Homeಮುಖಪುಟಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ...

ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

- Advertisement -
- Advertisement -

ತಮಿಳುನಾಡು ಸರ್ಕಾರ ಮತ್ತು ಡಿಎಂಕೆ ಸಂಸದರನ್ನು ‘ಅನಾಗರಿಕರು’ ಎಂದು ಕರೆದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ದ ಸಂಸದೆ ಕನಿಮೋಳಿ ಲೋಕಸಭೆಯಲ್ಲಿ ಮಂಗಳವಾರ (ಮಾ.11) ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿದರು.

“ತಮಿಳುನಾಡು ಮತ್ತು ಅಲ್ಲಿನ ಜನರನ್ನು ‘ಅನಾಗರಿಕರು’ ಎಂದು ಕರೆದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅವಹೇಳನ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಸಚಿವ ಪ್ರಧಾನ್ ತಕ್ಷಣ ಕ್ಷಮೆಯಾಚಿಸಬೇಕೆಂದು ಡಿಎಂಕೆ ಮತ್ತು 8 ಕೋಟಿ ತಮಿಳರ ಪರವಾಗಿ ನಾನು ಒತ್ತಾಯಿಸುತ್ತೇನೆ” ಎಂದು ಕನಿಮೋಳಿ ಹೇಳಿದರು.

“ಪಿಎಂಶ್ರೀ ಯೋಜನೆ ಸಂಬಂಧ ಒಪ್ಪಂದಕ್ಕೆ ತಮಿಳುನಾಡು ಸರ್ಕಾರ ಆರಂಭದಲ್ಲಿ ಸಹಿ ಹಾಕಲು ಒಪ್ಪಿಕೊಂಡಿತ್ತು. ನಂತರ ನಿಲುವು ಬದಲಿಸಿದೆ ಎಂದು ಸಚಿವ ಪ್ರಧಾನ್ ಸುಳ್ಳು ಹೇಳಿದ್ದಾರೆ. ಸಚಿವರು ತಮ್ಮ ಮತ್ತು ತಮಿಳುನಾಡು ಸಂಸದರ ನಡುವಿನ ಸಭೆಯನ್ನು ತಪ್ಪಾಗಿ ನಿರೂಪಿಸಿದ್ದಾರೆ” ಎಂದು ಕನಿಮೋಳಿ ಕಿಡಿಕಾರಿದರು.

ಕನಿಮೋಳಿ ಸಲ್ಲಿಸಿರುವ ಹಕ್ಕುಚ್ಯುತಿ ನೋಟಿಸ್ ಅನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪರಿಶೀಲಿಸಲಿದ್ದಾರೆ.

ಸೋಮವಾರ (ಮಾ.10) ಲೋಕಸಭೆಯಲ್ಲಿ ಮಾತನಾಡಿದ ಸಚಿವ ಪ್ರಧಾನ್ “ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳು ನಿರ್ವಹಿಸುವ ಶಾಲೆಗಳನ್ನು ಬಲಪಡಿಸುವ ಕೇಂದ್ರ ಪ್ರಾಯೋಜಿತ ಯೋಜನೆಯಾದ ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂಶ್ರೀ) ಅನುಷ್ಠಾನಗೊಳಿಸುವ ಸಂಬಂಧ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ತನ್ನ ನಿಲುವನ್ನು ಬದಲಾಯಿಸಿದೆ. ಈ ಮೂಲಕ ಅಪ್ರಾಮಾಣಿಕರಾದ ಅವರು ತಮಿಳುನಾಡಿನ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ರಾಜಕೀಯ ಮಾಡುತ್ತಿದ್ದಾರೆ” ಎಂದು ಹೇಳಿದ್ದರು.

ಇದಕ್ಕೆ ಡಿಎಂಕೆ ಸಂಸದರು ತೀವ್ರ ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿದ ಹಿನ್ನೆಲೆ, ಸ್ಪೀಕರ್ ಸದನವನ್ನು 30 ನಿಮಿಷಗಳ ಕಾಲ ಮುಂದೂಡಿದ್ದರು.

ಡಿಎಂಕೆ ಸಂಸದರ ಪ್ರತಿಭಟನೆಯ ನಡುವೆ ಮಾತು ಮುಂದುವರಿಸಿದ್ದ ಪ್ರಧಾನ್, “ತ್ರಿಭಾಷಾ ನೀತಿ, ಎನ್‌ಇಪಿ, ಪಿಎಂಶ್ರೀ ಯೋಜನೆ ಹೀಗೆ ಎಲ್ಲದಕ್ಕೂ ಡಿಎಂಕೆ ಸಂಸದರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಮೂಲಕ ಅವರು ರಾಜಕೀಯ ಮಾಡುತ್ತಿದ್ದಾರೆ. ಅವರು ‘ಪ್ರಜಾಪ್ರಭುತ್ವದ ವಿರೋಧಿಗಳು, ಅನಾಗರಿಕರು’ ಎಂದಿದ್ದರು.

ಸಂಸದೆ ಕನಿಮೋಳಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ ಬಳಿಕ ಪ್ರಧಾನ್ ತಮ್ಮ ಹೇಳಿಕೆ ಹಿಂಪಡೆಯುವುದಾಗಿ ಹೇಳಿದ್ದರು.

ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ಖಂಡಿಸಿ, ಎನ್‌ಇಪಿ ಮತ್ತು ತ್ರಿಭಾಷಾ ನೀತಿ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಡಿಎಂಕೆ ಸಂಸದರು ಇಂದು (ಮಾ.11) ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಿದರು.

ಡಿಎಂಕೆಯ ಬಹುತೇಕ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು, ಕೈಯಲ್ಲಿ ಭಿತ್ತಿಪತ್ರ ಹಿಡಿದು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

‘ರೈಲ್ ತಡೆ’ ಪ್ರತಿಭಟನೆ: ಬರ್ಗಢದಲ್ಲಿ 43 ರೈತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...