Homeಮುಖಪುಟಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

ಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

- Advertisement -
- Advertisement -

ಭಾಷೆಯ ಅಡೆತಡೆಯ ನಡುವೆಯೂ ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ಅನೇಕ ಸಣ್ಣ ದೇಶಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿರುವ ಪ್ರಧಾನಿ ಮೋದಿ, ಖಾಸಗಿ ವಲಯವು ಈ ಕ್ಷೇತ್ರದಲ್ಲಿ ದೊಡ್ಡ ಅಸ್ತಿತ್ವವನ್ನು ಸಾಧಿಸುವಂತೆ ಶನಿವಾರ ಒತ್ತಾಯಿಸಿದ್ದಾರೆ.

ಆರೋಗ್ಯ ಕ್ಷೇತ್ರದ ಕುರಿತು ಒಕ್ಕೂಟ ಸರ್ಕಾರದ ಬಜೆಟ್ ಘೋಷಣೆಗಳ ಕುರಿತು ವೆಬ್‌ನಾರ್‌ನಲ್ಲಿ ಮಾತನಾಡಿದ ಮೋದಿ, “ವೈದ್ಯಕೀಯ ಶಿಕ್ಷಣಕ್ಕೆ ಭೂಮಿ ಹಂಚಿಕೆಗಾಗಿ ರಾಜ್ಯ ಸರ್ಕಾರಗಳು ‘ಉತ್ತಮ ನೀತಿಗಳನ್ನು’ ರೂಪಿಸಬೇಕು, ಇದರಿಂದ ಭಾರತವು ಜಾಗತಿಕ ಬೇಡಿಕೆಯನ್ನು ಪೂರೈಸಲು ಹೆಚ್ಚಿನ ಸಂಖ್ಯೆಯ ವೈದ್ಯರು ಮತ್ತು ಅರೆವೈದ್ಯರನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ” ಎಂದು ಸಲಹೆ ನೀಡಿದ್ದಾರೆ.

ಭಾರತದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವವರು ರಷ್ಯಾ ನಡೆಸುತ್ತಿರುವ ದಾಳಿಯಿಂದಾಗಿ ಉಕ್ರೇನ್‌‌ನಲ್ಲಿ ಸಿಲುಕಿಕೊಂಡಿದ್ದಾರೆ. ಈ ಸಮಯದಲ್ಲಿ ಪ್ರಧಾನಿಯ ಈ ಹೇಳಿಕೆಗಳು ಬಹಳ ಪ್ರಾಮುಖ್ಯತೆ ಪಡೆದಿವೆ. ಆದರೆ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಎರಡು ದೇಶಗಳ ನಡುವೆ ನಡೆಯುತ್ತಿವ ಬಿಕ್ಕಟ್ಟಿನ ಬಗ್ಗೆ ನೇರವಾಗಿ ಪ್ರಸ್ತಾಪಿಸಲಿಲ್ಲ.

ಭಾರತೀಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ಶಿಕ್ಷಣದ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ, ಇದರಿಂದಾಗಿ ನೂರಾರು ಶತಕೋಟಿ ರೂಪಾಯಿಗಳು ದೇಶದಿಂದ ಹೊರದೇಶಕ್ಕೆ ಹರಿಯುತ್ತಿವೆ ಎಂದು ಪ್ರಧಾನಿ ಹೇಳಿದ್ದಾರೆ.

“ಇಂದು ನಮ್ಮ ಮಕ್ಕಳು ಅಧ್ಯಯನಕ್ಕಾಗಿ ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಸಣ್ಣ ದೇಶಗಳಿಗೆ ಹೋಗುತ್ತಿದ್ದಾರೆ. ಅಲ್ಲಿ ಭಾಷೆಯ ಸಮಸ್ಯೆ ಇದ್ದರೂ, ಅಲ್ಲಿಗೆ ಹೋಗುತ್ತಿದ್ದಾರೆ… ನಮ್ಮ ದೇಶದ ಖಾಸಗಿ ಕ್ಷೇತ್ರವು ಈ ಕ್ಷೇತ್ರವನ್ನು ದೊಡ್ಡ ರೀತಿಯಲ್ಲಿ ಪ್ರವೇಶಿಸಲು ಸಾಧ್ಯವಿಲ್ಲವೇ? ನಮ್ಮ ರಾಜ್ಯ ಸರ್ಕಾರಗಳು ಈ ಬಗ್ಗೆ ಭೂ ಮಂಜೂರಾತಿಗೆ ಒಳ್ಳೆಯ ನೀತಿಯನ್ನು ರೂಪಿಸುವುದಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಕಳೆದ ಹಲವು ದಶಕಗಳಲ್ಲಿ ಭಾರತೀಯ ವೈದ್ಯರು ತಮ್ಮ ಕೆಲಸದಿಂದ ವಿಶ್ವದಾದ್ಯಂತ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜನರಿಗೆ ಗುಣಮಟ್ಟದ ಆರೋಗ್ಯ ಮತ್ತು ಕ್ಷೇಮ ಸೇವೆಗಳನ್ನು ಒದಗಿಸಲು ತನ್ನ ಸರ್ಕಾರ ಪ್ರಯತ್ನ ಮಾಡಿದೆ ಎಂದು ಮೋದಿ ಹೇಲಿದ್ದಾರೆ.

ಸರ್ಕಾರವು ‘ಒಂದು ಭಾರತ ಒಂದು ಆರೋಗ್ಯ’ ಎಂಬ ಮನೋಭಾವದಿಂದ ಕೆಲಸ ಮಾಡುತ್ತಿದೆ, ಇದರಿಂದ ದೂರದ ಸ್ಥಳಗಳಲ್ಲಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುತ್ತಿದೆ. ಗುಣಮಟ್ಟದ ಆರೋಗ್ಯ ಸೌಲಭ್ಯವು ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮಾನ್ಯ ಪ್ರಧಾನೀಯವರೇ ಭಾರತದಲ್ಲಿ ಒಂದು ವರ್ಷಕ್ಕೆ ಕಟ್ಟಲಾಗುವ ಫೀಸಿನಲ್ಲಿ ಸಣ್ಣಪುಟ್ಟ ರಾಷ್ಟ್ರಗಳಿಗೆ ಹೋದರೆ ವೈದ್ಯಕೀಯ ಶಿಕ್ಷಣವೇ ಮುಗಿಸಿ ಬರಬಹುದು

  2. ಈವಯ್ಯನಿಗೆ ವೈದ್ಯಕೀಯ ವಿಧ್ಯಾರ್ಥಿಗಳು ಸಣ್ಣ ಸಣ್ಣ ದೇಶಕ್ಕೆ ಹೋಗ್ತಾರೆ ಅಂತಾ ಇನ್ನೂ ತಿಳಿದಿಲ್ಲಾ… ಇಲ್ಲಿ ಸರಕಾರಿ ಸೀಟುಗಳಿರೋದು ಬರೀ‌ ೨೦೫೫. ಮತ್ತು ಖಾಸಗೀ ಕಾಲೆಜುಗಳದು ೩೦೦೦ ಸೀಟುಗಳು.. ಖಾಸಗೀ ಕಾಲೆಝುಗಳಲ್ಲಿ ವರುಷಕ್ಕೆ ಫ಼ೀಸು ೧೫೦೦೦೦೦. ಇದನ್ನ ತುಂಬಲು ಆಗದೆ ಸಣ್ಣ ಸಣ್ಣ ದೇಶಗಳಿಗೆ ಕಲಿಲಿಕ್ಕೆ ಹೋಗ್ತಾರೆ ಈ ಚಿಕ್ಕ ವಿಷಯ ಈವಯ್ಯನಿಗೆ ಗೊತ್ತಾಗದೇ ಮತ್ತೆ ಖಾಸಗಿ ಕ್ಷೇತ್ರಗಳಿಗೆ ಕಾಲೇಕಾಲೇ ಉ ತೆರೆಯಲು ಹೇಳ್ತಾ ಇದ್ದರೆ ಯಾಕೊ ಇವರಿಗೆ ಖಾಸಗಿ ಕ್ಷೇತ್ರಗಳ ಮೇಲೆ ಬಾಳ‌ ಪ್ರೀತಿ ಇದ್ದಂಗೈತೆ.

    ಯಾಕೆ ಇವರೇ ಅಂದ್ರೆ ಸರಕಾರದವರೇ ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನ ಪ್ರಾರಂಭಿಸಬಾರದು..?

  3. ಮೋದಿ ಜಿ ಯವರ ಅಜಂಡವೇ ಭಾರತದಲ್ಲಿ ಎಲ್ಲವನ್ನು ಖಾಸಗೀಕರಣ ಮಾಡುವುದು ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...