Homeಮುಖಪುಟಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

ಹಿಂದೂ ಧಾರ್ಮಿಕ ಮೆರವಣಿಗೆಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಾರಾ?: ಕೇಂದ್ರ ಸಚಿವ ಇಂದರ್‌ಜಿತ್ ಸಿಂಗ್ ಪ್ರಶ್ನೆ

- Advertisement -
- Advertisement -

ಹರಿಯಾಣದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಹಿಂದೂ ಧಾರ್ಮಿಕ ಮೆರವಣಿಗೆ ವೇಳೆ ಕತ್ತಿ ಮತ್ತು ಕೋಲುಗಳನ್ನು ಯಾರು ಒಯ್ಯುತ್ತಾರೆ ಎಂದು ಕೇಂದ್ರ ಸಚಿವ ಮತ್ತು ಗುರುಗ್ರಾಮ್ ಸಂಸದ ರಾವ್ ಇಂದರ್‌ಜಿತ್ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಈ ಹಿಂಸಾಚಾರದ ಬಗ್ಗೆ ಮಾತನಾಡಿರುವ ಅವರು, ಎರಡೂ ಕಡೆಯಿಂದ ಪ್ರಚೋದನೆ ನಡೆದಿರಬಹುದು. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ. ಆದರೆ ಧಾರ್ಮಿಕ ಮೆರವಣಿಗೆಗಾಗಿ ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡಿದ್ದು ಯಾರು? ಇದು ತಪ್ಪು” ಎಂದು ಸಂಸದರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 31 ರಂದು ಮಧ್ಯಾಹ್ನ ಹರಿಯಾಣದ ನುಹ್‌ನಲ್ಲಿ ಸಂಭವಿಸಿದ ಕೋಮು ಉದ್ವಿಗ್ನತೆಯಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ. ಮಂಗಳವಾರ ಈ ಹಿಂಸಾಚಾರ ಸೊಹ್ನಾ, ಪಲ್ವಾಲ್ ಮತ್ತು ಗುರುಗ್ರಾಮ್‌ ಹರಡಿತ್ತು. ನುಹ್‌ನಲ್ಲಿ ಹಿಂದೂ ರ್ಯಾಲಿ ಮೇಲೆ ಕಲ್ಲು ತೂರಾಟ ನಡೆಯಿತು. ಇದರ ಬೆನ್ನಲ್ಲೇ ಗುರುಗ್ರಾಮ್‌ನ ಮಸೀದಿಯ ಮೇಲೆ ದಾಳಿ ನಡೆದು, ಅಲ್ಲಿ ಇಮಾಮ್ ಹತ್ಯೆಗೊಳಗಾದರು.

ಈ ಹಿಂಸಾಚಾರಕ್ಕೆ ಗೋರಕ್ಷಕ ಮೋನು ಮಾನೇಸರ್ ಅವರ ವಿಡಿಯೊವೇ ಕಾರಣ ಎಂದು ಹೇಳಲಾಗಿದ್ದರೂ ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ಮೆರವಣಿಗೆಗೆ ಆಯುಧಗಳನ್ನು ಕೊಟ್ಟವರು ಯಾರು? ಕತ್ತಿ ಅಥವಾ ಕೋಲುಗಳನ್ನು ಹೊತ್ತ ಮೆರವಣಿಗೆಗೆ ಯಾರು ಹೋಗುತ್ತಾರೆ? ಇದು ತಪ್ಪು. ಈ ಕಡೆಯಿಂದಲೂ ಪ್ರಚೋದನೆ ನಡೆದಿದೆ. ಇನ್ನೊಂದು ಕಡೆಯಿಂದ ಯಾವುದೇ ಪ್ರಚೋದನೆ ಇಲ್ಲ ಎಂದು ನಾನು ಹೇಳುತ್ತಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

”ಹಿಂಸಾಚಾರ ಪ್ರಾರಂಭವಾದ ದಿನ ಅಂದರೆ ಜುಲೈ 31 ರಂದು ಕೇಂದ್ರ ಸಚಿವರು ಈ ಬೆಳವಣಿಗೆಗಳು ದುರದೃಷ್ಟಕರ. 1947 ರಲ್ಲಿ, ಭಾರತ ಮತ್ತು ವಿಭಜನೆಯಾದಾಗ ಮತ್ತು ಪಾಕಿಸ್ತಾನವನ್ನು ರಚಿಸಿದಾಗ ಮೇವಾತ್‌ನಲ್ಲಿ ಶಾಂತಿ ನೆಲೆಸಿತ್ತು. ಗಲಭೆಗೆ ಕಾರಣರಾದವರನ್ನು ಬಿಡುವುದಿಲ್ಲ. ಇಂತಹ ಘಟನೆಗಳು ಭವಿಷ್ಯದಲ್ಲಿ ನಡೆಯದಂತೆ ಹರ್ಯಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಲಿದೆ” ಎಂದು ಸಂಸದರು ಹೇಳಿದ್ದಾರೆ.

ಕೇಂದ್ರ ಸಚಿವ ರಾವ್ ಇಂದರ್‌ಜಿತ್ ಸಿಂಗ್ ಅವರು ಇಂದು(ಬುಧವಾರ) ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ನುಹ್‌ನಲ್ಲಿನ ಹಿಂಸಾಚಾರದ ಕುರಿತು ಮಾತನಾಡಿದ ಅವರು, ”ಎರಡೂ ಸಮುದಾಯಗಳು ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆ, ಅವರು ಆ ಶಸ್ತ್ರಾಸ್ತ್ರಗಳನ್ನು ಹೇಗೆ ಪಡೆದರು? ಅವರು ಅಂತಹ ವಾತಾವರಣವನ್ನು ಏಕೆ ಸೃಷ್ಟಿಸಿದರು? ಎಂಬುದು ವಿಚಾರಣೆಯ ವಿಷಯವಾಗಿದೆ. ಹರ್ಯಾಣ ಸರ್ಕಾರ ತನಿಖೆ ನಡೆಸುತ್ತದೆ” ಎಂದು ಹೇಳಿದ್ದಾರೆ.

ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಮೋದಿ ಸರ್ಕಾರದ ಸಚಿವರ ಹೇಳಿಕೆಯ ಹೊರತಾಗಿಯೂ, ಕ್ರಮವು ಏಕಪಕ್ಷೀಯವಾಗಿರುತ್ತದೆ. ಬಂದೂಕು ಹಿಡಿದು ತಿರುಗಾಡುವ, ಅಮಾಯಕರ ಜೀವ ಮತ್ತು ಆಸ್ತಿಗೆ ಹಾನಿ ಮಾಡುವವರನ್ನು ‘ಹೃದಯ ಸಾಮ್ರಾಟ್’ ಎಂದು ಕರೆದು ಮಹಾಪಂಚಾಯತ್‌ನಲ್ಲಿ ಸನ್ಮಾನಿಸಲಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಹರಿಯಾಣ ಕೋಮು ಸಂಘರ್ಷ: ಹಿಂದುತ್ವ ಸಂಘಟನೆಗಳಿಂದ ದೆಹಲಿಯಲ್ಲಿ ಪ್ರತಿಭಟನೆ; ಬಿಗಿ ಭದ್ರತೆಗೆ ಸುಪ್ರೀಂ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...