Homeಮುಖಪುಟದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ: ಡಿಎಂಕೆ ಶಾಸಕನ ಪುತ್ರ, ಸೊಸೆಗೆ ನ್ಯಾಯಾಂಗ ಬಂಧನ

ದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ: ಡಿಎಂಕೆ ಶಾಸಕನ ಪುತ್ರ, ಸೊಸೆಗೆ ನ್ಯಾಯಾಂಗ ಬಂಧನ

- Advertisement -
- Advertisement -

ದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಡಿಎಂಕೆ ಶಾಸಕ ಐ ಕರುಣಾನಿತಿ ಪುತ್ರ ಮತ್ತು ಸೊಸೆಯ ಜಾಮೀನು ಅರ್ಜಿಯನ್ನು ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದ್ದು, ಪ್ರಕರಣದಲ್ಲಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿದಿದೆ.

ಮನೆಕೆಲಸಕ್ಕಿದ್ದ ಬಾಲಕಿಯ ಮೈಮೇಲೆ ಸಿಗರೇಟ್‌ನಿಂದ ಸುಟ್ಟು, ನಿಂದಿಸಿ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಪುತ್ರ ಆಂಟೊ ಮತಿವನನ್ ಮತ್ತು ಸೊಸೆ ಮೆರ್ಲಿನಾ ಅವರ ಜಾಮೀನು ಅರ್ಜಿಯನ್ನು ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಆರೋಪಿಗಳ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ದಂಪತಿಗಳು ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು, ಆದರೆ ಅಂತಿಮವಾಗಿ ಜನವರಿ 25ರಂದು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದಲ್ಲಿ ಅವರನ್ನು ಬಂಧಿಸಲಾಗಿತ್ತು ಮತ್ತು ಫೆಬ್ರವರಿ 9ರವರೆಗೆ  ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ದಂಪತಿಯ ಜಾಮೀನು ಅರ್ಜಿಯ ಮೊದಲ ವಿಚಾರಣೆಯನ್ನು ಫೆಬ್ರವರಿ 2ರಂದು ನಡೆಸಲಾಗಿದೆ. ಫೆಬ್ರವರಿ 6 ರಂದು ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಅಲಿ,  ದಂಪತಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ. ಆರೋಪಿಗಳು ಜಾಮೀನಿಗಾಗಿ ಮದ್ರಾಸ್ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

ಏನಿದು ಪ್ರಕರಣ

ಪಲ್ಲವರಂ ಕ್ಷೇತ್ರದ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಮಗ ಆಂಟೊ ಮನೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಬಾಲಕಿ ಕೆಲಸ ಮಾಡುತ್ತಿದ್ದಳು. ಬಾಲಕಿಯ ಮುಖ ಮತ್ತು ದೇಹದ ಮೇಲೆ ಸಿಗರೇಟ್‌ನಿಂದ ಸುಟ್ಟಗಾಯಗಳಿತ್ತು. ಶಾಸಕರ ಮಗ ಮತ್ತು ಸೊಸೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ಪೊಂಗಲ್ ಹಬ್ಬಕ್ಕೆ ತಾಯಿಯ ಮನೆಗೆ ಯುವತಿ ತೆರಳಿದಾಗ ಮಗಳ ಮೈ ಮೇಲೆ ಗಾಯವಾಗಿರುವುದನ್ನು ತಾಯಿ ಗಮನಿಸಿದ್ದಾರೆ. ಬಳಿಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕರುಣಾನಿತಿ ಅವರ ಮಗ ಆಂಟೊ ಹಾಗೂ ಸೊಸೆ ಮೆರ್ಲಿನಾ ಅವರು ಚೆನ್ನೈನ ತಿರುವನ್ಮಿಯೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಥಳಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಕಲ್ಲಾಕುರಿಚಿ ಜಿಲ್ಲೆಯ ಉಲುಂದೂರುಪೇಟೆ ಮೂಲದ ಅನು(ಹೆಸರು ಬದಲಿಸಲಾಗಿದೆ) ಅವರು ಎಂಟು ತಿಂಗಳ ಹಿಂದೆ ಅಂದರೆ 12ನೇ ತರಗತಿ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಆಂಟೊ ಅವರ ನಿವಾಸದಲ್ಲಿ ಮನೆ ಕೆಲಸಕ್ಕೆ ಸೇರಿಕೊಂಡಿದ್ದರು. ಅನು(ಹೆಸರು ಬದಲಿಸಲಾಗಿದೆ) ಅವರ ತಾಯಿ ಚೆನ್ನೈನ ಕೋಲಪಾಕ್ಕಂನಲ್ಲಿ ಮನೆ ಕೆಲಸ ಮಾಡುತ್ತಿದ್ದಾರೆ. ಹಣಕಾಸಿನ ಸಮಸ್ಯೆಯಿಂದ ಆಂಟೊ ಅವರ ನಿವಾಸದಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡಲು ತಾಯಿ ಅನು ಅವರನ್ನು ಕಳುಹಿಸಿದ್ದರು. ಕಳೆದ ಎಂಟು ತಿಂಗಳಲ್ಲಿ ಮೆರ್ಲಿನಾ ಆಕೆಯನ್ನು ಥಳಿಸಿದ್ದಾಳೆ, ಸಿಗರೇಟ್‌ನಿಂದ ಚರ್ಮವನ್ನು ಸುಟ್ಟುಹಾಕಿದ್ದಾಳೆ ಮತ್ತು ಅವಳ ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದಾಳೆ. ಇದಲ್ಲದೆ ದೌರ್ಜನ್ಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು.

ಉಲುಂದೂರುಪೇಟೆ ಆಸ್ಪತ್ರೆಯ ದಾಖಲಾತಿಯಲ್ಲಿ ಅನು ಅವರ ಮೇಲೆ ಕೋಲು ಮತ್ತು ಹೇರ್ ಸ್ಟ್ರೈಟ್ನರ್ ಬಳಸಿ ಹಲ್ಲೆ ನಡೆಸಲಾಗಿದೆ ಎಂದು ದಾಖಲಿಸಲಾಗಿತ್ತು. ಆಸ್ಪತ್ರೆಯ ಅಧಿಕಾರಿಗಳಿಗೆ ನೀಡಿದ ಹೇಳಿಕೆಯ ಪ್ರಕಾರ, ಆಕೆಯ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಆಕೆಯ ಮೇಲೆ ಒದೆಯಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಹಣೆ, ಗಲ್ಲದ ಮೇಲೆ ಗಾಯ ಮತ್ತು ಎರಡೂ ಮುಂಗೈಗಳಲ್ಲಿ ಸುಟ್ಟ ಗಾಯಗಳಿರುವುದು ಕಂಡುಬಂದಿತ್ತು. ಆಕೆಯ ದೇಹದಲ್ಲಿ ಹಲವು ಗಾಯಗಳು ಕಂಡು ಬಂದಿರುವುದರಿಂದ ಆಸ್ಪತ್ರೆಯ ಆಡಳಿತವು ಪೊಲೀಸರಿಗೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಘಟನೆಗಳು ನಡೆದಿದ್ದರಿಂದ ಉಲುಂದೂರ್‌ಪೇಟೆ ಪೊಲೀಸರು ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಅವರು ನನ್ನ ಫೋನ್‌ನ್ನು ಕಸಿದುಕೊಂಡರು, ಆದ್ದರಿಂದ ನಾನು ನನ್ನ ತಾಯಿಯೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ. ಅವರು ಮೇ 2023ರಲ್ಲಿ ಆರು ತಿಂಗಳ ಕಾಲ ಇಲ್ಲಿ ಕೆಲಸ ಮಾಡಲು ನನ್ನ ತಾಯಿಯ ಸಮ್ಮುಖದಲ್ಲಿ ಬಾಂಡ್ ಪೇಪರ್‌ಗೆ ಸಹಿ ಹಾಕುವಂತೆ ಒತ್ತಾಯಿಸಿದರು. ಆ ಸಮಯದಲ್ಲಿ ಮೆರ್ಲಿನಾ ನನ್ನ ಫೋನ್‌ನ್ನು ನನ್ನ ತಾಯಿಗೆ ಹಸ್ತಾಂತರಿಸಿದ್ದಾರೆ. 12ನೇ ತರಗತಿ ಪರೀಕ್ಷೆಯಲ್ಲಿ 433 ಅಂಕ ಪಡೆದಿರುವ ನಾನು ಮೆಡಿಕಲ್ ಓದಲು ಬಯಸಿದ್ದೆ. NEET ಕೋಚಿಂಗ್‌ಗಾಗಿ ಹಣಕ್ಕೆ ಕೆಲಸಕ್ಕೆ ಸೇರ್ಪಡೆಯಾಗಿದ್ದೆ. ನಾನು ಓದಲು ಹಣ ಸಂಪಾದಿಸಲು ಇಲ್ಲಿದ್ದೇನೆ ಎಂದು ನಾನು ಅವರಿಗೆ ಹೇಳಿದೆ ಮತ್ತು ಅವರು ನನ್ನನ್ನು ಆರ್ಥಿಕವಾಗಿ ಬೆಂಬಲಿಸುತ್ತಾರೆ ಎಂದು ಹೇಳಿದ್ದರು. ಆಗಸ್ಟ್ 2023ರಲ್ಲಿ ನಾನು ನನ್ನ ವರ್ಗಾವಣೆ ಪ್ರಮಾಣಪತ್ರವನ್ನು ಪಡೆಯಲು ಹೋಗುವಾಗ ಮೆರ್ಲಿನಾ ನನ್ನೊಂದಿಗೆ ಶಾಲೆಗೆ ಬಂದಿದ್ದರು. ಕೆಲವು ದಿನಗಳ ನಂತರ ಅವರು ನನ್ನನ್ನು ಆನ್‌ಲೈನ್ ಶಿಕ್ಷಣವನ್ನು ಪಡೆಯುವ ಸಂಸ್ಥೆಗೆ ಸೇರಿಸುವುದಾಗಿ ಹೇಳಿದ್ದರು. ಅವಳು ಕೋರ್ಸ್‌ಗೆ 2 ಲಕ್ಷ ರೂ.ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೆ ನಾನು ಆನ್‌ಲೈನ್‌ನಲ್ಲಿ ಯಾವುದೇ ತರಗತಿಗಳಿಗೆ ಹಾಜರಾಗಲಿಲ್ಲ.  ಮೆರ್ಲಿನಾಗೆ ಮನೆಗೆ ಮರಳಲು ಅವಕಾಶ ನೀಡುವಂತೆ ಹಲವಾರು ಬಾರಿ ವಿನಂತಿಸಿದ್ದೆ. ಅವರು 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳನ್ನು ವರ್ಗಾವಣೆ ಪ್ರಮಾಣಪತ್ರದೊಂದಿಗೆ ಇಟ್ಟುಕೊಂಡಿದ್ದರು. ಅವಳು  ಕೆಲಸಕ್ಕೆ ಸಂಬಳ ನೀಡಲಿಲ್ಲ. ಒಪ್ಪಂದದಂತೆ ತಿಂಗಳಿಗೆ 16,000 ರೂ.ಗಳನ್ನು ನೀಡಬೇಕಿತ್ತು. ಆದರೆ ಕೇವಲ 5,000 ರೂ.ನೀಡಲಾಗಿದೆ ಎಂದು ಸಂತ್ರಸ್ತ ಬಾಲಕಿ ಆರೋಪಿಸಿದ್ದಳು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 294(ಬಿ), 324, 325, 506(1) ಮತ್ತು ಎಸ್ಸಿ- ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನು ಓದಿ: ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ಫೆ.8ರಂದು ಅರ್ಜಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...