Homeಮುಖಪುಟಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

ಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

- Advertisement -
- Advertisement -

ಭಾಷೆಯ ಅಡೆತಡೆಯ ನಡುವೆಯೂ ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ಅನೇಕ ಸಣ್ಣ ದೇಶಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿರುವ ಪ್ರಧಾನಿ ಮೋದಿ, ಖಾಸಗಿ ವಲಯವು ಈ ಕ್ಷೇತ್ರದಲ್ಲಿ ದೊಡ್ಡ ಅಸ್ತಿತ್ವವನ್ನು ಸಾಧಿಸುವಂತೆ ಶನಿವಾರ ಒತ್ತಾಯಿಸಿದ್ದಾರೆ.

ಆರೋಗ್ಯ ಕ್ಷೇತ್ರದ ಕುರಿತು ಒಕ್ಕೂಟ ಸರ್ಕಾರದ ಬಜೆಟ್ ಘೋಷಣೆಗಳ ಕುರಿತು ವೆಬ್‌ನಾರ್‌ನಲ್ಲಿ ಮಾತನಾಡಿದ ಮೋದಿ, “ವೈದ್ಯಕೀಯ ಶಿಕ್ಷಣಕ್ಕೆ ಭೂಮಿ ಹಂಚಿಕೆಗಾಗಿ ರಾಜ್ಯ ಸರ್ಕಾರಗಳು ‘ಉತ್ತಮ ನೀತಿಗಳನ್ನು’ ರೂಪಿಸಬೇಕು, ಇದರಿಂದ ಭಾರತವು ಜಾಗತಿಕ ಬೇಡಿಕೆಯನ್ನು ಪೂರೈಸಲು ಹೆಚ್ಚಿನ ಸಂಖ್ಯೆಯ ವೈದ್ಯರು ಮತ್ತು ಅರೆವೈದ್ಯರನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ” ಎಂದು ಸಲಹೆ ನೀಡಿದ್ದಾರೆ.

ಭಾರತದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವವರು ರಷ್ಯಾ ನಡೆಸುತ್ತಿರುವ ದಾಳಿಯಿಂದಾಗಿ ಉಕ್ರೇನ್‌‌ನಲ್ಲಿ ಸಿಲುಕಿಕೊಂಡಿದ್ದಾರೆ. ಈ ಸಮಯದಲ್ಲಿ ಪ್ರಧಾನಿಯ ಈ ಹೇಳಿಕೆಗಳು ಬಹಳ ಪ್ರಾಮುಖ್ಯತೆ ಪಡೆದಿವೆ. ಆದರೆ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಎರಡು ದೇಶಗಳ ನಡುವೆ ನಡೆಯುತ್ತಿವ ಬಿಕ್ಕಟ್ಟಿನ ಬಗ್ಗೆ ನೇರವಾಗಿ ಪ್ರಸ್ತಾಪಿಸಲಿಲ್ಲ.

ಭಾರತೀಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ಶಿಕ್ಷಣದ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ, ಇದರಿಂದಾಗಿ ನೂರಾರು ಶತಕೋಟಿ ರೂಪಾಯಿಗಳು ದೇಶದಿಂದ ಹೊರದೇಶಕ್ಕೆ ಹರಿಯುತ್ತಿವೆ ಎಂದು ಪ್ರಧಾನಿ ಹೇಳಿದ್ದಾರೆ.

“ಇಂದು ನಮ್ಮ ಮಕ್ಕಳು ಅಧ್ಯಯನಕ್ಕಾಗಿ ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಸಣ್ಣ ದೇಶಗಳಿಗೆ ಹೋಗುತ್ತಿದ್ದಾರೆ. ಅಲ್ಲಿ ಭಾಷೆಯ ಸಮಸ್ಯೆ ಇದ್ದರೂ, ಅಲ್ಲಿಗೆ ಹೋಗುತ್ತಿದ್ದಾರೆ… ನಮ್ಮ ದೇಶದ ಖಾಸಗಿ ಕ್ಷೇತ್ರವು ಈ ಕ್ಷೇತ್ರವನ್ನು ದೊಡ್ಡ ರೀತಿಯಲ್ಲಿ ಪ್ರವೇಶಿಸಲು ಸಾಧ್ಯವಿಲ್ಲವೇ? ನಮ್ಮ ರಾಜ್ಯ ಸರ್ಕಾರಗಳು ಈ ಬಗ್ಗೆ ಭೂ ಮಂಜೂರಾತಿಗೆ ಒಳ್ಳೆಯ ನೀತಿಯನ್ನು ರೂಪಿಸುವುದಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಕಳೆದ ಹಲವು ದಶಕಗಳಲ್ಲಿ ಭಾರತೀಯ ವೈದ್ಯರು ತಮ್ಮ ಕೆಲಸದಿಂದ ವಿಶ್ವದಾದ್ಯಂತ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜನರಿಗೆ ಗುಣಮಟ್ಟದ ಆರೋಗ್ಯ ಮತ್ತು ಕ್ಷೇಮ ಸೇವೆಗಳನ್ನು ಒದಗಿಸಲು ತನ್ನ ಸರ್ಕಾರ ಪ್ರಯತ್ನ ಮಾಡಿದೆ ಎಂದು ಮೋದಿ ಹೇಲಿದ್ದಾರೆ.

ಸರ್ಕಾರವು ‘ಒಂದು ಭಾರತ ಒಂದು ಆರೋಗ್ಯ’ ಎಂಬ ಮನೋಭಾವದಿಂದ ಕೆಲಸ ಮಾಡುತ್ತಿದೆ, ಇದರಿಂದ ದೂರದ ಸ್ಥಳಗಳಲ್ಲಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುತ್ತಿದೆ. ಗುಣಮಟ್ಟದ ಆರೋಗ್ಯ ಸೌಲಭ್ಯವು ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮಾನ್ಯ ಪ್ರಧಾನೀಯವರೇ ಭಾರತದಲ್ಲಿ ಒಂದು ವರ್ಷಕ್ಕೆ ಕಟ್ಟಲಾಗುವ ಫೀಸಿನಲ್ಲಿ ಸಣ್ಣಪುಟ್ಟ ರಾಷ್ಟ್ರಗಳಿಗೆ ಹೋದರೆ ವೈದ್ಯಕೀಯ ಶಿಕ್ಷಣವೇ ಮುಗಿಸಿ ಬರಬಹುದು

  2. ಈವಯ್ಯನಿಗೆ ವೈದ್ಯಕೀಯ ವಿಧ್ಯಾರ್ಥಿಗಳು ಸಣ್ಣ ಸಣ್ಣ ದೇಶಕ್ಕೆ ಹೋಗ್ತಾರೆ ಅಂತಾ ಇನ್ನೂ ತಿಳಿದಿಲ್ಲಾ… ಇಲ್ಲಿ ಸರಕಾರಿ ಸೀಟುಗಳಿರೋದು ಬರೀ‌ ೨೦೫೫. ಮತ್ತು ಖಾಸಗೀ ಕಾಲೆಜುಗಳದು ೩೦೦೦ ಸೀಟುಗಳು.. ಖಾಸಗೀ ಕಾಲೆಝುಗಳಲ್ಲಿ ವರುಷಕ್ಕೆ ಫ಼ೀಸು ೧೫೦೦೦೦೦. ಇದನ್ನ ತುಂಬಲು ಆಗದೆ ಸಣ್ಣ ಸಣ್ಣ ದೇಶಗಳಿಗೆ ಕಲಿಲಿಕ್ಕೆ ಹೋಗ್ತಾರೆ ಈ ಚಿಕ್ಕ ವಿಷಯ ಈವಯ್ಯನಿಗೆ ಗೊತ್ತಾಗದೇ ಮತ್ತೆ ಖಾಸಗಿ ಕ್ಷೇತ್ರಗಳಿಗೆ ಕಾಲೇಕಾಲೇ ಉ ತೆರೆಯಲು ಹೇಳ್ತಾ ಇದ್ದರೆ ಯಾಕೊ ಇವರಿಗೆ ಖಾಸಗಿ ಕ್ಷೇತ್ರಗಳ ಮೇಲೆ ಬಾಳ‌ ಪ್ರೀತಿ ಇದ್ದಂಗೈತೆ.

    ಯಾಕೆ ಇವರೇ ಅಂದ್ರೆ ಸರಕಾರದವರೇ ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನ ಪ್ರಾರಂಭಿಸಬಾರದು..?

  3. ಮೋದಿ ಜಿ ಯವರ ಅಜಂಡವೇ ಭಾರತದಲ್ಲಿ ಎಲ್ಲವನ್ನು ಖಾಸಗೀಕರಣ ಮಾಡುವುದು ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...