Homeಮುಖಪುಟಎನ್ಇಪಿ-ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಿದ ಡಿಎಂಕೆ ಸಂಸದರು; ಲೋಕಸಭೆಯಲ್ಲಿ ಮಾತಿನ ಚಕಮಕಿ

ಎನ್ಇಪಿ-ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಿದ ಡಿಎಂಕೆ ಸಂಸದರು; ಲೋಕಸಭೆಯಲ್ಲಿ ಮಾತಿನ ಚಕಮಕಿ

- Advertisement -
- Advertisement -

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದರು ಸೋಮವಾರ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಮತ್ತು ಹಿಂದಿ ಹೇರಿಕೆಯನ್ನು ವಿರೊಧಿಸಿ ಲೋಕಸಭೆಯಲ್ಲಿ ಧ್ವನಿ ಎತ್ತಿದ್ದರು. ಇದರಿಂದ, ಬಜೆಟ್ ಅಧಿವೇಶನದ ಎರಡನೇ ಹಂತ ಪ್ರಾರಂಭವಾದ ನಂತರ ಮಧ್ಯಾಹ್ನ 12 ಗಂಟೆಯವರೆಗೆ ಸದನವನ್ನು ಮುಂದೂಡಬೇಕಾಯಿತು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆ ಸಂಸದರು ನ್ಯಾಯಕ್ಕಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಪ್ರಧಾನ್ ತಮ್ಮ ಕೆಲವು ಹೇಳಿಕೆಗಳನ್ನು ಹಿಂತೆಗೆದುಕೊಂಡರು. ಆದರೆ, ಡಿಎಂಕೆ ಸಂಸದೆ ಕನಿಮೋಳಿ ಅವರು ಪದಗಳ ಆಯ್ಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಅವುಗಳನ್ನು ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.

ಡಿಎಂಕೆ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ, ಈ ವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಪ್ರಧಾನ್ ಆರೋಪಿಸಿದರು. ತ್ರಿಭಾಷಾ ನೀತಿಯ ಕುರಿತು ತಮಿಳುನಾಡು ಸರ್ಕಾರದ ನಿಲುವನ್ನು ಅವರು ಟೀಕಿಸಿದರು. ಎನ್ಇಪಿಗೆ ಹೊಂದಿಕೆಯಾಗುವ ಕೇಂದ್ರ ಬೆಂಬಲಿತ ಯೋಜನೆಗಳಿಗೆ ಡಿಎಂಕೆ ವಿರೋಧವು ತಮಿಳುನಾಡು ವಿದ್ಯಾರ್ಥಿಗಳಿಗೆ ಹಾನಿಕಾರಕವಾಗಿದೆ ಎಂದು ಅವರು ಹೇಳಿದ್ದಾರೆ.

ಸ್ಪೀಕರ್ ಓಂ ಬಿರ್ಲಾ ಮತ್ತು ಡಿಎಂಕೆ ಸಂಸದ ದಯಾನಿಧಿ ಮಾರನ್ ನಡುವೆ ತೀವ್ರ ವಾಗ್ವಾದ ನಡೆಯಿತು. ಮಾರನ್ ಅವರಿಗೆ ಬಿರ್ಲಾ ಅವರು ಹೇಳುತ್ತಿರುವುದು ದಾಖಲೆಯಲ್ಲಿಲ್ಲ ಎಂದು ಹೇಳಿದ್ದರು. “ನಿಮ್ಮ ಸ್ಥಾನಕ್ಕೆ ಹೋಗಿ ಅದನ್ನು ದಾಖಲೆಯಲ್ಲಿ ಹೇಳಿ, ನಾನು ಈಗಲೇ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ” ಎಂದು ಎಚ್ಚರಿಕೆ ನೀಡಿದರು.

ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದರು, ಮಾರನ್ ನಮಗೆಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. ಅಧ್ಯಕ್ಷ ಸ್ಥಾನಕ್ಕೆ ಅಗೌರವ ತೋರಿದ ಡಿಎಂಕೆ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ನಿರ್ಣಯ ಮಂಡಿಸುವ ಮೊದಲು ಸದನದ ಅಭಿಪ್ರಾಯವನ್ನು ನಿರ್ಣಯಿಸುವುದಾಗಿ ಹೇಳಿದರು, ಮಾರನ್ ಅವರ ನಡವಳಿಕೆಯನ್ನು ಟೀಕಿಸಿದರು.

ತ್ರಿಭಾಷಾ ನೀತಿ ಸ್ವೀಕಾರಾರ್ಹವಲ್ಲದ ಕಾರಣ ಎನ್‌ಇಪಿಯೊಂದಿಗೆ ನಮಗೆ ಸಮಸ್ಯೆಗಳಿವೆ ಎಂದು ಕನಿಮೋಳಿ ಹೇಳಿದರು. “ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಎನ್‌ಇಪಿಯೊಂದಿಗಿನ ಸಮಸ್ಯೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಪ್ರಧಾನ್ ಅವರಿಗೆ ಪತ್ರ ಬರೆದು, ಹಣ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ” ಎಂದರು.

ತಮಿಳುನಾಡಿಗೆ ಶಾಲಾ ಶಿಕ್ಷಣಕ್ಕಾಗಿ ಸಮಗ್ರ ಶಿಕ್ಷಾ ಅಭಿಯಾನದ ಅಡಿಯಲ್ಲಿ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು, ಎನ್‌ಇಪಿಯನ್ನು ಸಂಪೂರ್ಣವಾಗಿ ಅನುಮೋದಿಸಲು ರಾಜ್ಯ ನಿರಾಕರಿಸಿದ್ದಕ್ಕಾಗಿ ಹಿಂದಿ ಹೇರಿಕೆ ಬಗ್ಗೆ ವಿವಾದಕ್ಕೆ ಕಾರಣವಾಯಿತು.

ಹಣ ನೀಡದೇ ಇರುವುದಕ್ಕೆ ಕೇಂದ್ರ ನೀಡಿರುವ ಕಾರಣವನ್ನು ಸ್ಟಾಲಿನ್ ಖಂಡಿಸಿ, ತಮಿಳುನಾಡಿನ ಮೇಲೆ ಹಿಂದಿ ಹೇರಿಕೆ ಮಾಡುವ ಪ್ರಯತ್ನ ಎಂದು ಕರೆದರು.

ಭಾನುವಾರ ಚೆನ್ನೈನಲ್ಲಿ ನಡೆದ ಡಿಎಂಕೆ ಸಂಸದರ ಸಭೆಯ ಅಧ್ಯಕ್ಷತೆಯನ್ನು ಸ್ಟಾಲಿನ್ ವಹಿಸಿದ್ದರು. ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡಣೆಯು ದಕ್ಷಿಣ ಮತ್ತು ಪೂರ್ವ ರಾಜ್ಯಗಳಾದ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಜನಸಂಖ್ಯೆಯ ಆಧಾರದ ಮೇಲೆ ಲೋಕಸಭೆಗೆ ಕಳುಹಿಸುವ ಸಂಸದರ ಸಂಖ್ಯೆಯನ್ನು ಮರು ವ್ಯಾಖ್ಯಾನಿಸಲು 2026 ಕ್ಕೆ ಡಿಎಂಕೆ ಸಂಸದರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಈ ಪ್ರಕ್ರಿಯೆಯಿಂದ ಲೋಕಸಭೆಯ ಬಲ 668 ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ. ಉತ್ತರ ಪ್ರದೇಶದ ಸದಸ್ಯರ ಸಂಖ್ಯೆ 80 ರಿಂದ 143 ಕ್ಕೆ ಏರಿಕೆಯಾಗುವ ನಿರೀಕ್ಷೆಯಿತ್ತು. ತಮಿಳುನಾಡಿನ ಸದಸ್ಯರ ಸಂಖ್ಯೆ 39 ರಿಂದ ಕೇವಲ 49 ಕ್ಕೆ ಏರಿಕೆಯಾಗಬಹುದು. ಆದರೆ, ದಕ್ಷಿಣ ರಾಜ್ಯಗಳು ನ್ಯಾಯಯುತವಾದ ಸ್ಥಾನಗಳನ್ನು ಪಡೆಯುತ್ತವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಎನ್‌ಇಪಿ-ಕ್ಷೇತ್ರ ಪುನರ್‌ವಿಂಗಡಣೆ ನಿರ್ಣಯದ ಕುರಿತು ಸಭೆ ನಡೆಸಿದ ಡಿಎಂಕೆ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...