Homeಮುಖಪುಟಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

ಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

- Advertisement -
- Advertisement -

ಹರಿಯಾಣದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಹಿಂದೂ ಧಾರ್ಮಿಕ ಮೆರವಣಿಗೆ ವೇಳೆ ಕತ್ತಿ ಮತ್ತು ಕೋಲುಗಳನ್ನು ಯಾರು ಒಯ್ಯುತ್ತಾರೆ ಎಂದು ಕೇಂದ್ರ ಸಚಿವ ಮತ್ತು ಗುರುಗ್ರಾಮ್ ಸಂಸದ ರಾವ್ ಇಂದರ್‌ಜಿತ್ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಈ ಹಿಂಸಾಚಾರದ ಬಗ್ಗೆ ಮಾತನಾಡಿರುವ ಅವರು, ಎರಡೂ ಕಡೆಯಿಂದ ಪ್ರಚೋದನೆ ನಡೆದಿರಬಹುದು. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ. ಆದರೆ ಧಾರ್ಮಿಕ ಮೆರವಣಿಗೆಗಾಗಿ ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡಿದ್ದು ಯಾರು? ಇದು ತಪ್ಪು” ಎಂದು ಸಂಸದರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 31 ರಂದು ಮಧ್ಯಾಹ್ನ ಹರಿಯಾಣದ ನುಹ್‌ನಲ್ಲಿ ಸಂಭವಿಸಿದ ಕೋಮು ಉದ್ವಿಗ್ನತೆಯಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ. ಮಂಗಳವಾರ ಈ ಹಿಂಸಾಚಾರ ಸೊಹ್ನಾ, ಪಲ್ವಾಲ್ ಮತ್ತು ಗುರುಗ್ರಾಮ್‌ ಹರಡಿತ್ತು. ನುಹ್‌ನಲ್ಲಿ ಹಿಂದೂ ರ್ಯಾಲಿ ಮೇಲೆ ಕಲ್ಲು ತೂರಾಟ ನಡೆಯಿತು. ಇದರ ಬೆನ್ನಲ್ಲೇ ಗುರುಗ್ರಾಮ್‌ನ ಮಸೀದಿಯ ಮೇಲೆ ದಾಳಿ ನಡೆದು, ಅಲ್ಲಿ ಇಮಾಮ್ ಹತ್ಯೆಗೊಳಗಾದರು.

ಈ ಹಿಂಸಾಚಾರಕ್ಕೆ ಗೋರಕ್ಷಕ ಮೋನು ಮಾನೇಸರ್ ಅವರ ವಿಡಿಯೊವೇ ಕಾರಣ ಎಂದು ಹೇಳಲಾಗಿದ್ದರೂ ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ಮೆರವಣಿಗೆಗೆ ಆಯುಧಗಳನ್ನು ಕೊಟ್ಟವರು ಯಾರು? ಕತ್ತಿ ಅಥವಾ ಕೋಲುಗಳನ್ನು ಹೊತ್ತ ಮೆರವಣಿಗೆಗೆ ಯಾರು ಹೋಗುತ್ತಾರೆ? ಇದು ತಪ್ಪು. ಈ ಕಡೆಯಿಂದಲೂ ಪ್ರಚೋದನೆ ನಡೆದಿದೆ. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

”ಹಿಂಸಾಚಾರ ಪ್ರಾರಂಭವಾದ ದಿನ ಅಂದರೆ ಜುಲೈ 31 ರಂದು ಕೇಂದ್ರ ಸಚಿವರು ಈ ಬೆಳವಣಿಗೆಗಳು ದುರದೃಷ್ಟಕರ. 1947 ರಲ್ಲಿ, ಭಾರತ ಮತ್ತು ವಿಭಜನೆಯಾದಾಗ ಮತ್ತು ಪಾಕಿಸ್ತಾನವನ್ನು ರಚಿಸಿದಾಗ ಮೇವಾತ್‌ನಲ್ಲಿ ಶಾಂತಿ ನೆಲೆಸಿತ್ತು. ಗಲಭೆಗೆ ಕಾರಣರಾದವರನ್ನು ಬಿಡುವುದಿಲ್ಲ. ಇಂತಹ ಘಟನೆಗಳು ಭವಿಷ್ಯದಲ್ಲಿ ನಡೆಯದಂತೆ ಹರ್ಯಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಲಿದೆ” ಎಂದು ಸಂಸದರು ಹೇಳಿದ್ದಾರೆ.

ಕೇಂದ್ರ ಸಚಿವ ರಾವ್ ಇಂದರ್‌ಜಿತ್ ಸಿಂಗ್ ಅವರು ಇಂದು(ಬುಧವಾರ) ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ನುಹ್‌ನಲ್ಲಿನ ಹಿಂಸಾಚಾರದ ಕುರಿತು ಮಾತನಾಡಿದ ಅವರು, ”ಎರಡೂ ಸಮುದಾಯಗಳು ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆ, ಅವರು ಆ ಶಸ್ತ್ರಾಸ್ತ್ರಗಳನ್ನು ಹೇಗೆ ಪಡೆದರು? ಅವರು ಅಂತಹ ವಾತಾವರಣವನ್ನು ಏಕೆ ಸೃಷ್ಟಿಸಿದರು? ಎಂಬುದು ವಿಚಾರಣೆಯ ವಿಷಯವಾಗಿದೆ. ಹರ್ಯಾಣ ಸರ್ಕಾರ ತನಿಖೆ ನಡೆಸುತ್ತದೆ” ಎಂದು ಹೇಳಿದ್ದಾರೆ.

ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಮೋದಿ ಸರ್ಕಾರದ ಸಚಿವರ ಹೇಳಿಕೆಯ ಹೊರತಾಗಿಯೂ, ಕ್ರಮವು ಏಕಪಕ್ಷೀಯವಾಗಿರುತ್ತದೆ. ಬಂದೂಕು ಹಿಡಿದು ತಿರುಗಾಡುವ, ಅಮಾಯಕರ ಜೀವ ಮತ್ತು ಆಸ್ತಿಗೆ ಹಾನಿ ಮಾಡುವವರನ್ನು ‘ಹೃದಯ ಸಾಮ್ರಾಟ್’ ಎಂದು ಕರೆದು ಮಹಾಪಂಚಾಯತ್‌ನಲ್ಲಿ ಸನ್ಮಾನಿಸಲಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...