Homeಮುಖಪುಟಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

ಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

- Advertisement -
- Advertisement -

ಹರಿಯಾಣದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಹಿಂದೂ ಧಾರ್ಮಿಕ ಮೆರವಣಿಗೆ ವೇಳೆ ಕತ್ತಿ ಮತ್ತು ಕೋಲುಗಳನ್ನು ಯಾರು ಒಯ್ಯುತ್ತಾರೆ ಎಂದು ಕೇಂದ್ರ ಸಚಿವ ಮತ್ತು ಗುರುಗ್ರಾಮ್ ಸಂಸದ ರಾವ್ ಇಂದರ್‌ಜಿತ್ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಈ ಹಿಂಸಾಚಾರದ ಬಗ್ಗೆ ಮಾತನಾಡಿರುವ ಅವರು, ಎರಡೂ ಕಡೆಯಿಂದ ಪ್ರಚೋದನೆ ನಡೆದಿರಬಹುದು. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ. ಆದರೆ ಧಾರ್ಮಿಕ ಮೆರವಣಿಗೆಗಾಗಿ ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡಿದ್ದು ಯಾರು? ಇದು ತಪ್ಪು” ಎಂದು ಸಂಸದರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 31 ರಂದು ಮಧ್ಯಾಹ್ನ ಹರಿಯಾಣದ ನುಹ್‌ನಲ್ಲಿ ಸಂಭವಿಸಿದ ಕೋಮು ಉದ್ವಿಗ್ನತೆಯಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ. ಮಂಗಳವಾರ ಈ ಹಿಂಸಾಚಾರ ಸೊಹ್ನಾ, ಪಲ್ವಾಲ್ ಮತ್ತು ಗುರುಗ್ರಾಮ್‌ ಹರಡಿತ್ತು. ನುಹ್‌ನಲ್ಲಿ ಹಿಂದೂ ರ್ಯಾಲಿ ಮೇಲೆ ಕಲ್ಲು ತೂರಾಟ ನಡೆಯಿತು. ಇದರ ಬೆನ್ನಲ್ಲೇ ಗುರುಗ್ರಾಮ್‌ನ ಮಸೀದಿಯ ಮೇಲೆ ದಾಳಿ ನಡೆದು, ಅಲ್ಲಿ ಇಮಾಮ್ ಹತ್ಯೆಗೊಳಗಾದರು.

ಈ ಹಿಂಸಾಚಾರಕ್ಕೆ ಗೋರಕ್ಷಕ ಮೋನು ಮಾನೇಸರ್ ಅವರ ವಿಡಿಯೊವೇ ಕಾರಣ ಎಂದು ಹೇಳಲಾಗಿದ್ದರೂ ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ಮೆರವಣಿಗೆಗೆ ಆಯುಧಗಳನ್ನು ಕೊಟ್ಟವರು ಯಾರು? ಕತ್ತಿ ಅಥವಾ ಕೋಲುಗಳನ್ನು ಹೊತ್ತ ಮೆರವಣಿಗೆಗೆ ಯಾರು ಹೋಗುತ್ತಾರೆ? ಇದು ತಪ್ಪು. ಈ ಕಡೆಯಿಂದಲೂ ಪ್ರಚೋದನೆ ನಡೆದಿದೆ. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

”ಹಿಂಸಾಚಾರ ಪ್ರಾರಂಭವಾದ ದಿನ ಅಂದರೆ ಜುಲೈ 31 ರಂದು ಕೇಂದ್ರ ಸಚಿವರು ಈ ಬೆಳವಣಿಗೆಗಳು ದುರದೃಷ್ಟಕರ. 1947 ರಲ್ಲಿ, ಭಾರತ ಮತ್ತು ವಿಭಜನೆಯಾದಾಗ ಮತ್ತು ಪಾಕಿಸ್ತಾನವನ್ನು ರಚಿಸಿದಾಗ ಮೇವಾತ್‌ನಲ್ಲಿ ಶಾಂತಿ ನೆಲೆಸಿತ್ತು. ಗಲಭೆಗೆ ಕಾರಣರಾದವರನ್ನು ಬಿಡುವುದಿಲ್ಲ. ಇಂತಹ ಘಟನೆಗಳು ಭವಿಷ್ಯದಲ್ಲಿ ನಡೆಯದಂತೆ ಹರ್ಯಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಲಿದೆ” ಎಂದು ಸಂಸದರು ಹೇಳಿದ್ದಾರೆ.

ಕೇಂದ್ರ ಸಚಿವ ರಾವ್ ಇಂದರ್‌ಜಿತ್ ಸಿಂಗ್ ಅವರು ಇಂದು(ಬುಧವಾರ) ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ನುಹ್‌ನಲ್ಲಿನ ಹಿಂಸಾಚಾರದ ಕುರಿತು ಮಾತನಾಡಿದ ಅವರು, ”ಎರಡೂ ಸಮುದಾಯಗಳು ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆ, ಅವರು ಆ ಶಸ್ತ್ರಾಸ್ತ್ರಗಳನ್ನು ಹೇಗೆ ಪಡೆದರು? ಅವರು ಅಂತಹ ವಾತಾವರಣವನ್ನು ಏಕೆ ಸೃಷ್ಟಿಸಿದರು? ಎಂಬುದು ವಿಚಾರಣೆಯ ವಿಷಯವಾಗಿದೆ. ಹರ್ಯಾಣ ಸರ್ಕಾರ ತನಿಖೆ ನಡೆಸುತ್ತದೆ” ಎಂದು ಹೇಳಿದ್ದಾರೆ.

ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಮೋದಿ ಸರ್ಕಾರದ ಸಚಿವರ ಹೇಳಿಕೆಯ ಹೊರತಾಗಿಯೂ, ಕ್ರಮವು ಏಕಪಕ್ಷೀಯವಾಗಿರುತ್ತದೆ. ಬಂದೂಕು ಹಿಡಿದು ತಿರುಗಾಡುವ, ಅಮಾಯಕರ ಜೀವ ಮತ್ತು ಆಸ್ತಿಗೆ ಹಾನಿ ಮಾಡುವವರನ್ನು ‘ಹೃದಯ ಸಾಮ್ರಾಟ್’ ಎಂದು ಕರೆದು ಮಹಾಪಂಚಾಯತ್‌ನಲ್ಲಿ ಸನ್ಮಾನಿಸಲಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...