Homeಮುಖಪುಟಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

ಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

- Advertisement -
- Advertisement -

ಭಾಷೆಯ ಅಡೆತಡೆಯ ನಡುವೆಯೂ ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ಅನೇಕ ಸಣ್ಣ ದೇಶಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿರುವ ಪ್ರಧಾನಿ ಮೋದಿ, ಖಾಸಗಿ ವಲಯವು ಈ ಕ್ಷೇತ್ರದಲ್ಲಿ ದೊಡ್ಡ ಅಸ್ತಿತ್ವವನ್ನು ಸಾಧಿಸುವಂತೆ ಶನಿವಾರ ಒತ್ತಾಯಿಸಿದ್ದಾರೆ.

ಆರೋಗ್ಯ ಕ್ಷೇತ್ರದ ಕುರಿತು ಒಕ್ಕೂಟ ಸರ್ಕಾರದ ಬಜೆಟ್ ಘೋಷಣೆಗಳ ಕುರಿತು ವೆಬ್‌ನಾರ್‌ನಲ್ಲಿ ಮಾತನಾಡಿದ ಮೋದಿ, “ವೈದ್ಯಕೀಯ ಶಿಕ್ಷಣಕ್ಕೆ ಭೂಮಿ ಹಂಚಿಕೆಗಾಗಿ ರಾಜ್ಯ ಸರ್ಕಾರಗಳು ‘ಉತ್ತಮ ನೀತಿಗಳನ್ನು’ ರೂಪಿಸಬೇಕು, ಇದರಿಂದ ಭಾರತವು ಜಾಗತಿಕ ಬೇಡಿಕೆಯನ್ನು ಪೂರೈಸಲು ಹೆಚ್ಚಿನ ಸಂಖ್ಯೆಯ ವೈದ್ಯರು ಮತ್ತು ಅರೆವೈದ್ಯರನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ” ಎಂದು ಸಲಹೆ ನೀಡಿದ್ದಾರೆ.

ಭಾರತದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವವರು ರಷ್ಯಾ ನಡೆಸುತ್ತಿರುವ ದಾಳಿಯಿಂದಾಗಿ ಉಕ್ರೇನ್‌‌ನಲ್ಲಿ ಸಿಲುಕಿಕೊಂಡಿದ್ದಾರೆ. ಈ ಸಮಯದಲ್ಲಿ ಪ್ರಧಾನಿಯ ಈ ಹೇಳಿಕೆಗಳು ಬಹಳ ಪ್ರಾಮುಖ್ಯತೆ ಪಡೆದಿವೆ. ಆದರೆ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಎರಡು ದೇಶಗಳ ನಡುವೆ ನಡೆಯುತ್ತಿವ ಬಿಕ್ಕಟ್ಟಿನ ಬಗ್ಗೆ ನೇರವಾಗಿ ಪ್ರಸ್ತಾಪಿಸಲಿಲ್ಲ.

ಭಾರತೀಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ಶಿಕ್ಷಣದ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ, ಇದರಿಂದಾಗಿ ನೂರಾರು ಶತಕೋಟಿ ರೂಪಾಯಿಗಳು ದೇಶದಿಂದ ಹೊರದೇಶಕ್ಕೆ ಹರಿಯುತ್ತಿವೆ ಎಂದು ಪ್ರಧಾನಿ ಹೇಳಿದ್ದಾರೆ.

“ಇಂದು ನಮ್ಮ ಮಕ್ಕಳು ಅಧ್ಯಯನಕ್ಕಾಗಿ ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಸಣ್ಣ ದೇಶಗಳಿಗೆ ಹೋಗುತ್ತಿದ್ದಾರೆ. ಅಲ್ಲಿ ಭಾಷೆಯ ಸಮಸ್ಯೆ ಇದ್ದರೂ, ಅಲ್ಲಿಗೆ ಹೋಗುತ್ತಿದ್ದಾರೆ… ನಮ್ಮ ದೇಶದ ಖಾಸಗಿ ಕ್ಷೇತ್ರವು ಈ ಕ್ಷೇತ್ರವನ್ನು ದೊಡ್ಡ ರೀತಿಯಲ್ಲಿ ಪ್ರವೇಶಿಸಲು ಸಾಧ್ಯವಿಲ್ಲವೇ? ನಮ್ಮ ರಾಜ್ಯ ಸರ್ಕಾರಗಳು ಈ ಬಗ್ಗೆ ಭೂ ಮಂಜೂರಾತಿಗೆ ಒಳ್ಳೆಯ ನೀತಿಯನ್ನು ರೂಪಿಸುವುದಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಕಳೆದ ಹಲವು ದಶಕಗಳಲ್ಲಿ ಭಾರತೀಯ ವೈದ್ಯರು ತಮ್ಮ ಕೆಲಸದಿಂದ ವಿಶ್ವದಾದ್ಯಂತ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜನರಿಗೆ ಗುಣಮಟ್ಟದ ಆರೋಗ್ಯ ಮತ್ತು ಕ್ಷೇಮ ಸೇವೆಗಳನ್ನು ಒದಗಿಸಲು ತನ್ನ ಸರ್ಕಾರ ಪ್ರಯತ್ನ ಮಾಡಿದೆ ಎಂದು ಮೋದಿ ಹೇಲಿದ್ದಾರೆ.

ಸರ್ಕಾರವು ‘ಒಂದು ಭಾರತ ಒಂದು ಆರೋಗ್ಯ’ ಎಂಬ ಮನೋಭಾವದಿಂದ ಕೆಲಸ ಮಾಡುತ್ತಿದೆ, ಇದರಿಂದ ದೂರದ ಸ್ಥಳಗಳಲ್ಲಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುತ್ತಿದೆ. ಗುಣಮಟ್ಟದ ಆರೋಗ್ಯ ಸೌಲಭ್ಯವು ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮಾನ್ಯ ಪ್ರಧಾನೀಯವರೇ ಭಾರತದಲ್ಲಿ ಒಂದು ವರ್ಷಕ್ಕೆ ಕಟ್ಟಲಾಗುವ ಫೀಸಿನಲ್ಲಿ ಸಣ್ಣಪುಟ್ಟ ರಾಷ್ಟ್ರಗಳಿಗೆ ಹೋದರೆ ವೈದ್ಯಕೀಯ ಶಿಕ್ಷಣವೇ ಮುಗಿಸಿ ಬರಬಹುದು

  2. ಈವಯ್ಯನಿಗೆ ವೈದ್ಯಕೀಯ ವಿಧ್ಯಾರ್ಥಿಗಳು ಸಣ್ಣ ಸಣ್ಣ ದೇಶಕ್ಕೆ ಹೋಗ್ತಾರೆ ಅಂತಾ ಇನ್ನೂ ತಿಳಿದಿಲ್ಲಾ… ಇಲ್ಲಿ ಸರಕಾರಿ ಸೀಟುಗಳಿರೋದು ಬರೀ‌ ೨೦೫೫. ಮತ್ತು ಖಾಸಗೀ ಕಾಲೆಜುಗಳದು ೩೦೦೦ ಸೀಟುಗಳು.. ಖಾಸಗೀ ಕಾಲೆಝುಗಳಲ್ಲಿ ವರುಷಕ್ಕೆ ಫ಼ೀಸು ೧೫೦೦೦೦೦. ಇದನ್ನ ತುಂಬಲು ಆಗದೆ ಸಣ್ಣ ಸಣ್ಣ ದೇಶಗಳಿಗೆ ಕಲಿಲಿಕ್ಕೆ ಹೋಗ್ತಾರೆ ಈ ಚಿಕ್ಕ ವಿಷಯ ಈವಯ್ಯನಿಗೆ ಗೊತ್ತಾಗದೇ ಮತ್ತೆ ಖಾಸಗಿ ಕ್ಷೇತ್ರಗಳಿಗೆ ಕಾಲೇಕಾಲೇ ಉ ತೆರೆಯಲು ಹೇಳ್ತಾ ಇದ್ದರೆ ಯಾಕೊ ಇವರಿಗೆ ಖಾಸಗಿ ಕ್ಷೇತ್ರಗಳ ಮೇಲೆ ಬಾಳ‌ ಪ್ರೀತಿ ಇದ್ದಂಗೈತೆ.

    ಯಾಕೆ ಇವರೇ ಅಂದ್ರೆ ಸರಕಾರದವರೇ ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನ ಪ್ರಾರಂಭಿಸಬಾರದು..?

  3. ಮೋದಿ ಜಿ ಯವರ ಅಜಂಡವೇ ಭಾರತದಲ್ಲಿ ಎಲ್ಲವನ್ನು ಖಾಸಗೀಕರಣ ಮಾಡುವುದು ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...