Homeಮುಖಪುಟದೇಶದ್ರೋಹಿಗಳ ತಡೆಗಾಗಿ ‘ದ್ರಾವಿಡ ಮಾದರಿ ತರಬೇತಿ ಕೋರ್ಸ್’ ನಡೆಸಲು ಡಿಎಂಕೆ ನಿರ್ಧಾರ

ದೇಶದ್ರೋಹಿಗಳ ತಡೆಗಾಗಿ ‘ದ್ರಾವಿಡ ಮಾದರಿ ತರಬೇತಿ ಕೋರ್ಸ್’ ನಡೆಸಲು ಡಿಎಂಕೆ ನಿರ್ಧಾರ

- Advertisement -
- Advertisement -

ಡಿಎಂಕೆ ಪಕ್ಷದ ವರಿಷ್ಠ, ಮಾಜಿ ಮುಖ್ಯಮಂತ್ರಿ ದಿವಂಗತ ಎಂ.ಕರುಣಾನಿಧಿ ಅವರ ಜನ್ಮದಿನದ ಪೂರ್ವಭಾವಿಯಾಗಿ ಡಿಎಂಕೆ ಕರೆದಿದ್ದ ಜಿಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

“ದ್ರಾವಿಡ ಮಾದರಿಯ ತರಬೇತಿ ಕೋರ್ಸ್‌”ಗಳನ್ನು ನಡೆಸಲು, ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡಲು ಯತ್ನಿಸುತ್ತಿರುವ ದೇಶ ವಿರೋಧಿ ಮತ್ತು ಅಪಾಯಕಾರಿ ಶಕ್ತಿಗಳನ್ನು ಗುರುತಿಸಲು ಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಐಟಿ ವಿಭಾಗ, ಮಹಿಳಾ ವಿಭಾಗ, ಯುವ ವಿಭಾಗ, ವಿದ್ಯಾರ್ಥಿ ವಿಭಾಗಗಳ ಸಹಾಯದಿಂದ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಈ ತರಬೇತಿ ಶಿಬಿರಗಳನ್ನು ನಡೆಸುವುದಾಗಿ ಡಿಎಂಕೆ ಹೇಳಿದೆ. ಸರಿಯಾಗಿ ಆಯೋಜನೆ ಮಾಡಲು ಜಿಲ್ಲಾ ಘಟಕಗಳಿಗೆ ಸೂಚಿಸಲಾಗಿದೆ.

“ಪೆರಿಯಾರ್, ಅಣ್ಣಾದೊರೈ ಮತ್ತು ಕರುಣಾನಿಧಿಯವರ ಅವರ ಕಠಿಣ ಪರಿಶ್ರಮದಿಂದಾಗಿ ತಮಿಳುನಾಡು ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಮತ್ತು ಕೋಮು ಸೌಹಾರ್ದತೆ ಇದೆ. ಇದನ್ನು ಅರಗಿಸಿಕೊಳ್ಳಲಾಗದ ಶಕ್ತಿಗಳು ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿವೆ. ತಮಿಳುನಾಡನ್ನು ಉಳಿಸುವುದಕ್ಕಾಗಿ ಈ ದೇಶವಿರೋಧಿ ಶಕ್ತಿಗಳನ್ನು, ಅವರಿಗೆ ಸಹಾಯ ಮಾಡುವವರನ್ನು ಗುರುತಿಸಲು ನಿರ್ಧರಿಸಲಾಗಿದೆ” ಎಂದು ಡಿಎಂಕೆ ತಿಳಿಸಿದೆ.

ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, “ಈ ದೇಶವಿರೋಧಿ ಶಕ್ತಿಗಳಿಂದ ರಾಜ್ಯವನ್ನು ಪಾರು ಮಾಡುವ ಪ್ರಯತ್ನದಲ್ಲಿ, ನಾವು ರಾಜ್ಯದಾದ್ಯಂತ ದ್ರಾವಿಡ ಮಾದರಿಯ ತರಬೇತಿ ಶಿಬಿರಗಳನ್ನು ನಡೆಸುವ ಹೊಸ ಹೆಜ್ಜೆ ಇರಿಸುತ್ತಿರುವ ಸೈನಿಕರಾಗಿದ್ದೇವೆ. ಮುಖ್ಯಮಂತ್ರಿಯವರು ತಮ್ಮ ಕೆಲಸ ಮತ್ತು ಚಿಂತನೆಗಳನ್ನು ಮುನ್ನಡೆಸಲು ಅವರೊಂದಿಗೆ ಗುರಾಣಿಯಾಗಿ ನಿಲ್ಲುತ್ತೇವೆ” ಎಂದು ಪಕ್ಷ ನಿರ್ಧರಿಸಿದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಚೆನ್ನೈಗೆ ಭೇಟಿಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿದ್ದರು. “ಸಹಕಾರಿ ಒಕ್ಕೂಟದ ನಿಜವಾದ ಸ್ಫೂರ್ತಿ’ಯನ್ನು ಎತ್ತಿ ಹಿಡಿಯುವಂತೆ ಒತ್ತಾಯಿಸಿದ್ದರು. ಕೇಂದ್ರ ಸರ್ಕಾರವು ರಾಜ್ಯಕ್ಕೆ ಹೆಚ್ಚಿನ ಅನುದಾನ ಹಾಗೂ ಯೋಜನೆಗಳನ್ನು ನೀಡಬೇಕು. ತಮಿಳು ಭಾಷೆಗೆ ಹಿಂದಿಯಷ್ಟೇ ಆದ್ಯತೆಯನ್ನು ನೀಡಬೇಕು. ತಮಿಳುನಾಡು ರಾಜ್ಯಕ್ಕೆ ನೀಟ್‌ನಿಂದ ವಿನಾಯಿತಿ ನೀಡಬೇಕು” ಎಂದು ಒತ್ತಾಯಿಸಿದ್ದರು.

ಸ್ಟಾಲಿನ್ ತಮ್ಮ ಭಾಷಣದಲ್ಲಿ, “ತಮಿಳುನಾಡು ರಾಜ್ಯವು ಆರ್ಥಿಕತೆ ಹಾಗೂ ಇದಕ್ಕೆ ಸಂಬಂಧಿತ ಅಂಶಗಳಲ್ಲಿ ಮಾತ್ರವಲ್ಲದೆ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮಹಿಳಾ ಸಬಲೀಕರಣದಲ್ಲಿಯೂ ಮುಂದಿದೆ” ಎಂದಿದ್ದರು. “ಸಂಕ್ಷಿಪ್ತವಾಗಿ ಹೇಳುವುದಾದರೆ, ತಮಿಳುನಾಡು ಎಲ್ಲರನ್ನೂ ಒಳಗೊಂಡು ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದೆ. ಇದನ್ನೇ ನಾವು ದ್ರಾವಿಡ ಮಾದರಿ ಎಂದು ಕರೆಯುತ್ತೇವೆ” ಎಂದು ಬಣ್ಣಿಸಿದ್ದರು.

ಇದನ್ನೂ ಓದಿರಿ: ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ರಾಷ್ಟ್ರೀಯ ಆರ್ಥಿಕತೆಗೆ ತಮಿಳುನಾಡಿನ ಕೊಡುಗೆಯನ್ನು ಎತ್ತಿ ಹಿಡಿದ ಅವರು, “ಭಾರತದ ಜಿಡಿಪಿಯಲ್ಲಿ ರಾಜ್ಯದ ಪಾಲು ಶೇ.9.22 ರಷ್ಟಿದೆ. ಕೇಂದ್ರ ಸರ್ಕಾರದ ಒಟ್ಟಾರೆ ತೆರಿಗೆ ಆದಾಯದಲ್ಲಿ ತಮಿಳುನಾಡಿನ ಪಾಲು ಶೇ. 6ರಷ್ಟಿದೆ. ದೇಶದ ಅಭಿವೃದ್ಧಿ ಮತ್ತು ಆರ್ಥಿಕತೆಯಲ್ಲಿ ತಮಿಳುನಾಡಿನಂತಹ ಅಭಿವೃದ್ಧಿ ಹೊಂದಿದ ರಾಜ್ಯಗಳು ನೀಡಿದ ಕೊಡುಗೆಗೆ ನ್ಯಾಯ ಸಲ್ಲಿಸಲು ಕೇಂದ್ರ ಸರ್ಕಾರವು ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕು. ಅನುದಾನ ಹಂಚಿಕೆಯನ್ನು ಹೆಚ್ಚಿಸಬೇಕು. ಆಗ ಮಾತ್ರ ಸಹಕಾರಿ ಫೆಡರಲಿಸಂನ ನಿಜವಾದ ಮನೋಭಾವವನ್ನು ಎತ್ತಿಹಿಡಿಯಲಾಗುತ್ತದೆ” ಎಂದಿದ್ದರು.

“15 ಮೇ 2022ರ ವೇಳೆಗೆ ತಮಿಳುನಾಡಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರವು 14,006 ಕೋಟಿ ರೂ. ಆಗಿದೆ. ಇದನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ಅನೇಕ ರಾಜ್ಯಗಳ ಆದಾಯವು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದಿರುವ ಸಮಯದಲ್ಲಿ, ಜಿಎಸ್‌ಟಿ ಪರಿಹಾರದ ಅವಧಿಯನ್ನು ವಿಸ್ತರಿಸಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...