡೆಯತ್ತಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಲು BJP ಅಭ್ಯರ್ಥಿ ಹಿಂದೇಟು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

0
ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಸ್ಥಾನಕ್ಕೆ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆದರೆ, ಈಶಾನ್ಯ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಜನರು ಮತದಾನದಿಂದ ದೂರ ಉಳಿದಿದ್ದಾರೆ ಎಂದು 'ಇಂಡಿಯಾ...