Homeಮುಖಪುಟದೇಶದ್ರೋಹಿಗಳ ತಡೆಗಾಗಿ ‘ದ್ರಾವಿಡ ಮಾದರಿ ತರಬೇತಿ ಕೋರ್ಸ್’ ನಡೆಸಲು ಡಿಎಂಕೆ ನಿರ್ಧಾರ

ದೇಶದ್ರೋಹಿಗಳ ತಡೆಗಾಗಿ ‘ದ್ರಾವಿಡ ಮಾದರಿ ತರಬೇತಿ ಕೋರ್ಸ್’ ನಡೆಸಲು ಡಿಎಂಕೆ ನಿರ್ಧಾರ

- Advertisement -
- Advertisement -

ಡಿಎಂಕೆ ಪಕ್ಷದ ವರಿಷ್ಠ, ಮಾಜಿ ಮುಖ್ಯಮಂತ್ರಿ ದಿವಂಗತ ಎಂ.ಕರುಣಾನಿಧಿ ಅವರ ಜನ್ಮದಿನದ ಪೂರ್ವಭಾವಿಯಾಗಿ ಡಿಎಂಕೆ ಕರೆದಿದ್ದ ಜಿಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

“ದ್ರಾವಿಡ ಮಾದರಿಯ ತರಬೇತಿ ಕೋರ್ಸ್‌”ಗಳನ್ನು ನಡೆಸಲು, ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡಲು ಯತ್ನಿಸುತ್ತಿರುವ ದೇಶ ವಿರೋಧಿ ಮತ್ತು ಅಪಾಯಕಾರಿ ಶಕ್ತಿಗಳನ್ನು ಗುರುತಿಸಲು ಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಐಟಿ ವಿಭಾಗ, ಮಹಿಳಾ ವಿಭಾಗ, ಯುವ ವಿಭಾಗ, ವಿದ್ಯಾರ್ಥಿ ವಿಭಾಗಗಳ ಸಹಾಯದಿಂದ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಈ ತರಬೇತಿ ಶಿಬಿರಗಳನ್ನು ನಡೆಸುವುದಾಗಿ ಡಿಎಂಕೆ ಹೇಳಿದೆ. ಸರಿಯಾಗಿ ಆಯೋಜನೆ ಮಾಡಲು ಜಿಲ್ಲಾ ಘಟಕಗಳಿಗೆ ಸೂಚಿಸಲಾಗಿದೆ.

“ಪೆರಿಯಾರ್, ಅಣ್ಣಾದೊರೈ ಮತ್ತು ಕರುಣಾನಿಧಿಯವರ ಅವರ ಕಠಿಣ ಪರಿಶ್ರಮದಿಂದಾಗಿ ತಮಿಳುನಾಡು ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಮತ್ತು ಕೋಮು ಸೌಹಾರ್ದತೆ ಇದೆ. ಇದನ್ನು ಅರಗಿಸಿಕೊಳ್ಳಲಾಗದ ಶಕ್ತಿಗಳು ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿವೆ. ತಮಿಳುನಾಡನ್ನು ಉಳಿಸುವುದಕ್ಕಾಗಿ ಈ ದೇಶವಿರೋಧಿ ಶಕ್ತಿಗಳನ್ನು, ಅವರಿಗೆ ಸಹಾಯ ಮಾಡುವವರನ್ನು ಗುರುತಿಸಲು ನಿರ್ಧರಿಸಲಾಗಿದೆ” ಎಂದು ಡಿಎಂಕೆ ತಿಳಿಸಿದೆ.

ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, “ಈ ದೇಶವಿರೋಧಿ ಶಕ್ತಿಗಳಿಂದ ರಾಜ್ಯವನ್ನು ಪಾರು ಮಾಡುವ ಪ್ರಯತ್ನದಲ್ಲಿ, ನಾವು ರಾಜ್ಯದಾದ್ಯಂತ ದ್ರಾವಿಡ ಮಾದರಿಯ ತರಬೇತಿ ಶಿಬಿರಗಳನ್ನು ನಡೆಸುವ ಹೊಸ ಹೆಜ್ಜೆ ಇರಿಸುತ್ತಿರುವ ಸೈನಿಕರಾಗಿದ್ದೇವೆ. ಮುಖ್ಯಮಂತ್ರಿಯವರು ತಮ್ಮ ಕೆಲಸ ಮತ್ತು ಚಿಂತನೆಗಳನ್ನು ಮುನ್ನಡೆಸಲು ಅವರೊಂದಿಗೆ ಗುರಾಣಿಯಾಗಿ ನಿಲ್ಲುತ್ತೇವೆ” ಎಂದು ಪಕ್ಷ ನಿರ್ಧರಿಸಿದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಚೆನ್ನೈಗೆ ಭೇಟಿಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿದ್ದರು. “ಸಹಕಾರಿ ಒಕ್ಕೂಟದ ನಿಜವಾದ ಸ್ಫೂರ್ತಿ’ಯನ್ನು ಎತ್ತಿ ಹಿಡಿಯುವಂತೆ ಒತ್ತಾಯಿಸಿದ್ದರು. ಕೇಂದ್ರ ಸರ್ಕಾರವು ರಾಜ್ಯಕ್ಕೆ ಹೆಚ್ಚಿನ ಅನುದಾನ ಹಾಗೂ ಯೋಜನೆಗಳನ್ನು ನೀಡಬೇಕು. ತಮಿಳು ಭಾಷೆಗೆ ಹಿಂದಿಯಷ್ಟೇ ಆದ್ಯತೆಯನ್ನು ನೀಡಬೇಕು. ತಮಿಳುನಾಡು ರಾಜ್ಯಕ್ಕೆ ನೀಟ್‌ನಿಂದ ವಿನಾಯಿತಿ ನೀಡಬೇಕು” ಎಂದು ಒತ್ತಾಯಿಸಿದ್ದರು.

ಸ್ಟಾಲಿನ್ ತಮ್ಮ ಭಾಷಣದಲ್ಲಿ, “ತಮಿಳುನಾಡು ರಾಜ್ಯವು ಆರ್ಥಿಕತೆ ಹಾಗೂ ಇದಕ್ಕೆ ಸಂಬಂಧಿತ ಅಂಶಗಳಲ್ಲಿ ಮಾತ್ರವಲ್ಲದೆ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮಹಿಳಾ ಸಬಲೀಕರಣದಲ್ಲಿಯೂ ಮುಂದಿದೆ” ಎಂದಿದ್ದರು. “ಸಂಕ್ಷಿಪ್ತವಾಗಿ ಹೇಳುವುದಾದರೆ, ತಮಿಳುನಾಡು ಎಲ್ಲರನ್ನೂ ಒಳಗೊಂಡು ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದೆ. ಇದನ್ನೇ ನಾವು ದ್ರಾವಿಡ ಮಾದರಿ ಎಂದು ಕರೆಯುತ್ತೇವೆ” ಎಂದು ಬಣ್ಣಿಸಿದ್ದರು.

ಇದನ್ನೂ ಓದಿರಿ: ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ರಾಷ್ಟ್ರೀಯ ಆರ್ಥಿಕತೆಗೆ ತಮಿಳುನಾಡಿನ ಕೊಡುಗೆಯನ್ನು ಎತ್ತಿ ಹಿಡಿದ ಅವರು, “ಭಾರತದ ಜಿಡಿಪಿಯಲ್ಲಿ ರಾಜ್ಯದ ಪಾಲು ಶೇ.9.22 ರಷ್ಟಿದೆ. ಕೇಂದ್ರ ಸರ್ಕಾರದ ಒಟ್ಟಾರೆ ತೆರಿಗೆ ಆದಾಯದಲ್ಲಿ ತಮಿಳುನಾಡಿನ ಪಾಲು ಶೇ. 6ರಷ್ಟಿದೆ. ದೇಶದ ಅಭಿವೃದ್ಧಿ ಮತ್ತು ಆರ್ಥಿಕತೆಯಲ್ಲಿ ತಮಿಳುನಾಡಿನಂತಹ ಅಭಿವೃದ್ಧಿ ಹೊಂದಿದ ರಾಜ್ಯಗಳು ನೀಡಿದ ಕೊಡುಗೆಗೆ ನ್ಯಾಯ ಸಲ್ಲಿಸಲು ಕೇಂದ್ರ ಸರ್ಕಾರವು ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕು. ಅನುದಾನ ಹಂಚಿಕೆಯನ್ನು ಹೆಚ್ಚಿಸಬೇಕು. ಆಗ ಮಾತ್ರ ಸಹಕಾರಿ ಫೆಡರಲಿಸಂನ ನಿಜವಾದ ಮನೋಭಾವವನ್ನು ಎತ್ತಿಹಿಡಿಯಲಾಗುತ್ತದೆ” ಎಂದಿದ್ದರು.

“15 ಮೇ 2022ರ ವೇಳೆಗೆ ತಮಿಳುನಾಡಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರವು 14,006 ಕೋಟಿ ರೂ. ಆಗಿದೆ. ಇದನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ಅನೇಕ ರಾಜ್ಯಗಳ ಆದಾಯವು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದಿರುವ ಸಮಯದಲ್ಲಿ, ಜಿಎಸ್‌ಟಿ ಪರಿಹಾರದ ಅವಧಿಯನ್ನು ವಿಸ್ತರಿಸಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...