Homeಕರ್ನಾಟಕಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

’ಇರುವ ಅತಿ ಹಿಂದುಳಿದ ಜಾತಿಗಳೇ ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜನರಿಗೆ ತೊಂದರೆ ಉಂಟಾಗುತ್ತದೆ’

- Advertisement -
- Advertisement -

ಪ್ರಬಲ ಜಾತಿಗಳನ್ನು 2(ಎ) ಸಮುದಾಯಕ್ಕೆ ಸೇರ್ಪಡೆಗೊಳಿಸಬಾರದು ಮತ್ತು ಈ ಬಗ್ಗೆ ರಚನೆ ಮಾಡಿರುವ ಉನ್ನತ ಮಟ್ಟದ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅತಿ ಹಿಂದುಳಿದ ವರ್ಗಗಳ ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪಗೆ ಮನವಿ ಸಲ್ಲಿಸಿದೆ.

ಪ್ರಬಲ ಜಾತಿಗಳಿಗೆ ಆಯವ್ಯಯದಲ್ಲಿ ನೀಡಿರುವ ಅನುದಾನದ ರೀತಿಯಲ್ಲಿಯೇ ಅತಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಆಗ್ರಹಿಸಲಾಗಿದೆ. ವೇದಿಕೆಯ ನಿಯೋಗ ಮುಖ್ಯಮಂತ್ರಿ ಬಿ. ಎಸ್‌.ಯಡಿಯೂರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದೆ.

ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ನೇತೃತ್ವದ ನಿಯೋಗ ಪ್ರಮುಖರನ್ನು ಭೇಟಿಯಾಗಿ ತನ್ನ ಮನವಿಯನ್ನು ಸಲ್ಲಿಸಿತು.

ಇದನ್ನೂ ಓದಿ: ಮೀಸಲಾತಿ ಬೇಡಿಕೆ ಪರಿಶೀಲಿಸಲು ತ್ರಿಸದಸ್ಯ ಸಮಿತಿ ರಚನೆ- ಬಸವರಾಜ ಬೊಮ್ಮಾಯಿ

’ಪ್ರವರ್ಗ 2(ಎ) ಗೆ ಸೇರ್ಪಡೆಗೊಳಿಸುವಂತೆ ಹಲವಾರು ಪ್ರಬಲ ಸಮುದಾಯಗಳು ತಮ್ಮ ಬಲಪ್ರದರ್ಶನ ಮಾಡುತ್ತಿವೆ. ಇರುವ ಹಲವಾರು ಅತಿ ಹಿಂದುಳಿದ ಜಾತಿಗಳು ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜಾತಿ ಜನರಿಗೆ ತೊಂದರೆ ಉಂಟಾಗುತ್ತದೆ’ ಎಂದು ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್‌ ಮಾತನಾಡಿ, ಪ್ರವರ್ಗ 2(ಎ) ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ಅಲ್ಲದೆ ಈಗಾಗಲೇ ಸಿದ್ದಗೊಂಡಿರುವ ಜಾತೀವಾರು ಸಮೀಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಪ್ರವರ್ಗ 2(ಎ) ದಲ್ಲಿರುವ ಜಾತಿಗಳಿಗೆ ರಕ್ಷಣೆ ನೀಡಿ’ ಎಂದು ಮನವಿ ಮಾಡಿದ್ದಾರೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ನಿಯೋಗದ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಈಗಾಗಲೇ ತಮ್ಮ ಬಜೆಟ್‌ ನಲ್ಲಿ ಘೋಷಣೆ ಮಾಡಿರುವ ಜೊತೆಗೆ ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ನೀಡುವ ಹಾಗೂ ಇನ್ನಿತರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ನಿಯೋಗ ತಿಳಿಸಿದೆ.

ಮಾಜಿ ಸಭಾಪತಿ ಶ್ರೀ ವಿ. ಆರ್. ಸುದರ್ಶನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರುಗಳಾದ ಡಾ. ಸಿ.ಎಸ್.ದ್ವಾರಕಾನಾಥ್, ಪ್ರೊ. ನರಸಿಂಹಯ್ಯ, ವಿಧಾನಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಕೆ.ಪಿ ನಂಜುಂಡಿ ಉಪಸ್ಥಿತರಿದ್ದರು.


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತಿ ಹಿಂದುಳಿದ ವರ್ಗ ಯಾವುದು ಸ್ವಾಮಿ!!!!!

    ಓದಲು ಹಣವಿಲ್ಲದ ಬ್ರಾಹ್ಮಣ ಹುಡುಗ ಅಲ್ಲ,

    ಹಣವಿಲ್ಲದೆ ಬೆಳೆಗೆ ಬೆಲೆ ಇಲ್ಲದೆ ಸಾಲ ಮಾಡಿ ಸಾಯುತ್ತಿರುವ ಲಿಂಗಾಯತ ರೈತನಲ್ಲ,

    ಕಾರ್ ಬಂಗಲೆ ಕಟ್ಟಿಕೊಂಡಿರುವ, ಎಲ್ಲವನ್ನು ಉಚಿತವಾಗಿ ಪಡೆಯುವ, ಭಾರತೀಯ ಸರ್ಕಾರ ಒದಗಿಸುವ ಪ್ರತಿ ಸೌಲಭ್ಯಕ್ಕೂ ಹಕ್ಕುದಾರರಾಗಿರುವ ಆಆಆ ವ್ಯಕ್ತಿ.. ಹೌದೇ!!!!!!

    ಬಡವನಿಗೆ ಸೌಲಭ್ಯ ದೊರೆಯದಿದ್ದರೂ ಕುಟುಂಬದ ಹಿನ್ನೆಲೆಯಿಂದ ಶ್ರೀಮಂತರಿಗೂ ಸೌಲಭ್ಯ ದೊರೆಯುವ ಭಾರತ…
    ಕೂಳಿಗೆ ಹಣವಿಲ್ಲದವನು ಟ್ಯಾಕ್ಸ್ ಪಾವತಿಸಿ ಆ ಶ್ರೀಮಂತನಿಗೆ ಸಹಾಯ ಮಾಡುವ ಭಾರತ…

    ಧನ್ಯ ಭಾರತ ಮಾತೆ ನೀನೆ ಧನ್ಯ..

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...