Homeಕರ್ನಾಟಕಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

’ಇರುವ ಅತಿ ಹಿಂದುಳಿದ ಜಾತಿಗಳೇ ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜನರಿಗೆ ತೊಂದರೆ ಉಂಟಾಗುತ್ತದೆ’

- Advertisement -
- Advertisement -

ಪ್ರಬಲ ಜಾತಿಗಳನ್ನು 2(ಎ) ಸಮುದಾಯಕ್ಕೆ ಸೇರ್ಪಡೆಗೊಳಿಸಬಾರದು ಮತ್ತು ಈ ಬಗ್ಗೆ ರಚನೆ ಮಾಡಿರುವ ಉನ್ನತ ಮಟ್ಟದ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅತಿ ಹಿಂದುಳಿದ ವರ್ಗಗಳ ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪಗೆ ಮನವಿ ಸಲ್ಲಿಸಿದೆ.

ಪ್ರಬಲ ಜಾತಿಗಳಿಗೆ ಆಯವ್ಯಯದಲ್ಲಿ ನೀಡಿರುವ ಅನುದಾನದ ರೀತಿಯಲ್ಲಿಯೇ ಅತಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಲಾಗಿದೆ. ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ. ಎಸ್‌.ಯಡಿಯೂರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದೆ.

ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ನೇತೃತ್ವದ ನಿಯೋಗ ಪ್ರಮುಖರನ್ನು ಭೇಟಿಯಾಗಿ ತನ್ನ ಮನವಿಯನ್ನು ಸಲ್ಲಿಸಿತು.

ಇದನ್ನೂ ಓದಿ: ಮೀಸಲಾತಿ ಬೇಡಿಕೆ ಪರಿಶೀಲಿಸಲು ತ್ರಿಸದಸ್ಯ ಸಮಿತಿ ರಚನೆ- ಬಸವರಾಜ ಬೊಮ್ಮಾಯಿ

’ಪ್ರವರ್ಗ 2(ಎ) ಗೆ ಸೇರ್ಪಡೆಗೊಳಿಸುವಂತೆ ಹಲವಾರು ಪ್ರಬಲ ಸಮುದಾಯಗಳು ತಮ್ಮ ಬಲಪ್ರದರ್ಶನ ಮಾಡುತ್ತಿವೆ. ಇರುವ ಹಲವಾರು ಅತಿ ಹಿಂದುಳಿದ ಜಾತಿಗಳು ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜಾತಿ ಜನರಿಗೆ ತೊಂದರೆ ಉಂಟಾಗುತ್ತದೆ’ ಎಂದು ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್‌ ಮಾತನಾಡಿ, ಪ್ರವರ್ಗ 2(ಎ) ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ಅಲ್ಲದೆ ಈಗಾಗಲೇ ಸಿದ್ದಗೊಂಡಿರುವ ಜಾತೀವಾರು ಸಮೀಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಪ್ರವರ್ಗ 2(ಎ) ದಲ್ಲಿರುವ ಜಾತಿಗಳಿಗೆ ರಕ್ಷಣೆ ನೀಡಿ’ ಎಂದು ಮನವಿ ಮಾಡಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ನಿಯೋಗದ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಈಗಾಗಲೇ ತಮ್ಮ ಬಜೆಟ್‌ ನಲ್ಲಿ ಘೋಷಣೆ ಮಾಡಿರುವ ಜೊತೆಗೆ ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ನೀಡುವ ಹಾಗೂ ಇನ್ನಿತರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ನಿಯೋಗ ತಿಳಿಸಿದೆ.

ಮಾಜಿ ಸಭಾಪತಿ ಶ್ರೀ ವಿ. ಆರ್. ಸುದರ್ಶನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರುಗಳಾದ ಡಾ. ಸಿ.ಎಸ್.ದ್ವಾರಕಾನಾಥ್, ಪ್ರೊ. ನರಸಿಂಹಯ್ಯ, ವಿಧಾನಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಕೆ.ಪಿ ನಂಜುಂಡಿ ಉಪಸ್ಥಿತರಿದ್ದರು.


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತಿ ಹಿಂದುಳಿದ ವರ್ಗ ಯಾವುದು ಸ್ವಾಮಿ!!!!!

    ಓದಲು ಹಣವಿಲ್ಲದ ಬ್ರಾಹ್ಮಣ ಹುಡುಗ ಅಲ್ಲ,

    ಹಣವಿಲ್ಲದೆ ಬೆಳೆಗೆ ಬೆಲೆ ಇಲ್ಲದೆ ಸಾಲ ಮಾಡಿ ಸಾಯುತ್ತಿರುವ ಲಿಂಗಾಯತ ರೈತನಲ್ಲ,

    ಕಾರ್ ಬಂಗಲೆ ಕಟ್ಟಿಕೊಂಡಿರುವ, ಎಲ್ಲವನ್ನು ಉಚಿತವಾಗಿ ಪಡೆಯುವ, ಭಾರತೀಯ ಸರ್ಕಾರ ಒದಗಿಸುವ ಪ್ರತಿ ಸೌಲಭ್ಯಕ್ಕೂ ಹಕ್ಕುದಾರರಾಗಿರುವ ಆಆಆ ವ್ಯಕ್ತಿ.. ಹೌದೇ!!!!!!

    ಬಡವನಿಗೆ ಸೌಲಭ್ಯ ದೊರೆಯದಿದ್ದರೂ ಕುಟುಂಬದ ಹಿನ್ನೆಲೆಯಿಂದ ಶ್ರೀಮಂತರಿಗೂ ಸೌಲಭ್ಯ ದೊರೆಯುವ ಭಾರತ…
    ಕೂಳಿಗೆ ಹಣವಿಲ್ಲದವನು ಟ್ಯಾಕ್ಸ್ ಪಾವತಿಸಿ ಆ ಶ್ರೀಮಂತನಿಗೆ ಸಹಾಯ ಮಾಡುವ ಭಾರತ…

    ಧನ್ಯ ಭಾರತ ಮಾತೆ ನೀನೆ ಧನ್ಯ..

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...