HomeಮುಖಪುಟINDIA ಮೈತ್ರಿಕೂಟಕ್ಕೆ AIADMK ಸೇರ್ಪಡೆ ವಿಚಾರ: ಡಿಎಂಕೆ ಜೊತೆ ಚರ್ಚಿಸಿದ ಬಳಿಕ ನಿರ್ಧಾರ ಎಂದ ಶರದ್...

INDIA ಮೈತ್ರಿಕೂಟಕ್ಕೆ AIADMK ಸೇರ್ಪಡೆ ವಿಚಾರ: ಡಿಎಂಕೆ ಜೊತೆ ಚರ್ಚಿಸಿದ ಬಳಿಕ ನಿರ್ಧಾರ ಎಂದ ಶರದ್ ಪವಾರ್

- Advertisement -
- Advertisement -

ಎಐಎಡಿಎಂಕೆಯನ್ನು INDIA ಮೈತ್ರಿಕೂಟದ ಜೊತೆ ಸೇರಿಸಿಕೊಳ್ಳುವ ನಿರ್ಧಾರದ ಬಗ್ಗೆ ಡಿಎಂಕೆ ಅಥವಾ ಅದರ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರನ್ನು ಸಂಪರ್ಕಿಸಲಾಗುವುದು ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ.

ಸೋಮವಾರ ಎಐಎಡಿಎಂಕೆ ಪಕ್ಷವು ಬಿಜೆಪಿಯೊಂದಿಗಿನ ತನ್ನ ನಾಲ್ಕು ವರ್ಷಗಳ ಸಂಬಂಧವನ್ನು ಕೊನೆಗೊಳಿಸಿರುವುದಾಗಿ ಅಧಿಕೃತವಾಗಿ ಘೋಷಿಸಿತು. ಇದರೊಂದಿಗೆ ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದಿದೆ. 2024ರ ಲೋಕಸಭೆ ಚುನಾವಣೆಗೆ ಪ್ರತ್ಯೇಕ ರಂಗವನ್ನು ಮುನ್ನಡೆಸುವುದಾಗಿ ಹೇಳಿದೆ.

ಎಐಎಡಿಎಂಕೆಯನ್ನು ಇಂಡಿಯಾ ಬ್ಲಾಕ್ ಅಡಿಯಲ್ಲಿ ತರಲು ಪ್ರಯತ್ನಿಸಲಾಗುತ್ತದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪವಾರ್, ”ಡಿಎಂಕೆಯು INDIA ಮೈತ್ರಿಕೂಟದ ಭಾಗವಾಗಿದೆ. ಹಾಗಾಗಿ ಡಿಎಂಕೆ ಅಥವಾ ಸ್ಟಾಲಿನ್ ಅವರನ್ನು ಸಂಪರ್ಕಿಸದೆ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

INDIA ಮೈತ್ರಿಯು 28 ವಿರೋಧ ಪಕ್ಷಗಳ ಒಕ್ಕೂಟವಾಗಿದ್ದು, 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDAಯನ್ನು ಎದುರಿಸುವ ಗುರಿಯನ್ನು ಹೊಂದಿದೆ.

ಎನ್‌ಡಿಎ ಮೈತ್ರಿಕೂಟದೊಂದಿಗೆ ಎಐಎಡಿಎಂಕೆ ಮೈತ್ರಿ ಅಂತ್ಯ

2024ರ ಸಾರ್ವತ್ರಿಕ ಚುನಾವಣೆಗು ಮುನ್ನವೇ ತಮಿಳುನಾಡಿನ ಎಐಎಡಿಎಂಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಜೊತೆಗಿನ ಮೈತ್ರಿಯನ್ನು ಸೋಮವಾರ ಅಧಿಕೃತವಾಗಿ ಮುರಿದುಕೊಂಡಿದೆ.

ಈ ಬಗ್ಗೆ ಎಐಎಡಿಎಂಕೆ ಉಪ ಸಂಯೋಜಕ ಕೆ.ಪಿ. ಮುನುಸಾಮಿ ಅವರು ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾತನಾಡಿದ್ದು, ”ಇಂದಿನಿಂದ ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದೊಂದಿಗಿನ ಎಲ್ಲಾ ಸಂಬಂಧಗಳನ್ನು ಎಐಎಡಿಎಂಕೆ ಮುರಿದುಕೊಳ್ಳುತ್ತಿದೆ” ಎಂದು ತಿಳಿಸಿದ್ದಾರೆ.

”ಬಿಜೆಪಿಯ ರಾಜ್ಯ ನಾಯಕತ್ವವು ನಮ್ಮ ಮಾಜಿ ನಾಯಕರು, ನಮ್ಮ ಕಾರ್ಯಕರ್ತರು ಮತ್ತು ನಮ್ಮ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಬಗ್ಗೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅನಗತ್ಯ ಟೀಕೆಗಳನ್ನು ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

”ಈ ಕುರಿತು ನಡೆದ ಸಭೆಯಲ್ಲಿ ಪಕ್ಷದ ಶಾಸಕರು ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿದ್ದಾರೆ. ಪಕ್ಷವು ಹೊಸ ಮೈತ್ರಿಕೂಟವನ್ನು ರಚಿಸುತ್ತದೆ ಮತ್ತು ಮುಂಬರುವ ಸಂಸತ್ತಿನ ಚುನಾವಣೆಯನ್ನು ಸ್ವತಃ ಎದುರಿಸಲಿದೆ” ಎಂದು ಅವರು ಘೋಷಿಸಿದ್ದಾರೆ.

ಇದನ್ನೂ ಓದಿ: NDAದಿಂದ ಹೊರನಡೆದ AIADMK, ಬಿಜೆಪಿಯೊಂದಿಗೆ ಉಳಿದವರು ಅವಕಾಶವಾದಿಗಳು ಮಾತ್ರ: ಕಪಿಲ್ ಸಿಬಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...