Homeಮುಖಪುಟಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ...

ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

- Advertisement -
- Advertisement -

ತಮಿಳುನಾಡು ಸರ್ಕಾರ ಮತ್ತು ಡಿಎಂಕೆ ಸಂಸದರನ್ನು ‘ಅನಾಗರಿಕರು’ ಎಂದು ಕರೆದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ದ ಸಂಸದೆ ಕನಿಮೋಳಿ ಲೋಕಸಭೆಯಲ್ಲಿ ಮಂಗಳವಾರ (ಮಾ.11) ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿದರು.

“ತಮಿಳುನಾಡು ಮತ್ತು ಅಲ್ಲಿನ ಜನರನ್ನು ‘ಅನಾಗರಿಕರು’ ಎಂದು ಕರೆದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅವಹೇಳನ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಸಚಿವ ಪ್ರಧಾನ್ ತಕ್ಷಣ ಕ್ಷಮೆಯಾಚಿಸಬೇಕೆಂದು ಡಿಎಂಕೆ ಮತ್ತು 8 ಕೋಟಿ ತಮಿಳರ ಪರವಾಗಿ ನಾನು ಒತ್ತಾಯಿಸುತ್ತೇನೆ” ಎಂದು ಕನಿಮೋಳಿ ಹೇಳಿದರು.

“ಪಿಎಂಶ್ರೀ ಯೋಜನೆ ಸಂಬಂಧ ಒಪ್ಪಂದಕ್ಕೆ ತಮಿಳುನಾಡು ಸರ್ಕಾರ ಆರಂಭದಲ್ಲಿ ಸಹಿ ಹಾಕಲು ಒಪ್ಪಿಕೊಂಡಿತ್ತು. ನಂತರ ನಿಲುವು ಬದಲಿಸಿದೆ ಎಂದು ಸಚಿವ ಪ್ರಧಾನ್ ಸುಳ್ಳು ಹೇಳಿದ್ದಾರೆ. ಸಚಿವರು ತಮ್ಮ ಮತ್ತು ತಮಿಳುನಾಡು ಸಂಸದರ ನಡುವಿನ ಸಭೆಯನ್ನು ತಪ್ಪಾಗಿ ನಿರೂಪಿಸಿದ್ದಾರೆ” ಎಂದು ಕನಿಮೋಳಿ ಕಿಡಿಕಾರಿದರು.

ಕನಿಮೋಳಿ ಸಲ್ಲಿಸಿರುವ ಹಕ್ಕುಚ್ಯುತಿ ನೋಟಿಸ್ ಅನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪರಿಶೀಲಿಸಲಿದ್ದಾರೆ.

ಸೋಮವಾರ (ಮಾ.10) ಲೋಕಸಭೆಯಲ್ಲಿ ಮಾತನಾಡಿದ ಸಚಿವ ಪ್ರಧಾನ್ “ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳು ನಿರ್ವಹಿಸುವ ಶಾಲೆಗಳನ್ನು ಬಲಪಡಿಸುವ ಕೇಂದ್ರ ಪ್ರಾಯೋಜಿತ ಯೋಜನೆಯಾದ ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂಶ್ರೀ) ಅನುಷ್ಠಾನಗೊಳಿಸುವ ಸಂಬಂಧ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ತನ್ನ ನಿಲುವನ್ನು ಬದಲಾಯಿಸಿದೆ. ಈ ಮೂಲಕ ಅಪ್ರಾಮಾಣಿಕರಾದ ಅವರು ತಮಿಳುನಾಡಿನ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ರಾಜಕೀಯ ಮಾಡುತ್ತಿದ್ದಾರೆ” ಎಂದು ಹೇಳಿದ್ದರು.

ಇದಕ್ಕೆ ಡಿಎಂಕೆ ಸಂಸದರು ತೀವ್ರ ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿದ ಹಿನ್ನೆಲೆ, ಸ್ಪೀಕರ್ ಸದನವನ್ನು 30 ನಿಮಿಷಗಳ ಕಾಲ ಮುಂದೂಡಿದ್ದರು.

ಡಿಎಂಕೆ ಸಂಸದರ ಪ್ರತಿಭಟನೆಯ ನಡುವೆ ಮಾತು ಮುಂದುವರಿಸಿದ್ದ ಪ್ರಧಾನ್, “ತ್ರಿಭಾಷಾ ನೀತಿ, ಎನ್‌ಇಪಿ, ಪಿಎಂಶ್ರೀ ಯೋಜನೆ ಹೀಗೆ ಎಲ್ಲದಕ್ಕೂ ಡಿಎಂಕೆ ಸಂಸದರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಮೂಲಕ ಅವರು ರಾಜಕೀಯ ಮಾಡುತ್ತಿದ್ದಾರೆ. ಅವರು ‘ಪ್ರಜಾಪ್ರಭುತ್ವದ ವಿರೋಧಿಗಳು, ಅನಾಗರಿಕರು’ ಎಂದಿದ್ದರು.

ಸಂಸದೆ ಕನಿಮೋಳಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ ಬಳಿಕ ಪ್ರಧಾನ್ ತಮ್ಮ ಹೇಳಿಕೆ ಹಿಂಪಡೆಯುವುದಾಗಿ ಹೇಳಿದ್ದರು.

ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ಖಂಡಿಸಿ, ಎನ್‌ಇಪಿ ಮತ್ತು ತ್ರಿಭಾಷಾ ನೀತಿ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಡಿಎಂಕೆ ಸಂಸದರು ಇಂದು (ಮಾ.11) ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಿದರು.

ಡಿಎಂಕೆಯ ಬಹುತೇಕ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು, ಕೈಯಲ್ಲಿ ಭಿತ್ತಿಪತ್ರ ಹಿಡಿದು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

‘ರೈಲ್ ತಡೆ’ ಪ್ರತಿಭಟನೆ: ಬರ್ಗಢದಲ್ಲಿ 43 ರೈತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....