Homeಮುಖಪುಟದೇಶದ್ರೋಹಿಗಳ ತಡೆಗಾಗಿ ‘ದ್ರಾವಿಡ ಮಾದರಿ ತರಬೇತಿ ಕೋರ್ಸ್’ ನಡೆಸಲು ಡಿಎಂಕೆ ನಿರ್ಧಾರ

ದೇಶದ್ರೋಹಿಗಳ ತಡೆಗಾಗಿ ‘ದ್ರಾವಿಡ ಮಾದರಿ ತರಬೇತಿ ಕೋರ್ಸ್’ ನಡೆಸಲು ಡಿಎಂಕೆ ನಿರ್ಧಾರ

- Advertisement -
- Advertisement -

ಡಿಎಂಕೆ ಪಕ್ಷದ ವರಿಷ್ಠ, ಮಾಜಿ ಮುಖ್ಯಮಂತ್ರಿ ದಿವಂಗತ ಎಂ.ಕರುಣಾನಿಧಿ ಅವರ ಜನ್ಮದಿನದ ಪೂರ್ವಭಾವಿಯಾಗಿ ಡಿಎಂಕೆ ಕರೆದಿದ್ದ ಜಿಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

“ದ್ರಾವಿಡ ಮಾದರಿಯ ತರಬೇತಿ ಕೋರ್ಸ್‌”ಗಳನ್ನು ನಡೆಸಲು, ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡಲು ಯತ್ನಿಸುತ್ತಿರುವ ದೇಶ ವಿರೋಧಿ ಮತ್ತು ಅಪಾಯಕಾರಿ ಶಕ್ತಿಗಳನ್ನು ಗುರುತಿಸಲು ಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಐಟಿ ವಿಭಾಗ, ಮಹಿಳಾ ವಿಭಾಗ, ಯುವ ವಿಭಾಗ, ವಿದ್ಯಾರ್ಥಿ ವಿಭಾಗಗಳ ಸಹಾಯದಿಂದ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಈ ತರಬೇತಿ ಶಿಬಿರಗಳನ್ನು ನಡೆಸುವುದಾಗಿ ಡಿಎಂಕೆ ಹೇಳಿದೆ. ಸರಿಯಾಗಿ ಆಯೋಜನೆ ಮಾಡಲು ಜಿಲ್ಲಾ ಘಟಕಗಳಿಗೆ ಸೂಚಿಸಲಾಗಿದೆ.

“ಪೆರಿಯಾರ್, ಅಣ್ಣಾದೊರೈ ಮತ್ತು ಕರುಣಾನಿಧಿಯವರ ಅವರ ಕಠಿಣ ಪರಿಶ್ರಮದಿಂದಾಗಿ ತಮಿಳುನಾಡು ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಮತ್ತು ಕೋಮು ಸೌಹಾರ್ದತೆ ಇದೆ. ಇದನ್ನು ಅರಗಿಸಿಕೊಳ್ಳಲಾಗದ ಶಕ್ತಿಗಳು ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿವೆ. ತಮಿಳುನಾಡನ್ನು ಉಳಿಸುವುದಕ್ಕಾಗಿ ಈ ದೇಶವಿರೋಧಿ ಶಕ್ತಿಗಳನ್ನು, ಅವರಿಗೆ ಸಹಾಯ ಮಾಡುವವರನ್ನು ಗುರುತಿಸಲು ನಿರ್ಧರಿಸಲಾಗಿದೆ” ಎಂದು ಡಿಎಂಕೆ ತಿಳಿಸಿದೆ.

ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, “ಈ ದೇಶವಿರೋಧಿ ಶಕ್ತಿಗಳಿಂದ ರಾಜ್ಯವನ್ನು ಪಾರು ಮಾಡುವ ಪ್ರಯತ್ನದಲ್ಲಿ, ನಾವು ರಾಜ್ಯದಾದ್ಯಂತ ದ್ರಾವಿಡ ಮಾದರಿಯ ತರಬೇತಿ ಶಿಬಿರಗಳನ್ನು ನಡೆಸುವ ಹೊಸ ಹೆಜ್ಜೆ ಇರಿಸುತ್ತಿರುವ ಸೈನಿಕರಾಗಿದ್ದೇವೆ. ಮುಖ್ಯಮಂತ್ರಿಯವರು ತಮ್ಮ ಕೆಲಸ ಮತ್ತು ಚಿಂತನೆಗಳನ್ನು ಮುನ್ನಡೆಸಲು ಅವರೊಂದಿಗೆ ಗುರಾಣಿಯಾಗಿ ನಿಲ್ಲುತ್ತೇವೆ” ಎಂದು ಪಕ್ಷ ನಿರ್ಧರಿಸಿದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಚೆನ್ನೈಗೆ ಭೇಟಿಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿದ್ದರು. “ಸಹಕಾರಿ ಒಕ್ಕೂಟದ ನಿಜವಾದ ಸ್ಫೂರ್ತಿ’ಯನ್ನು ಎತ್ತಿ ಹಿಡಿಯುವಂತೆ ಒತ್ತಾಯಿಸಿದ್ದರು. ಕೇಂದ್ರ ಸರ್ಕಾರವು ರಾಜ್ಯಕ್ಕೆ ಹೆಚ್ಚಿನ ಅನುದಾನ ಹಾಗೂ ಯೋಜನೆಗಳನ್ನು ನೀಡಬೇಕು. ತಮಿಳು ಭಾಷೆಗೆ ಹಿಂದಿಯಷ್ಟೇ ಆದ್ಯತೆಯನ್ನು ನೀಡಬೇಕು. ತಮಿಳುನಾಡು ರಾಜ್ಯಕ್ಕೆ ನೀಟ್‌ನಿಂದ ವಿನಾಯಿತಿ ನೀಡಬೇಕು” ಎಂದು ಒತ್ತಾಯಿಸಿದ್ದರು.

ಸ್ಟಾಲಿನ್ ತಮ್ಮ ಭಾಷಣದಲ್ಲಿ, “ತಮಿಳುನಾಡು ರಾಜ್ಯವು ಆರ್ಥಿಕತೆ ಹಾಗೂ ಇದಕ್ಕೆ ಸಂಬಂಧಿತ ಅಂಶಗಳಲ್ಲಿ ಮಾತ್ರವಲ್ಲದೆ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮಹಿಳಾ ಸಬಲೀಕರಣದಲ್ಲಿಯೂ ಮುಂದಿದೆ” ಎಂದಿದ್ದರು. “ಸಂಕ್ಷಿಪ್ತವಾಗಿ ಹೇಳುವುದಾದರೆ, ತಮಿಳುನಾಡು ಎಲ್ಲರನ್ನೂ ಒಳಗೊಂಡು ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದೆ. ಇದನ್ನೇ ನಾವು ದ್ರಾವಿಡ ಮಾದರಿ ಎಂದು ಕರೆಯುತ್ತೇವೆ” ಎಂದು ಬಣ್ಣಿಸಿದ್ದರು.

ಇದನ್ನೂ ಓದಿರಿ: ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ರಾಷ್ಟ್ರೀಯ ಆರ್ಥಿಕತೆಗೆ ತಮಿಳುನಾಡಿನ ಕೊಡುಗೆಯನ್ನು ಎತ್ತಿ ಹಿಡಿದ ಅವರು, “ಭಾರತದ ಜಿಡಿಪಿಯಲ್ಲಿ ರಾಜ್ಯದ ಪಾಲು ಶೇ.9.22 ರಷ್ಟಿದೆ. ಕೇಂದ್ರ ಸರ್ಕಾರದ ಒಟ್ಟಾರೆ ತೆರಿಗೆ ಆದಾಯದಲ್ಲಿ ತಮಿಳುನಾಡಿನ ಪಾಲು ಶೇ. 6ರಷ್ಟಿದೆ. ದೇಶದ ಅಭಿವೃದ್ಧಿ ಮತ್ತು ಆರ್ಥಿಕತೆಯಲ್ಲಿ ತಮಿಳುನಾಡಿನಂತಹ ಅಭಿವೃದ್ಧಿ ಹೊಂದಿದ ರಾಜ್ಯಗಳು ನೀಡಿದ ಕೊಡುಗೆಗೆ ನ್ಯಾಯ ಸಲ್ಲಿಸಲು ಕೇಂದ್ರ ಸರ್ಕಾರವು ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕು. ಅನುದಾನ ಹಂಚಿಕೆಯನ್ನು ಹೆಚ್ಚಿಸಬೇಕು. ಆಗ ಮಾತ್ರ ಸಹಕಾರಿ ಫೆಡರಲಿಸಂನ ನಿಜವಾದ ಮನೋಭಾವವನ್ನು ಎತ್ತಿಹಿಡಿಯಲಾಗುತ್ತದೆ” ಎಂದಿದ್ದರು.

“15 ಮೇ 2022ರ ವೇಳೆಗೆ ತಮಿಳುನಾಡಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರವು 14,006 ಕೋಟಿ ರೂ. ಆಗಿದೆ. ಇದನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ಅನೇಕ ರಾಜ್ಯಗಳ ಆದಾಯವು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದಿರುವ ಸಮಯದಲ್ಲಿ, ಜಿಎಸ್‌ಟಿ ಪರಿಹಾರದ ಅವಧಿಯನ್ನು ವಿಸ್ತರಿಸಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...