Homeಮುಖಪುಟದೇಶದ್ರೋಹಿಗಳ ತಡೆಗಾಗಿ ‘ದ್ರಾವಿಡ ಮಾದರಿ ತರಬೇತಿ ಕೋರ್ಸ್’ ನಡೆಸಲು ಡಿಎಂಕೆ ನಿರ್ಧಾರ

ದೇಶದ್ರೋಹಿಗಳ ತಡೆಗಾಗಿ ‘ದ್ರಾವಿಡ ಮಾದರಿ ತರಬೇತಿ ಕೋರ್ಸ್’ ನಡೆಸಲು ಡಿಎಂಕೆ ನಿರ್ಧಾರ

- Advertisement -
- Advertisement -

ಡಿಎಂಕೆ ಪಕ್ಷದ ವರಿಷ್ಠ, ಮಾಜಿ ಮುಖ್ಯಮಂತ್ರಿ ದಿವಂಗತ ಎಂ.ಕರುಣಾನಿಧಿ ಅವರ ಜನ್ಮದಿನದ ಪೂರ್ವಭಾವಿಯಾಗಿ ಡಿಎಂಕೆ ಕರೆದಿದ್ದ ಜಿಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

“ದ್ರಾವಿಡ ಮಾದರಿಯ ತರಬೇತಿ ಕೋರ್ಸ್‌”ಗಳನ್ನು ನಡೆಸಲು, ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡಲು ಯತ್ನಿಸುತ್ತಿರುವ ದೇಶ ವಿರೋಧಿ ಮತ್ತು ಅಪಾಯಕಾರಿ ಶಕ್ತಿಗಳನ್ನು ಗುರುತಿಸಲು ಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಐಟಿ ವಿಭಾಗ, ಮಹಿಳಾ ವಿಭಾಗ, ಯುವ ವಿಭಾಗ, ವಿದ್ಯಾರ್ಥಿ ವಿಭಾಗಗಳ ಸಹಾಯದಿಂದ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಈ ತರಬೇತಿ ಶಿಬಿರಗಳನ್ನು ನಡೆಸುವುದಾಗಿ ಡಿಎಂಕೆ ಹೇಳಿದೆ. ಸರಿಯಾಗಿ ಆಯೋಜನೆ ಮಾಡಲು ಜಿಲ್ಲಾ ಘಟಕಗಳಿಗೆ ಸೂಚಿಸಲಾಗಿದೆ.

“ಪೆರಿಯಾರ್, ಅಣ್ಣಾದೊರೈ ಮತ್ತು ಕರುಣಾನಿಧಿಯವರ ಅವರ ಕಠಿಣ ಪರಿಶ್ರಮದಿಂದಾಗಿ ತಮಿಳುನಾಡು ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಮತ್ತು ಕೋಮು ಸೌಹಾರ್ದತೆ ಇದೆ. ಇದನ್ನು ಅರಗಿಸಿಕೊಳ್ಳಲಾಗದ ಶಕ್ತಿಗಳು ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿವೆ. ತಮಿಳುನಾಡನ್ನು ಉಳಿಸುವುದಕ್ಕಾಗಿ ಈ ದೇಶವಿರೋಧಿ ಶಕ್ತಿಗಳನ್ನು, ಅವರಿಗೆ ಸಹಾಯ ಮಾಡುವವರನ್ನು ಗುರುತಿಸಲು ನಿರ್ಧರಿಸಲಾಗಿದೆ” ಎಂದು ಡಿಎಂಕೆ ತಿಳಿಸಿದೆ.

ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, “ಈ ದೇಶವಿರೋಧಿ ಶಕ್ತಿಗಳಿಂದ ರಾಜ್ಯವನ್ನು ಪಾರು ಮಾಡುವ ಪ್ರಯತ್ನದಲ್ಲಿ, ನಾವು ರಾಜ್ಯದಾದ್ಯಂತ ದ್ರಾವಿಡ ಮಾದರಿಯ ತರಬೇತಿ ಶಿಬಿರಗಳನ್ನು ನಡೆಸುವ ಹೊಸ ಹೆಜ್ಜೆ ಇರಿಸುತ್ತಿರುವ ಸೈನಿಕರಾಗಿದ್ದೇವೆ. ಮುಖ್ಯಮಂತ್ರಿಯವರು ತಮ್ಮ ಕೆಲಸ ಮತ್ತು ಚಿಂತನೆಗಳನ್ನು ಮುನ್ನಡೆಸಲು ಅವರೊಂದಿಗೆ ಗುರಾಣಿಯಾಗಿ ನಿಲ್ಲುತ್ತೇವೆ” ಎಂದು ಪಕ್ಷ ನಿರ್ಧರಿಸಿದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಚೆನ್ನೈಗೆ ಭೇಟಿಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿದ್ದರು. “ಸಹಕಾರಿ ಒಕ್ಕೂಟದ ನಿಜವಾದ ಸ್ಫೂರ್ತಿ’ಯನ್ನು ಎತ್ತಿ ಹಿಡಿಯುವಂತೆ ಒತ್ತಾಯಿಸಿದ್ದರು. ಕೇಂದ್ರ ಸರ್ಕಾರವು ರಾಜ್ಯಕ್ಕೆ ಹೆಚ್ಚಿನ ಅನುದಾನ ಹಾಗೂ ಯೋಜನೆಗಳನ್ನು ನೀಡಬೇಕು. ತಮಿಳು ಭಾಷೆಗೆ ಹಿಂದಿಯಷ್ಟೇ ಆದ್ಯತೆಯನ್ನು ನೀಡಬೇಕು. ತಮಿಳುನಾಡು ರಾಜ್ಯಕ್ಕೆ ನೀಟ್‌ನಿಂದ ವಿನಾಯಿತಿ ನೀಡಬೇಕು” ಎಂದು ಒತ್ತಾಯಿಸಿದ್ದರು.

ಸ್ಟಾಲಿನ್ ತಮ್ಮ ಭಾಷಣದಲ್ಲಿ, “ತಮಿಳುನಾಡು ರಾಜ್ಯವು ಆರ್ಥಿಕತೆ ಹಾಗೂ ಇದಕ್ಕೆ ಸಂಬಂಧಿತ ಅಂಶಗಳಲ್ಲಿ ಮಾತ್ರವಲ್ಲದೆ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮಹಿಳಾ ಸಬಲೀಕರಣದಲ್ಲಿಯೂ ಮುಂದಿದೆ” ಎಂದಿದ್ದರು. “ಸಂಕ್ಷಿಪ್ತವಾಗಿ ಹೇಳುವುದಾದರೆ, ತಮಿಳುನಾಡು ಎಲ್ಲರನ್ನೂ ಒಳಗೊಂಡು ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದೆ. ಇದನ್ನೇ ನಾವು ದ್ರಾವಿಡ ಮಾದರಿ ಎಂದು ಕರೆಯುತ್ತೇವೆ” ಎಂದು ಬಣ್ಣಿಸಿದ್ದರು.

ಇದನ್ನೂ ಓದಿರಿ: ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ರಾಷ್ಟ್ರೀಯ ಆರ್ಥಿಕತೆಗೆ ತಮಿಳುನಾಡಿನ ಕೊಡುಗೆಯನ್ನು ಎತ್ತಿ ಹಿಡಿದ ಅವರು, “ಭಾರತದ ಜಿಡಿಪಿಯಲ್ಲಿ ರಾಜ್ಯದ ಪಾಲು ಶೇ.9.22 ರಷ್ಟಿದೆ. ಕೇಂದ್ರ ಸರ್ಕಾರದ ಒಟ್ಟಾರೆ ತೆರಿಗೆ ಆದಾಯದಲ್ಲಿ ತಮಿಳುನಾಡಿನ ಪಾಲು ಶೇ. 6ರಷ್ಟಿದೆ. ದೇಶದ ಅಭಿವೃದ್ಧಿ ಮತ್ತು ಆರ್ಥಿಕತೆಯಲ್ಲಿ ತಮಿಳುನಾಡಿನಂತಹ ಅಭಿವೃದ್ಧಿ ಹೊಂದಿದ ರಾಜ್ಯಗಳು ನೀಡಿದ ಕೊಡುಗೆಗೆ ನ್ಯಾಯ ಸಲ್ಲಿಸಲು ಕೇಂದ್ರ ಸರ್ಕಾರವು ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕು. ಅನುದಾನ ಹಂಚಿಕೆಯನ್ನು ಹೆಚ್ಚಿಸಬೇಕು. ಆಗ ಮಾತ್ರ ಸಹಕಾರಿ ಫೆಡರಲಿಸಂನ ನಿಜವಾದ ಮನೋಭಾವವನ್ನು ಎತ್ತಿಹಿಡಿಯಲಾಗುತ್ತದೆ” ಎಂದಿದ್ದರು.

“15 ಮೇ 2022ರ ವೇಳೆಗೆ ತಮಿಳುನಾಡಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರವು 14,006 ಕೋಟಿ ರೂ. ಆಗಿದೆ. ಇದನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ಅನೇಕ ರಾಜ್ಯಗಳ ಆದಾಯವು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದಿರುವ ಸಮಯದಲ್ಲಿ, ಜಿಎಸ್‌ಟಿ ಪರಿಹಾರದ ಅವಧಿಯನ್ನು ವಿಸ್ತರಿಸಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...