Homeಮುಖಪುಟಸಂಸತ್‌ನಲ್ಲಿ ಕೋಲಾಹಲಕ್ಕೆ ಕಾರಣವಾದ ಸೆಂಥಿಲ್ ಕುಮಾರ್ 'ಗೋಮೂತ್ರ' ಹೇಳಿಕೆ

ಸಂಸತ್‌ನಲ್ಲಿ ಕೋಲಾಹಲಕ್ಕೆ ಕಾರಣವಾದ ಸೆಂಥಿಲ್ ಕುಮಾರ್ ‘ಗೋಮೂತ್ರ’ ಹೇಳಿಕೆ

- Advertisement -
- Advertisement -

ಸಂಸತ್‌ನ ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಇಂದು ಡಿಎಂಕೆ ಸಂಸದ ಡಾ.ಡಿವಿಎನ್‌ ಸೆಂಥಿಲ್ ಕುಮಾರ್ ಹೇಳಿಕೆ ವಿಚಾರ ಗದ್ದಲಕ್ಕೆ ಕಾರಣವಾಯಿತು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮುಂದೂಡಿಕೆ ಮಾಡಿದರು.

ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಡಿಎಂಕೆ ಸಂಸದ ಟಿ.ಆರ್ ಬಾಲು ಅವರು ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಕುರಿತು ಮಾತು ಆರಂಭಿಸಿದರು. ಈ ವೇಳೆ ಬಾಲು ಭಾಷಣಕ್ಕೆ ಅಡ್ಡಿಪಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮಂಗಳವಾರ ಸಂಸದ ಸೆಂಥಿಲ್‌ಕುಮಾರ್ ಮಾಡಿದ ಟೀಕೆಗೆ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.

ಜೋಶಿ ಜೊತೆ ಧ್ವನಿಗೂಡಿಸಿದ ಕೇಂದ್ರ ಆಹಾರ ಮತ್ತು ಗ್ರಾಹಕ ಇಲಾಖೆ ಸಚಿವ ಪಿಯೂಷ್ ಗೋಯಲ್ ಮತ್ತು ಇತರ ಬಿಜೆಪಿ ಸಂಸದರು, ಸೆಂಥಿಲ್ ಕುಮಾರ್ ಕ್ಷಮೆಯಾಚಿಸಲೇಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ಸಂಸದರ ನಡುವೆ ವಾಗ್ವಾದ ನಡೆಯಿತು.

“ನೀವು ಹಿರಿಯ ಮಂತ್ರಿಯಾಗಿದ್ದೀರಿ, ಸಂಸತ್ತಿನಲ್ಲಿ ವಿವಾದ ಸೃಷ್ಟಿಸಬಾರದು. ನೀವು ತೊಂದರೆ ಕೊಡುವವರಾಗಬಾರದು, ಟ್ರಬಲ್‌ಶೂಟರ್ ಆಗಿರಬೇಕು” ಎಂದು ಸಚಿವ ಪಿಯೂಷ್ ಗೋಯಲ್‌ಗೆ ಡಿಎಂಕೆ ಸಂಸದ ಬಾಲು ಹೇಳಿದರು. ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಸ್ಪೀಕರ್ ಪೀಠದತ್ತ ತೆರಳಿದರು.

“ಪ್ರತಿಪಕ್ಷಗಳು ದಕ್ಷಿಣ ಮತ್ತು ಉತ್ತರ ಭಾರತದ ನಡುವೆ ವಿಭಜನೆ ಮಾಡಲು ಪ್ರಯತ್ನಿಸುತ್ತಿವೆ” ಎಂದು ಸಚಿವರಾದ ಗೋಯಲ್ ಮತ್ತು ಜೋಶಿ ಇಬ್ಬರೂ ಆರೋಪಿಸಿದರು. ಈ ಆರೋಪವನ್ನು ತೀವ್ರವಾಗಿ ವಿರೋಧಿಸಿದ ಪ್ರತಿಪಕ್ಷ ಸದಸ್ಯರು ಪ್ರತಿಭಟಿಸಿದರು. ಗದ್ದಲ ಹೆಚ್ಚಾದ ಕಾರಣ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು.

ಡಿಎಂಕೆಯ ಧರ್ಮಪುರಿ ಸಂಸದ ಸೆಂಥಿಲ್‌ಕುಮಾರ್ ಹಿಂದಿ ಭಾಷಿಕ ರಾಜ್ಯಗಳ ಕುರಿತು ಮಂಗಳವಾರ ಲೋಕಸಭೆಯಲ್ಲಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ನಂತರ ಸಂಸತ್ತಿನ ಕಡತಗಳಿಂದ ಅವರ ಹೇಳಿಕೆಯನ್ನು ತೆಗೆದು ಹಾಕಲಾಗಿದೆ.

ಸೆಂಥಿಲ್ ಕುಮಾರ್ ಹೇಳಿದ್ದೇನು?

ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ, 2023 ಕುರಿತು ಮಂಗಳವಾರ ಲೋಕಸಭೆಯಲ್ಲಿ ಮಾತನಾಡಿದ ಸೆಂಥಿಲ್ ಕುಮಾರ್, ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪ್ರಸ್ತಾಪಿಸಿ “ಗೋಮೂತ್ರ ರಾಜ್ಯಗಳಲ್ಲಿ ಮಾತ್ರ ಬಿಜೆಪಿ ಗೆದ್ದಿದೆ’ ಎಂದಿದ್ದರು.

ಈ ಹೇಳಿಕೆಗೆ ಬಿಜೆಪಿ ಮತ್ತು ಹಿಂದುತ್ವ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಬಳಿಕ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸೆಂಥಿಲ್ ಕುಮಾರ್ ಕ್ಷಮೆಯಾಚಿಸಿದ್ದರು. ಇಂದು ಸಂಸತ್‌ನಲ್ಲಿ ಕೂಡ ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಹಿಂಪಡೆದಿದ್ದಾರೆ.

ಇದನ್ನೂ ಓದಿ : ಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಹೆಡಗೇವಾರ್ ಮ್ಯೂಸಿಯಂ ಪ್ರವೇಶಕ್ಕೆ ನಿರಾಕರಣೆ: ಗೂಳಿಹಟ್ಟಿ ಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...